Subscribe to Updates

    Get the latest creative news from FooBar about art, design and business.

    What's Hot

    ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ‘ರಜತ ಕಲಾ ಯಾನ’ | ಅಕ್ಟೋಬರ್ 26

    October 22, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಪುಸ್ತಕ ಬಿಡುಗಡೆ ಮತ್ತು ಪ್ರದರ್ಶನ | ಅಕ್ಟೋಬರ್ 25

    October 22, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಗೀತೆಗಳು’ | ಅಕ್ಟೋಬರ್ 26

    October 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪುರಭವನದಲ್ಲಿ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆ ‘ನೃತ್ಯ ರತ್ನ ಶೋಧ 2025’
    Bharathanatya

    ಮಂಗಳೂರಿನ ಪುರಭವನದಲ್ಲಿ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆ ‘ನೃತ್ಯ ರತ್ನ ಶೋಧ 2025’

    October 22, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೊಟ್ಟಾರದ ಭರತಾಂಜಲಿಯ ಕಿಂಕಿಣಿ ತ್ರಿಂಶತ್ ಸಂಭ್ರಮದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆ ‘ನೃತ್ಯ ರತ್ನ ಶೋಧ 2025’ ಕಾರ್ಯಕ್ರಮವು ದಿನಾಂಕ 18 ಅಕ್ಟೋಬರ್ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು.

    ಈ ಭರತನಾಟ್ಯ ಸ್ಪರ್ಧೆಗೆ ಚಾಲನೆ ನೀಡಿದ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಇವರು ಮಾತನಾಡುತ್ತಾ “ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆಯನ್ನು ಆಯೋಜಿಸಿರುವುದರಿಂದ ಭರತನಾಟ್ಯದ ವಿವಿಧ ಬಾಣಿ (ಶೈಲಿ)ಗಳು ಒಂದೇ ವೇದಿಕೆಯಲ್ಲಿ ಅನಾವರಣಗೊಂಡಿದೆ. ದೇಶದ ನಾನಾ ಭಾಗದಲ್ಲಿನ ಗುರುಗಳ ಭರತನಾಟ್ಯ ಶೈಲಿಯು ಒಂದೇ ವೇದಿಕೆಯಲ್ಲಿ ಪ್ರಸ್ತುತವಾಗುವ ಮೂಲಕ ನೃತ್ಯನಂದನವನದ ಅನಾವರಣಗೊಂಡಿತು” ಎಂದು ಹೇಳಿದರು.

    “ಶಾಸ್ತ್ರೀಯತೆ ಹಾಗೂ ಯುವಪ್ರತಿಭೆಗಳ ಸ್ಪರ್ಧಾತ್ಮಕ ಮತ್ತು ಪ್ರದರ್ಶನಾತ್ಮಕ ವಿಚಾರಗಳಲ್ಲಿ ಒಂದು ಪ್ರಮುಖ ಘಟನೆಯಾಗಿ ಹೊರಹೊಮ್ಮಿದೆ. ರಾಷ್ಟ್ರಮಟ್ಟದ ಸ್ಪರ್ಧೆಯು ಕಲಾವಿದರಿಗೆ ತಮ್ಮ ನೈಪುಣ್ಯವನ್ನು ಪ್ರಸ್ತುತ ಪಡಿಸಲು ಮಾತ್ರವಲ್ಲ, ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಯನ್ನು ಕಾಪಾಡಿ ಮುಂದುವರಿಸಲು ಪ್ರೇರಣೆಯಾಗಿದೆ. ಈ ಸ್ಪರ್ಧೆಯು ರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗಳು ಶ್ರೇಷ್ಠತೆಯ ಹೊಸ ಮಾನದಂಡಗಳನ್ನು ನಿರ್ಮಿಸಿದೆ” ಎಂದು ತೀರ್ಪುಗಾರರಾಗಿ ಆಗಮಿಸಿದ ಬೆಂಗಳೂರಿನ ನೃತ್ಯ ಗುರು ವಿದುಷಿ ರಾಧಿಕಾ ರಾಮಾನುಜಂ ಅಭಿಪ್ರಾಯಪಟ್ಟರು.

