Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಶಾರದಾ ನಾಟ್ಯಾಲಯದ ‘ತ್ರಿದಶ ನಾಟ್ಯ ಕಲೋತ್ಸವ’ದ ಸಮಾರೋಪ ಸಮಾರಂಭ

    November 3, 2025

    ವಿಪ್ರವೇದಿಕೆಯಿಂದ ದಶಮಾನೋತ್ಸವ ಸರಣಿಯ ‘ಗೀತ-ನೃತ್ಯ ಸಂಭ್ರಮ’

    November 3, 2025

    ‘ಪುಟಾಣಿ ಕಿನ್ನರಿ ಕವಿತಾ’ ಮಕ್ಕಳ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ

    November 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಪುಟಾಣಿ ಕಿನ್ನರಿ ಕವಿತಾ’ ಮಕ್ಕಳ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ
    Book Release

    ‘ಪುಟಾಣಿ ಕಿನ್ನರಿ ಕವಿತಾ’ ಮಕ್ಕಳ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ

    November 3, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್. ಇವರು ರಚಿಸಿದ ‘ಪುಟಾಣಿ ಕಿನ್ನರಿ ಕವಿತಾ’ ಎಂಬ ಮಕ್ಕಳ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 18 ಅಕ್ಟೋಬರ್ 2025ರ ಶನಿವಾರ ಬಿ.ಸಿ. ರೋಡಿನಲ್ಲಿರುವ ಕನ್ನಡ ಭವನದಲ್ಲಿ ಅಭಿರುಚಿ ಜೋಡುಮಾರ್ಗ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಬಂಟ್ವಾಳ ವತಿಯಿಂದ ನಡೆಯಿತು.

    ಈ ಸಂದರ್ಭ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕ, ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ, “ನಮ್ಮೊಳಗಿನ ಮಗುವನ್ನು ಇಂದು ಉಳಿಸಿಕೊಳ್ಳಬೇಕಾಗಿದೆ. ಮಕ್ಕಳ ಸಾಹಿತ್ಯವೆಂದರೆ ನಮ್ಮದೇ ಆದ ಮಾತುಗಳ ಪ್ರತಿಫಲನವಾಗಿದೆ. ಅಪ್ಪ, ನನ್ನನ್ನು ಯಾರಿಗೆ ಕೊಡುತ್ತೀರಿ ಎಂದು ನಚಿಕೇತ ತನ್ನ ಅಪ್ಪನಲ್ಲಿ ಕೇಳುವ ಪ್ರಶ್ನೆ ಅತ್ಯುತ್ತಮ ಮಕ್ಕಳ ಸಾಹಿತ್ಯವೇ ಅಲ್ಲವೇ ಎಂದು ಪ್ರಶ್ನಿಸಿದ ಅವರು, ಪ್ರತಿಯೊಬ್ಬರೊಳಗೂ ಇರುವ ಮಗುವನ್ನು ಜಾಗೃತಗೊಳಿಸಬೇಕು, ನಾವು ಮುಗ್ಧತೆಯನ್ನು ಕಳೆದುಕೊಳ್ಳಬಾರದು. ಸಾಹಿತ್ಯದಲ್ಲಿ ಶ್ರೇಷ್ಠವಾದ ಮಕ್ಕಳ ಸಾಹಿತ್ಯವೆಂದರೆ ನಮ್ಮದೇ ಮಾತು, ನಮ್ಮದೇ ಸ್ವರದ ಅಭಿವ್ಯಕ್ತಿಯಾಗಿದೆ. ನಿಸರ್ಗ ಅವರದ್ದೇ ಆದ ಸ್ವರವನ್ನು ಪ್ರತಿಯೊಬ್ಬರಿಗೂ ಕೊಟ್ಟಿದೆ. ಇಂದು ನಾಗರಿಕತೆಯ ಪ್ರಭಾವದಲ್ಲಿ ಮಕ್ಕಳು ಬೇಗ ದೊಡ್ಡವರಾಗುತ್ತಿದ್ದಾರೆ. ಮುಗ್ಧತೆಯನ್ನು ಬೇಗ ಕಳೆದುಕೊಳ್ಳುತ್ತಿದ್ದಾರೆ. ಮಗುವಿಗೆ ದ್ವಂದ್ವ ಇಲ್ಲ. ಕಲಬೆರಕೆ ಇಲ್ಲದ ಅನುಭವ ಬಾಲ್ಯದಲ್ಲಿ ಎಲ್ಲರಿಗೂ ದೊರಕಿದೆ. ಆದರೆ ದೊಡ್ಡವರಾದ ಬಳಿಕ ನಾವದನ್ನು ಕಳೆದುಕೊಳ್ಳುತ್ತೇವೆ. ವಿಚಿತ್ರ, ವಿಪರ್ಯಾಸಗಳಿದ್ದರೂ, ಎಲ್ಲ ವಿಷಮತೆ ನಡುವೆ ಬೆಳೆಯುವ ಸಾಮರ್ಥ್ಯ ಮಗುವಿಗಿದೆ. ಮನಸ್ಸೆಂದರೆ ಕನ್ನಡಿಯಲ್ಲಿ ಪೂರ್ವಾಗ್ರಹರಹಿತ ಚಿತ್ರಗಳನ್ನು ಮಗು ಕಾಣುತ್ತದೆ. ಹೀಗಾಗಿ ಮಕ್ಕಳ ಸಾಹಿತ್ಯದೆಡೆಗೆ ನಾವು ಸಾಗಬೇಕಾಗಿದೆ” ಎಂದು ಹೇಳಿದರು.

