Subscribe to Updates

    Get the latest creative news from FooBar about art, design and business.

    What's Hot

    ಗೋಕರ್ಣದಲ್ಲಿ ಚಿತ್ರಕಲೆ ಹಾಗೂ ರಂಗೋಲಿ ಶಿಬಿರ | ಸೆಪ್ಟೆಂಬರ್ 10

    September 9, 2025

    ಉಡುಪಿ ಪುರಭವನದಲ್ಲಿ ವಿಚಾರಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಸೆಪ್ಟೆಂಬರ್ 13

    September 9, 2025

    ತೆಕ್ಕಟ್ಟೆಯಲ್ಲಿ ‘ರಾಜಾರುದ್ರಕೋಪ’ ಯಕ್ಷಗಾನ ಪ್ರದರ್ಶನ

    September 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಂಗಡಿಯಲ್ಲಿ ಶ್ರೀ ಮಹಾಭಾರತ ಸರಣಿ ಸುವರ್ಣ ಶತಕ ತಾಳಮದ್ದಳೆ ಕಾರ್ಯಕ್ರಮ
    Felicitation

    ಉಪ್ಪಿನಂಗಡಿಯಲ್ಲಿ ಶ್ರೀ ಮಹಾಭಾರತ ಸರಣಿ ಸುವರ್ಣ ಶತಕ ತಾಳಮದ್ದಳೆ ಕಾರ್ಯಕ್ರಮ

    September 9, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಿನಂಗಡಿ : ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾ ಮಂಟಪದಲ್ಲಿ ‘ಶ್ರೀ ಮಹಾಭಾರತ ಸರಣಿ ಸುವರ್ಣ ಶತಕ ತಾಳಮದ್ದಳೆ’ ಕಾರ್ಯಕ್ರಮದ ವೇದಿಕೆಯಲ್ಲಿ ದಿನಾಂಕ 07 ಸೆಪ್ಟೆಂಬರ್ 2025ರಂದು ಹರಿಹರ ಪಲ್ಲತಡ್ಕ ದಿ‌‌. ನೀಲಾವತಿ ಮತ್ತು ಪದ್ಮನಾಭ ಕೊಂಬೋಟು ದಂಪತಿಯ ಸಂಸ್ಮರಣಾ ಸಮಾರಂಭ ನಡೆಯಿತು.

    ಈ ಸಮಾರಂಭ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರು ಮಾತನಾಡಿ “ಸಮಾಜದ ಬೇರೆ ಬೇರೆ ರಂಗಗಳಲ್ಲಿ ತಮ್ಮಿಂದಾದ ಕೊಡುಗೆ ನೀಡಿ ಗತಿಸಿ ಹೋದ ಹಿರಿಯರನ್ನು ಎಂದಿಗೂ ಮರೆಯಲಾಗದು. ಕನಿಷ್ಠಪಕ್ಷ ಅವರ ಕುಟುಂಬದವರಿಗಾದರೂ ಅದು ನೆನಪಿರಬೇಕು. ಅದರಲ್ಲೂ ಯಕ್ಷಗಾನದಂತಹ ಶ್ರೇಷ್ಠ ಕಲೆಗಾಗಿ ಶ್ರಮಿಸಿದ ಸಾಧಕರಿಗೆ ಇಡೀ ಸಮಾಜವೇ ಒಂದು ಕುಟುಂಬ. ಅಂಥವರ ನೆನಪಿಂದ ಉಳಿದವರ ಬದುಕು ಸ್ಮರಣೀಯವಾಗುತ್ತದೆ; ಅದುವೇ ಮುಂದಿನವರಿಗೆ ಮಾದರಿಯಾಗಬಲ್ಲುದು” ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಹಿರಿಯ ಅರ್ಥಧಾರಿ ಗೋಪಾಲ ಶೆಟ್ಟಿ ಕಳೆಂಜ ಅವರಿಗೆ ಪ್ರಥಮ ವರ್ಷದ ‘ನೀಲಪದ್ಮ ಯಕ್ಷಪ್ರಶಸ್ತಿ’ ಪ್ರದಾನ ಮಾಡಲಾಯಿತು. ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ಹಿರಿಯ ಸ್ತ್ರೀ ವೇಷಧಾರಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ ಹಾಗೂ ಉಪ್ಪಿನಂಗಡಿಯ ಜನಪ್ರಿಯ ಆಯುರ್ವೇದ ಪಂಡಿತ ಮತ್ತು ಯಕ್ಷಗಾನ ಕಲಾಪೋಷಕ ವೈದ್ಯ ದಿ. ಶ್ರೀನಿವಾಸ ಶೆಟ್ಟಿ ಇವರಿಗೆ ಸಭೆಯಲ್ಲಿ ನುಡಿ ನಮನ ಸಲ್ಲಿಸಲಾಯಿತು. ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜು ಪ್ರಾಂಶುಪಾಲ ಮತ್ತು ಅರ್ಥಧಾರಿ ಗಣರಾಜ ಕುಂಬಳೆ ನುಡಿ ನಮನ ಸಲ್ಲಿಸಿದರು. ರಾಮನಗರ ಶಾರದಾ ಕಲಾ ಮಂಟಪದ ಸಂಚಾಲಕ ಉಮೇಶ ಶೆಣೈ, ಸಂತ ಆನ್ಸ್ ಶಿಕ್ಷಣ ಮಹಾವಿದ್ಯಾಲಯದ ವಿಶ್ರಾಂತ ದೈಹಿಕ ಶಿಕ್ಷಕ ಡಾ. ಸುರೇಶ್ ಶೆಟ್ಟಿ, ಯಕ್ಷಗಾನ ಕಲಾವಿದ ಅಂಬಾ ಪ್ರಸಾದ್ ಪಾತಾಳ, ವೈದ್ಯ ಶಾಲೆಯ ಜಗದೀಶ ಶೀನ ಶೆಟ್ಟಿ, ದೇವದಾಸ ಎಸ್.ಪಿ. ಹರಿಹರ ಅತಿಥಿಗಳಾಗಿದ್ದರು.

    ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ, ಸಂಸ್ಮರಣಾ ಸಮಿತಿ ಸಂಚಾಲಕ ಶ್ರೀಧರ ಎಸ್.ಪಿ. ಕೃಷ್ಣಾಪುರ ಪ್ರಾಸ್ತಾವಿಕ ಭಾಷಣ ಮಾಡಿದರು. ಶಿಕ್ಷಕಿ ಪುಷ್ಪಲತಾ ವಂದಿಸಿದರು. ಕೊಂಬೋಟು ಕುಟುಂಬಸ್ಥರು ಹಾಗೂ ಯಕ್ಷಕಲಾ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು. ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಸ್ವರ್ಣ ಶತಕ ಶ್ರೀ ಮಹಾಭಾರತ ಸರಣಿ ಅಂಗವಾಗಿ ದ.ಕ. ಜಿಲ್ಲೆಯ ವಿವಿಧ ಯಕ್ಷಗಾನ ತಂಡಗಳಿಂದ ಸೆ.6 ಮತ್ತು 7ರಂದು ಎರಡು ದಿನಗಳ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು. ಕೊನೆಯಲ್ಲಿ ಸರಣಿಯ 97ನೇ ಕಾರ್ಯಕ್ರಮವಾಗಿ ಸಂಘದ ಸದಸ್ಯರಿಂದ ‘ಭೀಷ್ಮ ಸೇನಾಧಿಪತ್ಯ’ ತಾಳಮದ್ದಳೆ ನೆರವೇರಿತು. ಭೀಷ್ಮನಪಾತ್ರದಲ್ಲಿ ಅತಿಥಿ ಕಲಾವಿದರಾಗಿ ಭಾಸ್ಕರ ರೈ ಕುಕ್ಕುವಳ್ಳಿ ಭಾಗವಹಿಸಿದರು.

    baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ‘ಕನ್ನಡ ನಾಟಕೋತ್ಸವ’ | ಸೆಪ್ಟೆಂಬರ್ 13
    Next Article ತೆಕ್ಕಟ್ಟೆಯಲ್ಲಿ ‘ರಾಜಾರುದ್ರಕೋಪ’ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ಗೋಕರ್ಣದಲ್ಲಿ ಚಿತ್ರಕಲೆ ಹಾಗೂ ರಂಗೋಲಿ ಶಿಬಿರ | ಸೆಪ್ಟೆಂಬರ್ 10

    September 9, 2025

    ಉಡುಪಿ ಪುರಭವನದಲ್ಲಿ ವಿಚಾರಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಸೆಪ್ಟೆಂಬರ್ 13

    September 9, 2025

    ತೆಕ್ಕಟ್ಟೆಯಲ್ಲಿ ‘ರಾಜಾರುದ್ರಕೋಪ’ ಯಕ್ಷಗಾನ ಪ್ರದರ್ಶನ

    September 9, 2025

    ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ‘ಕನ್ನಡ ನಾಟಕೋತ್ಸವ’ | ಸೆಪ್ಟೆಂಬರ್ 13

    September 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.