Subscribe to Updates

    Get the latest creative news from FooBar about art, design and business.

    What's Hot

    ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವಯತ್ರಿ ಡಾ. ಅನುರಾಧಾ ಕುರುಂಜಿ ಆಯ್ಕೆ

    September 22, 2025

    ತುಳುಭವನದಲ್ಲಿ ಬಹುಭಾಷಾ ಕವಿಗೋಷ್ಠಿ

    September 22, 2025

    ಮೈಸೂರು ದಸರಾ ಕವಿಗೋಷ್ಠಿಗೆ ಯೋಗೀಶ್ ಕಾಂಚನ್ ಆಯ್ಕೆ

    September 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 6ನೇ ಕಾರ್ಯಕ್ರಮ
    Drawing

    ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 6ನೇ ಕಾರ್ಯಕ್ರಮ

    September 22, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೇಳ : ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 20 ಸೆಪ್ಟೆಂಬರ್ 2025ರಂದು ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಮಾರ್ಗದರ್ಶನ ಅಭಿಯಾನದ 6ನೇ ಶಿಬಿರ ನಡೆಯಿತು.

    ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಸಂಚಾಲಕಿ ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್ “ಇಂದಿನ ವೇಗದ ಜಗತ್ತಿಗೆ ಚುಟುಕು ಸಾಹಿತ್ಯದ ಅಗತ್ಯ ಇದೆ. ಇಂತಹಾ ಶಿಬಿರಗಳಲ್ಲಿ ಮಕ್ಕಳು ಆಸಕ್ತಿಯಿಂದ ಭಾಗವಹಿಸಬೇಕು. ಕಾಸರಗೋಡಿನ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಈ ಅಭಿಯಾನ ಯೋಜನೆಯು ಶ್ಲಾಘನೀಯ” ಎಂದು ಹೇಳಿದರು.

    ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಎಲಿಜಬೆತ್ ಪಿ.ಎ. ಅಧ್ಯಕ್ಷತೆ ವಹಿಸಿ ಮಾತನಾಡಿ “ಚುಟುಕದಂತಹಾ ಚಿಕ್ಕ ಚಿಕ್ಕ ಕವಿತೆಗಳನ್ನು ಬರೆದು ಮಕ್ಕಳು ಬೆಳೆಯಬೇಕು. ನಿರಂತರ ಬರವಣಿಗೆ ಮತ್ತು ಅಧ್ಯಯನದಿಂದ ಉತ್ತಮ ಬರಹಗಳನ್ನು ರಚಿಸಬಹುದು” ಎಂದು ಹೇಳಿದರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕ ಡಾ. ಕೆ. ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡಿ “ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸಿ ಬೆಳೆಸಬೇಕಾದವರು ಮಕ್ಕಳು. ಅವರಲ್ಲಿ ಕನ್ನಡ ಪ್ರೀತಿಯನ್ನು ಶಿಕ್ಷಕರು ಅರಳಿಸಬೇಕು. ಇದಕ್ಕೆ ಮಕ್ಕಳ ಪೋಷಕರು ಮತ್ತು ಕನ್ನಡ ಪರ ಸಂಘಟನೆಗಳು ಬೆಂಬಲಿಸಬೇಕು” ಎಂದು ಹೇಳಿದರು.

    ಸಭೆಯಲ್ಲಿ ಕಾಸರಗೋಡಿನ ಕನ್ನಡ ಭವನ ಪ್ರಕಾಶನದ ಮುಖ್ಯಸ್ಥೆ ಸಂಧ್ಯಾರಾಣಿ ಟೀಚರ್, ಕಾಸರಗೋಡಿನ ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ, ಶಾಲೆಯ ಎಂ.ಪಿ.ಟಿ.ಎ. ಅಧ್ಯಕ್ಷೆ ಸರಿತಾ ಮೊದಲಾದವರು ಇದ್ದರು. ಈ ಸಂದರ್ಭದಲ್ಲಿ ಶಾಲೆಯ ಅಧಿಕೃತರನ್ನು ಪರಿಷತ್ತಿನ ವತಿಯಿಂದ ಗೌರವಿಸಲಾಯಿತು. ನಂತರ ನಡೆದ ಶಿಬಿರದ ಕವನ ರಚನಾ ತರಬೇತಿಯಲ್ಲಿ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಹಾಗೂ ಚಿತ್ರ ರಚನಾ ತರಬೇತಿಯಲ್ಲಿ ಮೋಹನದಾಸ್ ಅನ್ನೆಪಲ್ಲಡ್ಕ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಕಮ್ಮಟದಲ್ಲಿ ಶಿಬಿರಾರ್ಥಿಗಳು ಚಟುವಟಿಕೆಯ ಅಂಗವಾಗಿ ರಚಿಸಿದ ‘ಚಿತ್ತಾರ ಸಿರಿ’ ಹಾಗೂ ‘ಕವನ ಸುಮ’ ಎಂಬ ಹಸ್ತಪ್ರತಿಗಳನ್ನು ಬಿಡುಗಡೆ ಮಾಡಲಾಯಿತು. ಶಾಲೆಯ ವಿದ್ಯಾರ್ಥಿನಿಯರಾದ ಮಂಜೂಷಾ ಪಿ., ಶ್ರೇಯಾ ಬಿ., ಅದ್ವಿತೀಯ ರಾಮಚಂದ್ರ ಪ್ರಾರ್ಥಿಸಿದರು. ಶಿಕ್ಷಕ ಸ್ಟೇನಿ ಲೋಬೋ ಸ್ವಾಗತಿಸಿ, ನಿವೃತ್ತ ಶಿಕ್ಷಕಿ ಸಂಧ್ಯಾರಾಣಿ ಟೀಚರ್ ವಂದಿಸಿ, ನಿವೃತ್ತ ಶಿಕ್ಷಕಿ ಶಶಿಕಲಾ ಟೀಚರ್ ಕುಂಬಳೆ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಶಾಲೆಯ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    baikady drawing Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ‘ನವದುರ್ಗಾ ವೈಭವ’ | ಸೆಪ್ಟೆಂಬರ್ 26
    Next Article ಕನ್ನಡ ರಾಜ್ಯೋತ್ಸವ – ಕಾಸರಗೋಡು ಕನ್ನಡ ಗ್ರಾಮೋತ್ಸವದ ಪೋಸ್ಟರ್ ಬಿಡುಗಡೆ
    roovari

    Add Comment Cancel Reply


    Related Posts

    ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವಯತ್ರಿ ಡಾ. ಅನುರಾಧಾ ಕುರುಂಜಿ ಆಯ್ಕೆ

    September 22, 2025

    ತುಳುಭವನದಲ್ಲಿ ಬಹುಭಾಷಾ ಕವಿಗೋಷ್ಠಿ

    September 22, 2025

    ಮೈಸೂರು ದಸರಾ ಕವಿಗೋಷ್ಠಿಗೆ ಯೋಗೀಶ್ ಕಾಂಚನ್ ಆಯ್ಕೆ

    September 22, 2025

    ಡಾ. ಎಂ. ಮೋಹನ ಆಳ್ವರಿಗೆ ‘ಕೀರಿಕ್ಕಾಡು ಪ್ರಶಸ್ತಿ’

    September 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.