    “ದೇಶದ ವಿವಿಧ ರಾಜ್ಯಗಳಿಂದ ಬಂದ ಯುವ ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರಸ್ತುತ ಪಡಿಸಲು ಈ ವೇದಿಕೆ ಅತ್ಯುತ್ತಮ ಅವಕಾಶ. ಅನೇಕರು ತಮ್ಮ ಗುರುಗಳ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸುತ್ತಾರೆ. ಈ ಪ್ರಶಸ್ತಿಯು ಭವಿಷ್ಯದಲ್ಲಿ ಅವರ ಸಾಧನೆಗೆ ಬಾಗಿಲು ತೆರೆದಂತಾಗಲಿದೆ. ಇದು ನೃತ್ಯ ಸಂಸ್ಥೆಗಳಿಗೂ, ಗುರುಗಳಿಗೂ ಗೌರವದ ಸಂಗತಿ. ಹಲವಾರು ವರ್ಷಗಳ ಬಳಿಕ ನಾಟ್ಯಕ್ಷೇತ್ರದಲ್ಲಿ ಇಂತಹ ಒಂದು ಶಿಸ್ತುಬದ್ಧ ಸ್ಪರ್ಧೆ ನಡೆದಿದೆ” ಎಂದು ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ನಿತ್ಯಾನಂದ ರಾವ್ ಅಭಿಪ್ರಾಯಪಟ್ಟರು.

    “ಇಂತಹ ಸ್ಪರ್ಧೆಗಳು ಶಾಸ್ತ್ರೀಯ ನೃತ್ಯಶೈಲಿಯ ಪ್ರಾಮುಖ್ಯತೆಯನ್ನು ಉಳಿಸಿಕೊಳ್ಳುತ್ತವೆ. ಯುವ ಪೀಳಿಗೆಗೆ ಈ ಕಲೆಯ ಮೌಲ್ಯವನ್ನು ಪರಿಚಯಿಸುತ್ತವೆ ಮತ್ತು ಸಮಾಜದ ಸಾಂಸ್ಕೃತಿಕ ಬಾಹುಳ್ಯವನ್ನು ಬಲಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಭರತಾಂಜಲಿಯ ನೃತ್ಯ ಗುರುಗಳಾದ ಗುರು ಶ್ರೀಧರ ಹೊಳ್ಳ ಹಾಗೂ ವಿದುಷಿ ಪ್ರತಿಮಾ ಶ್ರೀಧರ್ ಅಭಿನಂದನಾರ್ಹರು” ಎಂದು ಹಿರಿಯ ನೃತ್ಯ ಗುರುಗಳಾದ ಉಡುಪಿಯ ಪ್ರತಿಭಾ ಸಾಮಗ ಹೇಳಿದರು.

    “ರಾಷ್ಟ್ರೀಯ ಮಟ್ಟದ ಭರತನಾಟ್ಯ ಸ್ಪರ್ಧೆ ಒಂದು ಕಲೆಯ ಹಬ್ಬ. ಅದು ಕೇವಲ ಪ್ರಶಸ್ತಿಗೆ ಸೀಮಿತವಲ್ಲ. ಅದು ಭಾವನೆ, ಅಭ್ಯಾಸ, ಸಂಸ್ಕೃತಿ ಮತ್ತು ಶ್ರದ್ಧೆಯ ಸಂಯೋಜನೆ. ಇಲ್ಲಿ ಸಂಘಟಕರು, ಗುರುಗಳು ಮತ್ತು ಕಲಾವಿದರು ತಾವು ಹೊಂದಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ” ಎಂದು ತೀರ್ಪುಗಾರರಾಗಿ ಭಾಗವಹಿಸಿದ್ದ ವಿದುಷಿ ರಾಜಶ್ರೀ ಉಳ್ಳಾಲ್ ಹೇಳಿದರು.

