Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ “ಕಲೆ,ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ” | ಅಕ್ಟೋಬರ್ 18

    October 16, 2025

    ತುಲುವೆರೆ ಕಲ ಟ್ರಸ್ಟ್ ಪದಗ್ರಹಣ | ಅಕ್ಟೋಬರ್ 19

    October 16, 2025

    ಬೆಂಗಳೂರಿನ ಕಲಾಗ್ರಾಮದಲ್ಲಿ ಸಂತ ಕವಿ ಕನಕದಾಸರ ಅನನ್ಯ ಕಾವ್ಯ ಆಧಾರಿತ ‘ರಾಮಧಾನ್ಯ’ ನಾಟಕ | ಅಕ್ಟೋಬರ್ 17

    October 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಸೃಜನೇತರ ಬರೆವಣಿಗೆ’ ಕಾರ್ಯಾಗಾರ | ಅಕ್ಟೋಬರ್ 17 ಮತ್ತು 18
    Literature

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಸೃಜನೇತರ ಬರೆವಣಿಗೆ’ ಕಾರ್ಯಾಗಾರ | ಅಕ್ಟೋಬರ್ 17 ಮತ್ತು 18

    October 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಮಂಗಳಗಂಗೆ ವಾರ್ಷಿಕ ಸಂಚಿಕೆ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇವರ ಆಶ್ರಯದಲ್ಲಿ ಎರಡು ದಿನಗಳ ‘ಸೃಜನೇತರ ಬರೆವಣಿಗೆ ಕಾರ್ಯಾಗಾರ’ವನ್ನು ದಿನಾಂಕ 17 ಮತ್ತು 18 ಅಕ್ಟೋಬರ್ 2025ರಂದು ಅಪರಾಹ್ನ 2-00 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮಂಗಳೂರು ವಿಶ್ವವಿದ್ಯಾನಿಲಯ ಮಾನ್ಯ ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ನಿರಂಜನ ವಾನಳ್ಳಿ ಇವರು ಈ ಕಾರ್ಯಾಗಾರವನ್ನು ಉದ್ಘಾಟನೆ ಮಾಡಲಿದ್ದಾರೆ. ‘ಸೃಜನೇತರ ಬರೆವಣಿಗೆಯ ಕಲ್ಪನೆ ಸಾಧ್ಯತೆಗಳು ಮಾಧ್ಯಮಗಳು ಇತಿ ಮಿತಿ’ ಎಂಬ ವಿಷಯದ ಬಗ್ಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ನಿರಂಜನ ವಾನಳ್ಳಿ ಇವರು ವಿಷಯ ಮಂಡನೆ ಮಾಡಲಿದ್ದಾರೆ.

    ದಿನಾಂಕ 18 ಅಕ್ಟೋಬರ್ 2025ರಂದು ಪೂರ್ವಾಹ್ನ 9-30 ಗಂಟೆಗೆ ‘ಕಿರು ಬರೆವಣಿಗೆ’ ಬಗ್ಗೆ ಹಿರಿಯ ಲೇಖಕರಾದ ಡಾ. ಚ. ನ. ಶಂಕರ್ ರಾವ್, ‘ನುಡಿ ಚಿತ್ರಗಳು ಮತ್ತು ಇತರ ಪತ್ರಿಕಾ ಬರೆವಣಿಗೆಯಾ ಸಾಧ್ಯತೆಗಳು’ ಬಗ್ಗೆ ಪತ್ರಕರ್ತ ಆರ್.ಸಿ. ಭಟ್ ಮತ್ತು ‘ಬರೆವಣಿಗೆಯ ವಿಮರ್ಶೆ’ ಬಗ್ಗೆ ಪತ್ರಕರ್ತ ಗುರುಪ್ರಸಾದ್ ಟಿ.ಎನ್. ಇವರು ವಿಷಯ ಮಂಡನೆ ಮಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕೆ. ರಾಜು ಮೊಗವೀರ ಇವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ನರೂರು ಇವರು ಸಮಾರೋಪ ಭಾಷಣ ಮಾಡಲಿದ್ದಾರೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ತೆಂಕುತಿಟ್ಟು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ
    Next Article ಮಾಣಿಕ್ಯ ಪ್ರಕಾಶನದ ದಶಮಾನೋತ್ಸವ ಸಂಭ್ರಮದ ಸರ್ವಾಧ್ಯಕ್ಷರಾಗಿ ಮುಂಬಯಿಯ ಸಾಹಿತಿ ವಾಣಿ ಶೆಟ್ಟಿ ಆಯ್ಕೆ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ “ಕಲೆ,ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ” | ಅಕ್ಟೋಬರ್ 18

    October 16, 2025

    ತುಲುವೆರೆ ಕಲ ಟ್ರಸ್ಟ್ ಪದಗ್ರಹಣ | ಅಕ್ಟೋಬರ್ 19

    October 16, 2025

    ಬೆಂಗಳೂರಿನ ಕಲಾಗ್ರಾಮದಲ್ಲಿ ಸಂತ ಕವಿ ಕನಕದಾಸರ ಅನನ್ಯ ಕಾವ್ಯ ಆಧಾರಿತ ‘ರಾಮಧಾನ್ಯ’ ನಾಟಕ | ಅಕ್ಟೋಬರ್ 17

    October 16, 2025

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಗಮಕ ಸಮ್ಮೇಳನ’ | ಅಕ್ಟೋಬರ್ 17 ಮತ್ತು 18

    October 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.