Subscribe to Updates

    Get the latest creative news from FooBar about art, design and business.

    What's Hot

    ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಅನಂತ ಪ್ರಭು ನಿಧನ

    September 6, 2025

    ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನ ಕುಮಾರ ಐತಾಳ್ ಆಯ್ಕೆ

    September 6, 2025

    ಕ.ಸಾ.ಪ.ದಲ್ಲಿ ಕವಿ ಲಕ್ಷ್ಮೀಶನ ಜೈಮಿನಿ ಭಾರತದ ಗಮಕ ವಾಚನ ವ್ಯಾಖ್ಯಾನ

    September 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ’ಗಾಗಿ ಜನಾರ್ದನ (ಜನ್ನಿ) ಮತ್ತು ಶೂದ್ರ ಶ್ರೀನಿವಾಸ್ ಆಯ್ಕೆ
    Awards

    ‘ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ’ಗಾಗಿ ಜನಾರ್ದನ (ಜನ್ನಿ) ಮತ್ತು ಶೂದ್ರ ಶ್ರೀನಿವಾಸ್ ಆಯ್ಕೆ

    September 6, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಶ್ರವಣಬೆಳಗೊಳದಲ್ಲಿ ನಡೆದ 81ನಯೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇನದ ಸವಿನೆನಪಿಗಾಗಿ ಸಮ್ಮೇಳನಾಧ್ಯಕ್ಷರಾದ ಡಾ. ಸಿದ್ಧಲಿಂಗಯ್ಯವರ ಹೆಸರಿನಲ್ಲಿ ಸ್ಥಾಪಿತವಾಗಿರುವ ‘ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ’ ಪುರಸ್ಕಾರಕ್ಕೆ 2024ನೆಯ ಸಾಲಿಗೆ ಜನಪದ ಗಾಯಕ ಎಚ್. ಜನಾರ್ದನ್ (ಜನ್ನಿ) ಮತ್ತು 2025ನೆಯ ಸಾಲಿಗೆ ಶೂದ್ರ ಶ್ರೀನಿವಾಸ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ. ಡಾ. ಸಿದ್ಧಲಿಂಗಯ್ಯನವರ ತಾತ್ವಿಕತೆಯನ್ನು ಸಮರ್ಥವಾಗಿ ವಿವಿಧ ಮಾಧ್ಯಮಗಳ ಮೂಲಕ ಸಮರ್ಥವಾಗಿ ಬಿಂಬಿಸುತ್ತಿರುವ ಸಾಧಕರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.

    2024ನೆಯ ಸಾಲಿನ ‘ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ’ ಪುರಸ್ಕಾರಕ್ಕೆ ಪಾತ್ರರಾಗಿರುವ ಎಚ್. ಜನಾರ್ದನ (ಜನ್ನಿ)ಯವರು ಸುಮಾರು ನಾಲ್ಕೂವರೆ ದಶಕಗಳಿಂದ ರಂಗಭೂಮಿಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡವರು. ಹಲವು ಪ್ರಮುಖ ನಾಟಕಗಳನ್ನು ನಿರ್ದೇಶಿಸಿರುವ ಅವರು ಬೀದಿ ನಾಟಕ ಚಳುವಳಿಯಲ್ಲಿ, ಕಾವ್ಯರಂಗ ಪ್ರಯೋಗದಲ್ಲಿ ತಮ್ಮ ವಿಶಿಷ್ಟತೆಯನ್ನು ಮರೆದಿದ್ದಾರೆ. ‘ಬರ’ ಚಿತ್ರದ ಮೂಲಕ ಚಲನಚಿತ್ರ ಕ್ಷೇತ್ರವನ್ನು ಪ್ರವೇಶ ಮಾಡಿ ಅಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ‘ಜನಮನದ ಜನ್ನಿ’ ಎಂದೇ ಹೆಸರಾಗಿರುವ ಇವರು ಸಿದ್ಧಲಿಂಗಯ್ಯನವರ ಕವಿತೆಗಳನ್ನು ಗಾಯನದ ಮೂಲಕ ಜನಮನಕ್ಕೆ ತಲುಪಿಸಿದ ಸಾಧನೆಯನ್ನು ಗಮನಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