    ವಿದುಷಿ ಲಕ್ಷ್ಮೀ ಗುರುರಾಜ್, ವಿದುಷಿ ಪ್ರಕ್ಷಿಲಾ ಜೈನ್, ಸಹ ಸಂಚಾಲಕಿ ವಿದುಷಿ ಮಧುರಾ ಕಾರಂತ್, ವಿದುಷಿ ಮಾನಸ ಕುಲಾಲ್, ವಿದುಷಿ ಅನ್ನಪೂರ್ಣ ರಿತೇಶ್ ಉಪಸ್ಥಿತರಿದ್ದರು. ಶ್ರೀಧರ ಹೊಳ್ಳ ಸ್ವಾಗತಿಸಿ, ವಿದುಷಿ ಪ್ರತಿಮಾ ಶ್ರೀಧರ್ ವಂದಿಸಿದರು. ನೃತ್ಯ ಗುರುಗಳಾದ ವಿದುಷಿ ಶಾರದಾಮಣಿ ಶೇಖರ್, ವಿದ್ವಾನ್ ಚಂದ್ರಶೇಖರ ನಾವಡ, ವಿದುಷಿ ರಾಧಿಕಾ ಶೆಟ್ಟಿ, ವಿದುಷಿ ಶ್ರೀಲತಾ ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು. ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ‘ನೃತ್ಯ ರತ್ನ ಶೋಧ 2025’ ವಿಜೇತರು ಹಿರಿಯ ವಿಭಾಗದಲ್ಲಿ ಪ್ರಥಮ : ಉಡುಪಿ ಜಾನಕಿ ಡಿ.ವಿ. (ಗುರುಗಳು – ಡಾ. ಮಂಜರಿ ಚಂದ್ರ), ದ್ವಿತೀಯ : ಮುಂಬಯಿಯ ಸಾಕ್ಷಿ ಪೈ (ಗುರುಗಳು – ಪವಿತ್ರಾ ಭಟ್ ಮತ್ತು ಅಪರ್ಣಾ ಶಾಸ್ತ್ರಿ ಭಟ್), ತೃತೀಯ : ಕುಂದಾಪುರದ ಯುಕ್ತಿ ಉಡುಪ (ಗುರುಗಳು – ಪವಿತ್ರಾ ಅಶೋಕ್). ಕಿರಿಯರ ವಿಭಾಗದಲ್ಲಿ ಪ್ರಥಮ : ಬೆಂಗಳೂರಿನ ವಿಭಾ ರಾಘವೇಂದ್ರ (ಗುರುಗಳು – ಪಾರ್ಶ್ವನಾಥ ಉಪಾಧ್ಯೆ, ಶ್ರುತಿ ಗೋಪಾಲ್, ಆದಿತ್ಯ ಪಿ.ವಿ.), ದ್ವಿತೀಯ : ಉಡುಪಿಯ ಸಾನ್ವಿ ರಾಜೇಶ್ ಹಾಗೂ ತೃತೀಯ : ಉಡುಪಿಯ ಮಾನ್ಸಿ ಕೆ. ಕೋಟ್ಯಾನ್ (ಗುರುಗಳು – ಡಾ. ಮಂಜರಿ ಚಂದ್ರ).

    baikady bharatanatyam competition dance Music roovari
    Share. Facebook Twitter Pinterest LinkedIn Tumblr WhatsApp Email
    Previous Articleʼಸಾಹಿತ್ಯ ಭಂಡಾರʼ ಕಾರ್ಯಕ್ರಮ
    Next Article ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ
    roovari

    Add Comment Cancel Reply


    Related Posts

    ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ‘ರಜತ ಕಲಾ ಯಾನ’ | ಅಕ್ಟೋಬರ್ 26

    October 22, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಪುಸ್ತಕ ಬಿಡುಗಡೆ ಮತ್ತು ಪ್ರದರ್ಶನ | ಅಕ್ಟೋಬರ್ 25

    October 22, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಗೀತೆಗಳು’ | ಅಕ್ಟೋಬರ್ 26

    October 22, 2025

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಿರಿಯ ನಾಗರಿಕರಿಗೆ ಕವಿಗೋಷ್ಠಿ

    October 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.