Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯಲ್ಲಿ ‘ಮಾರ್ಗ 2025’ ಭರತನಾಟ್ಯ ನೃತ್ಯ ಉತ್ಸವ | ಅಕ್ಟೋಬರ್ 10

    October 6, 2025

    ಮೈಸೂರಿನಲ್ಲಿ ಕೊಡವ ಸಂಸ್ಕೃತಿ ಪ್ರದರ್ಶಿಸಿದ ಒತ್ತೋರ್ಮೇರ ಕೊಡವ ಕೂಟ

    October 6, 2025

    Book release program by Upasana at Bangalore

    October 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಭೈರಪ್ಪ ನಮನ, ಗಾಯನ, ವಾದನ ಕಾರ್ಯಕ್ರಮ
    Commemoration

    ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಭೈರಪ್ಪ ನಮನ, ಗಾಯನ, ವಾದನ ಕಾರ್ಯಕ್ರಮ

    October 6, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ, ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ನಾಗರಿಕ ಸಲಹಾ ಸಮಿತಿ ಸುರತ್ಕಲ್ ಮತ್ತು ಸಪ್ತಕ ಬೆಂಗಳೂರು ಜೊತೆಯಾಗಿ ಸುರತ್ಕಲ್ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ದಿನಾಂಕ 04 ಅಕ್ಟೋಬರ್ 2025ರಂದು ಭೈರಪ್ಪ ನಮನ, ಗಾಯನ, ವಾದನ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದ ಚಿಂತಕ ಡಾ. ಅಜಕ್ಕಳ ಗಿರೀಶ್ ಭಟ್ “ಬದುಕಿನಲ್ಲಿ ಎದುರಾದ ನೋವುಗಳನ್ನು ಎದುರಿಸಿ ಅನುಭವಗಳನ್ನು ಕಲಾ ಕೃತಿಯನ್ನಾಗಿಸಿ ಜನ ಮೆಚ್ಚುಗೆ ಪಡೆದ ಸಾಹಿತಿ ಡಾ. ಎಸ್.ಎಲ್. ಭೈರಪ್ಪರು ಜೀವನದ ಸತ್ಯ ಹಾಗೂ ಮೌಲ್ಯಗಳಿಗೆ ಮಹತ್ವವನ್ನು ನೀಡಿ ನುಡಿದಂತೆ ನಡೆದವರು. ನವ್ಯ ಸಾಹಿತ್ಯದ ಪ್ರಭಾವದ ಕಾಲದಲ್ಲಿ ವಿಭಿನ್ನವಾಗಿ ಕಲಾಕೃತಿಗಳನ್ನು ನೀಡಿದ ಭೈರಪ್ಪರು ನಮಗೆ ಹೆಚ್ಚು ಆಪ್ತರಾಗುತ್ತಾರೆ. ‘ಧರ್ಮಶ್ರೀ’ ಕಾದಂಬರಿಯಿಂದ ತೊಡಗಿ ‘ಉತ್ತರ ಕಾಂಡ’ದವರೆಗಿನ ಅವರ ಕೃತಿಗಳು ಅನನ್ಯ ಅನುಭವಗಳನ್ನು ನೀಡುತ್ತವೆ. ಹಿರಿದಾದ ಅನುಭವ, ವಸ್ತು ವೈವಿಧ್ಯ, ಕಲೆಗಾರಿಕೆ, ನಂಬಿದ ತತ್ವಗಳ ಕುರಿತು ಬದ್ಧತೆಗಳಿಂದ ವಿವಿಧ ನೆಲೆಗಳ ಕಾದಂಬರಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಲು ಅವರಿಗೆ ಸಾಧ್ಯವಾಯಿತು. ತನ್ನನ್ನು ಅಕ್ಕರೆಯಿಂದ ಕಂಡ ಸಮಾಜಕ್ಕೆ ಕೊಡುಗೆಗಳನ್ನು ನೀಡುವ ಮೂಲಕ ವಿಶಿಷ್ಟ ಸಾಹಿತಿಯಾಗಿ ಜನಮಾನಸದ ಪ್ರೀತಿ ಗಳಿಸಿದರು” ಎಂದು ನುಡಿದರು.

