Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದ ರಂಗಾಯಣ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನ | ಡಿಸೆಂಬರ್ 05

    December 4, 2025

    ಯಕ್ಷ ರಂಗಕ್ಕೆ ಶೋಭೆ ತಂದ ‘ಯಕ್ಷ ಪ್ರತಿಭೆ’ಯ ಪ್ರಶಸ್ತಿ ಪ್ರದಾನ ಸಮಾರಂಭ

    December 4, 2025

    ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಿಸಿದ ನಾಟಕ ರಂಗ ಪ್ರದರ್ಶನ

    December 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಿಸಿದ ನಾಟಕ ರಂಗ ಪ್ರದರ್ಶನ
    Arebhashe

    ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಿಸಿದ ನಾಟಕ ರಂಗ ಪ್ರದರ್ಶನ

    December 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸಿದ್ಧಗೊಂಡ ‘ಅಪ್ಪ’ ಅರೆಭಾಷೆ ನಾಟಕದ ರಂಗ ಪ್ರದರ್ಶನವು ದಿನಾಂಕ 27 ನವೆಂಬರ್ 2025ರಂದು ಸುಳ್ಯ ನೆಹರೂ ಸ್ಮಾರಕ ಮಹಾವಿದ್ಯಾಲಯದಲ್ಲಿ ನಡೆಯಿತು.

    ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ರಂಗಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, “ಭಾಷೆಯ ಬೆಳವಣಿಗೆಗೆ ಕಲೆಯೂ ಒಂದು ಮಾಧ್ಯಮ. ರಂಗಭೂಮಿಯ ಮೂಲಕ ಭಾಷೆಯು ಬೆಳವಣಿಗೆ ಸಾಧ್ಯ” ಎಂದು ಹೇಳಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, “ಅರೆಭಾಷೆಯ ಬೆಳವಣಿಗೆಗೆ ಅಕಾಡೆಮಿಯ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೀಗ ಹಲವು ಸಮಯದ ಪ್ರಯತ್ನದಿಂದ ಅರೆಭಾಷೆ ನಾಟಕ ಸಿದ್ದಗೊಂಡಿದೆ. ಸ್ಥಳೀಯ ಕಲಾವಿದರನ್ನೇ ಒಳಗೊಂಡ ನಾಟಕ ಸಿದ್ಧಪಡಿಸಲಾಗಿದೆ. ಒಂದು ವರ್ಷದಲ್ಲಿ 25ಕ್ಕೂ ಹೆಚ್ಚು ಪ್ರದರ್ಶನ ಮಾಡುವ ಉದ್ದೇಶ ಇದೆ” ಎಂದು ಹೇಳಿದರು.

    ಮುಖ್ಯ ಅತಿಥಿಗಳಾಗಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕಾರಾಮ ಏನೆಕಲ್, ರಂಗನಿರ್ದೇಶಕ ಬಾಸುಮಾ ಕೊಡಗು, ನೆಹರೂ ಸ್ಮಾರಕ ಮಹಾವಿದ್ಯಾಲಯದ ಪ್ರಾಂಶುಪಾಲ ಎಂ.ಎಂ. ರುದ್ರಕುಮಾರ್ ಭಾಗವಹಿಸಿದ್ದರು. ಅರೆಭಾಷೆ ಅಕಾಡೆಮಿ ಸದಸ್ಯ ಹಾಗೂ ನಾಟಕದ ನಿರ್ದೇಶಕ ಲೋಕೇಶ್ ಊರುಬೈಲು ಉಪಸ್ಥಿತರಿದ್ದರು. ಅರೆಭಾಷೆ ಅಕಾಡೆಮಿಯ ಸದಸ್ಯರಾದ ವಿನೋದ್ ಮೂಡಗದ್ದೆ, ಸ್ವಾಗತಿಸಿ, ಲೋಕೇಶ್ ಊರುಬೈಲು ವಂದಿಸಿ, ಸದಸ್ಯ ಸಂಚಾಲಕ ಚಂದ್ರಶೇಖರ ಪೇರಾಲು ಕಾರ್ಯಕ್ರಮ ನಿರೂಪಿಸಿದರು.

    Arebhashe baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಕಬ್ಬಿನಾಲೆ ಡಾ. ವಸಂತ ಭಾರದ್ವಾಜ್ ಇವರಿಗೆ ಪ್ರಶಸ್ತಿ ಪ್ರದಾನ
    Next Article ಯಕ್ಷ ರಂಗಕ್ಕೆ ಶೋಭೆ ತಂದ ‘ಯಕ್ಷ ಪ್ರತಿಭೆ’ಯ ಪ್ರಶಸ್ತಿ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಶಿವಮೊಗ್ಗದ ರಂಗಾಯಣ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನ | ಡಿಸೆಂಬರ್ 05

    December 4, 2025

    ಯಕ್ಷ ರಂಗಕ್ಕೆ ಶೋಭೆ ತಂದ ‘ಯಕ್ಷ ಪ್ರತಿಭೆ’ಯ ಪ್ರಶಸ್ತಿ ಪ್ರದಾನ ಸಮಾರಂಭ

    December 4, 2025

    ಉಡುಪಿಯಲ್ಲಿ ಕಬ್ಬಿನಾಲೆ ಡಾ. ವಸಂತ ಭಾರದ್ವಾಜ್ ಇವರಿಗೆ ಪ್ರಶಸ್ತಿ ಪ್ರದಾನ

    December 4, 2025

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ಡಿಸೆಂಬರ್ 04

    December 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.