    ಕೃತಿ ಲೋಕಾರ್ಪಣೆಗೊಳಿಸಿ, ಅವಲೋಕನ ಮಾಡಿದ ಪುತ್ತೂರು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಶ್ರೀಧರ ಎಚ್.ಜಿ. ಮಾತನಾಡಿದರು. ಕೃತಿಕಾರ ರಾಧೇಶ ತೋಳ್ಪಾಡಿ ಮಾತನಾಡಿ, ಕವನ ಸಂಕಲನದ ಕುರಿತು ತಿಳಿಸಿದರು. ಕವಿತೆಗಳಿಗೆ ರೇಖಾಚಿತ್ರ ರಚಿಸಿದ ಸಜೀಪಮೂಡ ಪ್ರೌಢಶಾಲಾ ವಿಭಾಗದ ಶಿಕ್ಷಕ ಬಾಲಕೃಷ್ಣ ಶೆಟ್ಟಿಯವರನ್ನು ಗೌರವಿಸಲಾಯಿತು. ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಶೀನಾ ನಾಡೋಳಿ ಹಾಗೂ ಕೀರ್ತನಾ ಸಂಗೀತ ಶಾಲೆ ಮಾಣಿಮಜಲಿನ ವಿದ್ಯಾರ್ಥಿಗಳು ಮಕ್ಕಳ ಕವಿತೆಗಳನ್ನು ಹಾಡಿದರು. ಅಭಿರುಚಿ ಜೋಡುಮಾರ್ಗ ಅಧ್ಯಕ್ಷ ದಾಮೋದರ್ ಸ್ವಾಗತಿಸಿ, ಹಿರಿಯ ರಂಗಕರ್ಮಿ ಮಹಾಬಲೇಶ್ವರ ಹೆಬ್ಬಾರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಬೆಂಜನ ಪದವು ಸರಕಾರಿ ಪದವಿಪೂರ್ವ ಕಾಲೇಜಿನ ಪಂಜೆ ಸಾಹಿತ್ಯ ಸಂಘುದ ವಿದ್ಯಾರ್ಥಿಗಳು ಸಹಕರಿಸಿದರು.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಹಿರಿಯ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭು ಶರ್ಮ ಇನಿಲ್ಲ
    Next Article ವಿಪ್ರವೇದಿಕೆಯಿಂದ ದಶಮಾನೋತ್ಸವ ಸರಣಿಯ ‘ಗೀತ-ನೃತ್ಯ ಸಂಭ್ರಮ’
    roovari

    Add Comment Cancel Reply


    Related Posts

    ಶ್ರೀ ಶಾರದಾ ನಾಟ್ಯಾಲಯದ ‘ತ್ರಿದಶ ನಾಟ್ಯ ಕಲೋತ್ಸವ’ದ ಸಮಾರೋಪ ಸಮಾರಂಭ

    November 3, 2025

    ವಿಪ್ರವೇದಿಕೆಯಿಂದ ದಶಮಾನೋತ್ಸವ ಸರಣಿಯ ‘ಗೀತ-ನೃತ್ಯ ಸಂಭ್ರಮ’

    November 3, 2025

    ಹಿರಿಯ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭು ಶರ್ಮ ಇನಿಲ್ಲ

    November 3, 2025

    ಶಾರದಾ ವಿದ್ಯಾಲಯದಲ್ಲಿ ವಚನ ಸಾಹಿತ್ಯದ ಬಗ್ಗೆ ರಸಪ್ರಶ್ನೆ

    November 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.