    ಹಿರಿಯ ಕವಿ ರಘುರಾಮ ರಾವ್ ಬೈಕಂಪಾಡಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಕರ್ಮಯೋಗಿ ಹರಿಕೃಷ್ಣ ಪುನರೂರು ಪುಷ್ಪ ನಮನ ಸಲ್ಲಿಸಿದರು. ಸುರತ್ಕಲ್ ರೋಟರಿ ಕ್ಲಬ್ ನಿರ್ದೇಶಕ ಕೃಷ್ಣ ಮೂರ್ತಿ ಸ್ವಾಗತಿಸಿ, ಮಣಿ ಕೃಷ್ಣ ಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ವಂದಿಸಿ, ಪ್ರಾಧ್ಯಾಪಕ ಕುಮಾರಸ್ವಾಮಿ ಹೊಸಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಕೆ. ರಾಜಮೋಹನ ರಾವ್, ಚಿರಂತನ ಚಾರಿಟೇಬಲ್ ಟ್ರಸ್ಟಿನ ಮೂರ್ತಿ ದೇರಾಜೆ, ಶಂಕರ್ ಮತ್ತಿತರರು ಉಪಸ್ಥಿತರಿದ್ದರು. ನೀಹಾರಿಕ ದೇರಾಜೆ, ಸುರತ್ಕಲ್ ಇವರಿಂದ ಹಿಂದೂಸ್ಥಾನಿ ಶಾಸ್ತ್ರೀಯ ಗಾಯನ ನಡೆಯಿತು. ತಬಲಾದಲ್ಲಿ ಶ್ರೀವತ್ಸ ಶರ್ಮಾ ಪಡುಬಿದ್ರೆ ಮತ್ತು ಸಂವಾದಿನಿಯಲ್ಲಿ ಮೇಧಾ ಭಟ್ ಮಂಗಳೂರು ಮತ್ತು ಸುಜಾತ ಭಟ್ ಸಹಕರಿಸಿದರು. ಕಿರಣ್ ಹೆಗಡೆ ಮಗೆಗಾರ ಇವರಿಂದ ಪ್ರಸ್ತುತಗೊಂಡ ಬಾನ್ಸುರಿ ವಾದನ ಕಚೇರಿಗೆ ಭಾರವಿ ದೇರಾಜೆ ತಬಲಾದಲ್ಲಿ ಸಹಕರಿಸಿದರು.

    baikady Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶಕ್ತಿನಗರದ ಕಲಾಂಗಣನಲ್ಲಿ ಅಂತರ ರಾಷ್ಟ್ರೀಯ ಸಂಗೀತ ದಿನ ಮತ್ತು ತಿಂಗಳ ಸರಣಿ ಕಾರ್ಯಕ್ರಮ
    Next Article ಗಮಕ ಕಲಾ ಪರಿಷತ್ತು ಪುತ್ತೂರು ತಾಲೂಕು ಘಟಕದಿಂದ ಜಿಲ್ಲಾ ಮಟ್ಟದ ಗಮಕ ವಾಚನ ಸ್ಪರ್ಧೆ
    roovari

    Add Comment Cancel Reply


    Related Posts

    ಉಡುಪಿಯಲ್ಲಿ ‘ಮಾರ್ಗ 2025’ ಭರತನಾಟ್ಯ ನೃತ್ಯ ಉತ್ಸವ | ಅಕ್ಟೋಬರ್ 10

    October 6, 2025

    Book release program by Upasana at Bangalore

    October 6, 2025

    ರಂಗಭೂಮಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ – 2025 | ಕೊನೆಯ ದಿನಾಂಕ ಅಕ್ಟೋಬರ್ 30

    October 6, 2025

    ಗಮಕ ಕಲಾ ಪರಿಷತ್ತು ಪುತ್ತೂರು ತಾಲೂಕು ಘಟಕದಿಂದ ಜಿಲ್ಲಾ ಮಟ್ಟದ ಗಮಕ ವಾಚನ ಸ್ಪರ್ಧೆ

    October 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.