Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ | ನವೆಂಬರ್ 22

    November 20, 2025

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಮತ್ತು ‘ಪುಸ್ತಕ ಬಹುಮಾನ’ಕ್ಕೆ ಅರ್ಜಿ ಆಹ್ವಾನ

    November 20, 2025

    ಯಕ್ಷಗಾನ ಹಾಸ್ಯಗಾರ ರವಿಶಂಕ‌ರ್ ವಳಕುಂಜ ಇವರಿಗೆ ‘ಕದ್ರಿ ವಿಷ್ಣು ಪ್ರಶಸ್ತಿ’ ಪ್ರದಾನ

    November 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪುರಭವನದಲ್ಲಿ ವಿದುಷಿ ಅಮೃತಾ ವಿ. ಇವರ ರಂಗಪ್ರವೇಶ | ನವೆಂಬರ್ 22
    Bharathanatya

    ಮಂಗಳೂರಿನ ಪುರಭವನದಲ್ಲಿ ವಿದುಷಿ ಅಮೃತಾ ವಿ. ಇವರ ರಂಗಪ್ರವೇಶ | ನವೆಂಬರ್ 22

    November 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸನಾತನ ನಾಟ್ಯಾಲಯದ ನೃತ್ಯ ಗುರು ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆ ನಾಟ್ಯ ವಿದುಷಿ ಕುಮಾರಿ ಅಮೃತಾ ವಿ. ಇವರ ಭರತನಾಟ್ಯ ರಂಗ ಪ್ರವೇಶವು ದಿನಾಂಕ 22 ನವೆಂಬರ್ 2025ರ ಶನಿವಾರ ಸಂಜೆ ಗಂಟೆ 5-30ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

    ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ದೀಪ ಬೆಳಗಿಸಿ ಉದ್ಗಾಟಿಸುವ ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಮತ್ತು ಹಿರಿಯ ನೃತ್ಯ ಗುರು ಹಾಗೂ ವಿಮರ್ಶಕಿ ವಿದುಷಿ ಪ್ರತಿಭಾ ಎಂ.ಎಲ್. ಸಾಮಗ ಭಾಗವಹಿಸಲಿದ್ದಾರೆ.

    ಶ್ರೀಯುತ ವಾಸುದೇವ್ ಪಿ. ಮತ್ತು ಶ್ರೀಮತಿ ರೂಪ ವಾಸುದೇವ್ ಇವರ ಪುತ್ರಿ ಅಮೃತ ಬಿ.ಇ. ಪದವೀಧರೆಯಾಗಿದ್ದು, ಭರತನಾಟ್ಯದ ವಿದ್ವತ್ ಪರೀಕ್ಷೆಯನ್ನು ಅತ್ಯುನ್ನತ ಅಂಕ ದೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಅನೇಕ ಪ್ರಮುಖ ವೇದಿಕೆಗಳಲ್ಲಿ ಏಕಾರ್ಥ ನೃತ್ಯ ಪ್ರದರ್ಶನ ನೀಡಿರುವ ಅಮೃತ ತನ್ನ ಗುರುಗಳೊಂದಿಗೆ ರಾಜ್ಯ ಮತ್ತು ರಾಷ್ಟ್ರದಾದ್ಯಂತ ನೃತ್ಯ ಕಾರ್ಯಕ್ರಮ ನೀಡಿರುತ್ತಾಳೆ. ಬೆಂಗಳೂರು ದೂರದರ್ಶನದ ಬಿ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುವ ಇವರು ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ನಡೆಸಿದಂತಹ ಸಿತಾರ್ ವಾದನ ಪರೀಕ್ಷೆಯಲ್ಲಿ ವಿಶಾರದ ಪೂರ್ಣ ಹಂತವನ್ನು ಪೂರೈಸಿದ್ದು ಆಕಾಶವಾಣಿಯ ಯುವ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆಯನ್ನು ತೇರ್ಗಡೆ ಹೊಂದಿರುತ್ತಾರೆ.

    ನೃತ್ಯ ಕಾರ್ಯಕ್ರಮದ ಹಿಮ್ಮೇಳದಲ್ಲಿ ಹಾಡುಗಾರಿಕೆ ವಿದ್ವಾನ್ ಕಾರ್ತಿಕ್ ಹೆಬ್ಬಾರ್ ಬೆಂಗಳೂರು, ಮೃದಂಗ ವಾದನ ವಿದ್ವಾನ್ ಹರ್ಷ ಸಾಮಗ ಬೆಂಗಳೂರು, ಕೊಳಲುವಾದನ ವಿದ್ವಾನ್ ಕೆ. ಮುರಳೀದರ್ ಉಡುಪಿ ಭಾಗವಹಿಸಲಿದ್ದಾರೆ. ಕಲಾಭಿಮಾನಿಗಳಿಗೆ ಹಾರ್ದಿಕ ಸ್ವಾಗತ ಕೋರಲಾಗಿದೆ.

    baikady bharatanatyam dance Music Rangapravesha roovari
    Share. Facebook Twitter Pinterest LinkedIn Tumblr WhatsApp Email
    Previous Articleವರ್ಷನಿಧಿ ಪ್ರಕಾಶನದಿಂದ ಕೃತಿಗಳ ಲೋಕಾರ್ಪಣೆ ಸಮಾರಂಭ | ನವೆಂಬರ್ 22
    Next Article ಯಕ್ಷಗಾನ ಹಾಸ್ಯಗಾರ ರವಿಶಂಕ‌ರ್ ವಳಕುಂಜ ಇವರಿಗೆ ‘ಕದ್ರಿ ವಿಷ್ಣು ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ | ನವೆಂಬರ್ 22

    November 20, 2025

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಮತ್ತು ‘ಪುಸ್ತಕ ಬಹುಮಾನ’ಕ್ಕೆ ಅರ್ಜಿ ಆಹ್ವಾನ

    November 20, 2025

    ಯಕ್ಷಗಾನ ಹಾಸ್ಯಗಾರ ರವಿಶಂಕ‌ರ್ ವಳಕುಂಜ ಇವರಿಗೆ ‘ಕದ್ರಿ ವಿಷ್ಣು ಪ್ರಶಸ್ತಿ’ ಪ್ರದಾನ

    November 20, 2025

    ವರ್ಷನಿಧಿ ಪ್ರಕಾಶನದಿಂದ ಕೃತಿಗಳ ಲೋಕಾರ್ಪಣೆ ಸಮಾರಂಭ | ನವೆಂಬರ್ 22

    November 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.