Subscribe to Updates

    Get the latest creative news from FooBar about art, design and business.

    What's Hot

    ಕಲ್ಲಹಳ್ಳಿಯ ‘ಸುಮ್ಮನೆ’ಯಲ್ಲಿ ‘ಗಣೇಶ ದರ್ಶನ’ | ಅಕ್ಟೋಬರ್ 20

    October 18, 2025

    ವಿಶ್ವಶಾಂತಿ ಸೇವಾ ಟ್ರಸ್ಟ್ ವತಿಯಿಂದ ಮೂವರು ಸಾಧಕರಿಗೆ ‘ನಮ್ಮನೆ ಪ್ರಶಸ್ತಿ’ ಪ್ರಕಟ

    October 18, 2025

    ಆಳ್ವಾಸ್ ಕಾಲೇಜಿನಲ್ಲಿ ಡಾ. ಎಸ್.ಎಲ್. ಭೈರಪ್ಪರವರಿಗೆ ‘ನುಡಿನಮನ’ ಕಾರ್ಯಕ್ರಮ

    October 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ
    Literature

    ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ

    October 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಸಂಶೋಧನಾ ಕೇಂದ್ರ ಹಾಗೂ ಐಕ್ಯೂಎಸಿ ಮತ್ತು ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ ಕಾರ್ಯಗಾರವು ದಿನಾಂಕ 15 ಅಕ್ಟೋಬರ್ 2025ರಂದು ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

    ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಕನ್ನಡ ವಿಶ್ರಾಂತ ಪ್ರಾಧ್ಯಾಪಕ ಡಾ. ನರಸಿಂಹಮೂರ್ತಿ ಆರ್. “ಇಪ್ಪತ್ತನೇ ಶತಮಾನದಲ್ಲಿ, ಜಗತ್ತು ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ ಪಟ್ಟಿ ಮಾಡಿದರೆ ಶಿವರಾಮ ಕಾರಂತರು ಅಗ್ರಗಣ್ಯರು. ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಏನನ್ನೆಲ್ಲಾ ಸಾಧಿಸಬಹುದು ಎಂಬುದಕ್ಕೆ ಮಾದರಿ ಶಿವರಾಮ ಕಾರಂತರು. ನಾಲ್ಕು ಗೋಡೆಯ ಮಧ್ಯೆ ಮಕ್ಕಳನ್ನು ಬೆಳೆಸುವ ಬದಲು ಮಕ್ಕಳು ಪರಿಸರದೊಂದಿಗೆ ಬೆರೆಯುವುದರ ಮೂಲಕ ಪರಿಸರದ ಒಂದು ಭಾಗವಾಗಬೇಕು ಎಂಬ ಕಾರಣದಿಂದ ಶಿಕ್ಷಣದಲ್ಲಿ ಹೊಸ ಆಲೋಚನೆಗಳನ್ನು ತಂದರು. ಕಾರಂತರ ಪುಸ್ತಕಗಳನ್ನು ಓದುದರ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬಹುದು” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ನಮ್ಮ ಹಿರಿಯರು ಮಾಡಿದ ಸಾಧನೆಯನ್ನು ವಿದ್ಯಾರ್ಥಿಗಳು ಸ್ಫೂರ್ತಿಯಾಗಿ ತೆಗೆದುಕೊಂಡು ಅವರು ಹಾಕಿಕೊಟ್ಟ ಪಥದಲ್ಲಿ ಸಾಗಬೇಕು ಹಾಗೆಯೇ ಕರಾವಳಿಯ ಮಹನೀಯರು ಮಾಡಿರುವ ಸಾಧನೆಯ ಬಗ್ಗೆ ವಿದ್ಯಾರ್ಥಿಗಳು ಕೃತಿಯನ್ನು ರಚಿಸುವಂತವರಾಗಬೇಕು” ಎಂದು ಹೇಳಿದರು.

    ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ. ಕೆ.ಎನ್, ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ವಿಜಯ ಸರಸ್ವತಿ ಬಿ., ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ಬಿ. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಕೆ. ಶಿವರಾಮ ಕಾರಂತರ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಪ್ರಮೋದ್ ಎಂ.ಜೆ. ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕ ಮಧುಕುಮಾರ್ ಕೆ. ವಂದಿಸಿ, ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಚೈತನ್ಯ ಚಂದಪ್ಪ ನಿರೂಪಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷ ಅಭಿಮಾನಿ ಬಳಗ ಟ್ರಸ್ಟಿನ ದಶ ಸಂಭ್ರಮದ ‘ಶುಭಂ ಕರೋತಿ ಕಲ್ಯಾಣಂ’
    Next Article ಕವನ | ಕಳೆದುಹೋಗಿರುವುದೇನು ?
    roovari

    Add Comment Cancel Reply


    Related Posts

    ಕಲ್ಲಹಳ್ಳಿಯ ‘ಸುಮ್ಮನೆ’ಯಲ್ಲಿ ‘ಗಣೇಶ ದರ್ಶನ’ | ಅಕ್ಟೋಬರ್ 20

    October 18, 2025

    ವಿಶ್ವಶಾಂತಿ ಸೇವಾ ಟ್ರಸ್ಟ್ ವತಿಯಿಂದ ಮೂವರು ಸಾಧಕರಿಗೆ ‘ನಮ್ಮನೆ ಪ್ರಶಸ್ತಿ’ ಪ್ರಕಟ

    October 18, 2025

    ಆಳ್ವಾಸ್ ಕಾಲೇಜಿನಲ್ಲಿ ಡಾ. ಎಸ್.ಎಲ್. ಭೈರಪ್ಪರವರಿಗೆ ‘ನುಡಿನಮನ’ ಕಾರ್ಯಕ್ರಮ

    October 18, 2025

    ಕವನ | ತೊರೆದು ಜೀವಿಸಬಹುದೇ ?

    October 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.