Subscribe to Updates

    Get the latest creative news from FooBar about art, design and business.

    What's Hot

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಣಿಪಾಲದ ರತ್ನ ಸಂಜೀವ ಕಲಾ ಮಂಡಲ ವೇದಿಕೆಯಲ್ಲಿ ‘ನವರಸಗಳಲ್ಲಿ ನವರಾತ್ರಿ’ ಕವಿಗೋಷ್ಠಿ
    Literature

    ಮಣಿಪಾಲದ ರತ್ನ ಸಂಜೀವ ಕಲಾ ಮಂಡಲ ವೇದಿಕೆಯಲ್ಲಿ ‘ನವರಸಗಳಲ್ಲಿ ನವರಾತ್ರಿ’ ಕವಿಗೋಷ್ಠಿ

    September 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಮಣಿಪಾಲ ಮತ್ತು ಕಲ್ಲಚ್ಚು ಪ್ರಕಾಶನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಮಣಿಪಾಲದ ರತ್ನ ಸಂಜೀವ ಕಲಾ ಮಂಡಲ ವೇದಿಕೆಯಲ್ಲಿ ದಿನಾಂಕ 22 ಸೆಪ್ಟೆಂಬರ್ 2025ರಂದು ನಡೆದ ನವರಸಗಳಲ್ಲಿ ನವರಾತ್ರಿ ಎಂಬ ಕವಿಗೋಷ್ಠಿ ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಅಧ್ಯಕ್ಷರಾದ ಮಹೇಶ್ ಠಾಕೂರ್ ಮಾತನಾಡಿ “ತೆರೆಮರೆಯಲ್ಲಿರುವ ಹೂವನ್ನು ಶಿವನ ಮುಕುಟಕ್ಕೆ ಅರ್ಪಿಸಿದಾಗ ಅದು ಶ್ರೇಷ್ಠವಾಗುತ್ತದೆ. ಅದೇ ರೀತಿ ನಾವು ರತ್ನ ಸಂಜೀವ ಕಲಾಮಂಡಲದ ವತಿಯಿಂದ ತೆರೆಮರೆಯ ಸಾಹಿತಿಗಳನ್ನು ಮುನ್ನೆಲೆಗೆ ತರುವ ಪ್ರಯತ್ನಕ್ಕೆ ಮುಂದಡಿ ಇಡುತ್ತಿದ್ದೇವೆ. ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಹಾಗೂ ಕಲ್ಲಚ್ಚು ಪ್ರಕಾಶನ ಹಾಗೂ ರತ್ನ ಸಂಜೀವ ಕಲಾಮಂಡಲದ ಸಹಯೋಗದೊಂದಿಗೆ ಕಲೆ ಮತ್ತು ಸಾಹಿತ್ಯಕ್ಕೆ ಒತ್ತು ನೀಡಲು ಹಾಗೂ ಹೊಸ ಸಾಹಿತಿಗಳಿಗೆ ವೇದಿಕೆ ಸೃಷ್ಟಿಸಲು ಈ ಪ್ರಬುದ್ಧರ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ನಾವು ತಬಲಾ, ಹಾರ್ಮೋನಿಯಂ, ಕರ್ಣಾಟಕ ಸಂಗೀತ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಹಾಗೂ ಯೋಗವನ್ನು ಪ್ರತಿದಿನ ಬೆಳಗ್ಗೆ ಉಚಿತವಾಗಿ ಹೇಳಿ ಕೊಡುತ್ತಿದ್ದೇವೆ. ಇದೇ ರೀತಿ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮವನ್ನು ದೊಡ್ಡಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸಣ್ಣಮಟ್ಟದಲ್ಲಿ ಗುರುತಿಸಿಕೊಂಡ ಬರಹಗಾರರನ್ನು ಗುರುತಿಸಲಾಗುವುದು” ಎಂದರು.

    ಈ ಸಂದರ್ಭದಲ್ಲಿ ಸಾಹಿತಿಗಳಾದ ನಿತ್ಯಾನಂದ ಪಡ್ರೆ, ನಟರಾಜ ಪರ್ಕಳ, ಜ್ಯೋತಿಮಹಾದೇವಿ, ಸುಮಾ ಕಿರಣ್, ಸ್ಮಿತಾ ಕಾಮತ್, ಸುನೀಲ್ ಪಣಪ್ಪಿಲ ಹಾಗೂ ಕರವೀರಯ್ಯ ಇವರನ್ನು ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ನ ಮನೆ ಮನೆ ಗ್ರಂಥಾಲಯ ಯೋಜನೆಗಾಗಿ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕ.ಸಾ.ಪ. ಉಡುಪಿ ಅಧ್ಯಕ್ಷ ರವಿರಾಜ್ ಎಚ್.ಪಿ., ಕಲ್ಲಚ್ಚು ಪ್ರಕಾಶನದ ಮಹೇಶ್ ಆರ್. ನಾಯಕ್, ಪ್ರಮುಖರಾದ ದಿನೇಶ್ ಕುಮಾರ್. ಸತೀಶ ಪಾಟೀಲ್, ಉಷಾ ಹೆಬ್ಬಾರ್, ಸುಕನ್ಯ ಕಳಸ ಉಪಸ್ಥಿತರಿದ್ದರು.

    baikady Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪುಸ್ತಕಗಳ ಬಿಡುಗಡೆ | ಸೆಪ್ಟೆಂಬರ್ 27
    Next Article ಬೆಂಗಳೂರಿನಲ್ಲಿ ‘ರಾಜ್ಯ ಮಟ್ಟದ 10ನೇ ಯುವಜನ ಸಾಹಿತ್ಯ ಸಂಸ್ಕೃತಿ ಸಮಾವೇಶ 2025’ | ಸೆಪ್ಟೆಂಬರ್ 28
    roovari

    Add Comment Cancel Reply


    Related Posts

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    ಪುತ್ತೂರಿನಲ್ಲಿ ‘ಕುಮಾರವ್ಯಾಸ ಜಯಂತಿ’ ಆಚರಣೆಯ ಪ್ರಯುಕ್ತ ಗಮಕ ವಾಚನ- ವ್ಯಾಖ್ಯಾನ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.