ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯ ಪ್ರಯುಕ್ತ ದಿನಾಂಕ 01 ಸೆಪ್ಟೆಂಬರ್ 2025ರಂದು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ‘ಮಾಗಧ ವಧೆ’ ಆಖ್ಯಾನದೊಂದಿಗೆ ನಡೆಯಿತು.
ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀ ಕೃಷ್ಣ), ಮಾಗಧ (ಗುಡ್ಡಪ್ಪ ಬಲ್ಯ), ಮಾಂಬಾಡಿ ವೇಣುಗೋಪಾಲ ಭಟ್ (ಭೀಮ), ಅಚ್ಯುತ ಪಾಂಗಣ್ಣಾಯ (ಅರ್ಜುನ) ಸಹಕರಿಸಿದರು. ಗೌರವ ಕಾರ್ಯದರ್ಶಿ ರಂಗನಾಥ ರಾವ್ ವಂದಿಸಿದರು.