    2025ನೆಯ ಸಾಲಿನ ‘ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ’ ಪುರಸ್ಕಾರಕ್ಕೆ ಪಾತ್ರರಾಗಿರುವ ಶೂದ್ರ ಶ್ರೀನಿವಾಸ್ ‘ಶೂದ್ರ’ ಸಾಹಿತ್ಯ ಪತ್ರಿಕೆಯ ಮೂಲಕ ಜನಪ್ರಿಯರಾದವರು. ಸಂವೇದನಾಶೀಲ ಬರಹಗಾರರಾದ ಅವರು ನಿರಂತರ ಹೋರಾಟಗಾರರು. ಶೂದ್ರ, ಸಲ್ಲಾಪ, ನೆಲದ ಮಾತು ಪತ್ರಿಕೆಗಳನ್ನು ಪ್ರಕಟಿಸಿದ ಹೆಗ್ಗಳಿಕೆಯ ಅವರು ಕರ್ನಾಟಕದ ಪ್ರಮುಖ ಚಳುವಳಿಗಳ ಜೊತೆಗೆ ಸದಾ ಇದ್ದವರು. ಮಾನವ ಸಂಬಂಧಗಳ ವೃದ್ಧಿಗಾಗಿ ‘ಬೋಧಿವೃಕ್ಷ’ ಎಂಬ ಸಂಸ್ಥೆಯನ್ನು ಆರಂಭಿಸಿ ಅದರ ಮೂಲಕ ಹಲವು ಪ್ರಮುಖ ಕಾರ್ಯಕ್ರಮಗಳನ್ನು ನಡೆಸಿದರು. ಲಂಕೇಶ್ ಪತ್ರಿಕೆಯ ಅಂಕಣಕಾರರಾಗಿ ಹೆಸರು ಮಾಡಿರುವ ಅವರು ಡಾ. ಸಿದ್ಧಲಿಂಗಯ್ಯನವರ ಮೊದಲ ಕೃತಿ ಸೇರಿದಂತೆ ಹಲವು ಪ್ರಮುಖ ಕೃತಿಗಳನ್ನು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಇವರನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

    ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದಲ್ಲಿ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಡಾ. ಸಿದ್ಧಲಿಂಗಯ್ಯನವರ ಶ್ರೀಮತಿ ರಮಾಕುಮಾರಿ, ಮಗಳು ಡಾ. ಮಾನಸ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ.ಎಂ. ಪಟೇಲ್ ಪಾಂಡು, ಎಚ್.ಬಿ. ಮದನ ಗೌಡ, ಗೌರವ ಕೋಶಾಧ್ಯಕ್ಷರಾದ ಡಿ.ಆರ್. ವಿಜಯ ಕುಮಾರ್ ಭಾಗವಹಿಸಿದ್ದರು. ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ ಪುರಸ್ಕಾರಕ್ಕೆ ಪಾತ್ರರಾಗಿರುವ ಜನಾರ್ದನ್ ಎಚ್. (ಜನ್ನಿ) ಮತ್ತು ಶೂದ್ರ ಶ್ರೀನಿವಾಸ್ ಇವರನ್ನು ವಿಶೇಷವಾಗಿ ಅಭಿನಂದಿಸಿರುವ ನಾಡೋಜ ಡಾ. ಮಹೇಶ ಜೋಶಿಯವರು ಅವರಿಂದ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಇನ್ನಷ್ಟು ಕೊಡುಗೆಗಳು ಲಭಿಸಲಿ ಎಂದು ಆಶಿಸಿದ್ದಾರೆ. ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಶ್ರವಣಬೆಳಗೊಳದ ಶ್ರೀ ಚಾವುಂಡರಾಯ ಸಭಾಂಗಣದಲ್ಲಿ ದಿನಾಂಕ 18 ಸೆಪ್ಟೆಂಬರ್ 2025ರಂದು ನಡೆಯಲಿದೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಳವಳ್ಳಿಯಲ್ಲಿ ‘ಮಳವಳ್ಳಿ ಸುಂದರಮ್ಮ ನಾಟಕೋತ್ಸವ 2025-26’ | ಸೆಪ್ಟೆಂಬರ್ 09ರಿಂದ 15
    Next Article ಶಕ್ತಿನಗರದ ಕಲಾಂಗಣನಲ್ಲಿ ‘ಹೊ ತೊ ತೊ ಹೊ’ ಕೊಂಕಣಿ ನಾಟಕ ಪ್ರದರ್ಶನ | ಸೆಪ್ಟೆಂಬರ್ 07
    roovari

    Add Comment Cancel Reply


    Related Posts

    ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಅನಂತ ಪ್ರಭು ನಿಧನ

    September 6, 2025

    ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನ ಕುಮಾರ ಐತಾಳ್ ಆಯ್ಕೆ

    September 6, 2025

    ಕ.ಸಾ.ಪ.ದಲ್ಲಿ ಕವಿ ಲಕ್ಷ್ಮೀಶನ ಜೈಮಿನಿ ಭಾರತದ ಗಮಕ ವಾಚನ ವ್ಯಾಖ್ಯಾನ

    September 6, 2025

    ಎನ್.ಐ.ಟಿ.ಕೆ.ಯಲ್ಲಿ ‘ಗಂಧರ್ವ ನರ್ತನ’ ಭರತನಾಟ್ಯ ಪ್ರದರ್ಶನ | ಸೆಪ್ಟೆಂಬರ್ 10

    September 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.