ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ 2025-26ನೇ ಸಾಲಿಗೆ ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಪುರಸ್ಕಾರ-2026 ಹಾಗೂ ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ಅನುವಾದ ಪುರಸ್ಕಾರ 2026 ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಂಗಶ್ರೇಷ್ಠ ಪುರಸ್ಕಾರಕ್ಕಾಗಿ 60 ವರ್ಷಕ್ಕಿಂತ ಹಿರಿಯ, ಕೊಂಕಣಿ ಮಾತೃಭಾಷಿಕ, ರಂಗಭೂಮಿಯ ಏಳಿಗೆಗಾಗಿ ಸಿನೆಮಾ-ನಾಟಕಗಳಲ್ಲಿ ನಟನೆ, ನಿರ್ದೇಶನ, ನಾಟಕ ರಚನೆಯಂತಹ ಕ್ಷೇತ್ರಗಳಲ್ಲಿ ನಿರಂತರ ದುಡಿಮೆ ಹಾಗೂ ಸಮರ್ಪಣ ಭಾವದೊಂದಿಗೆ ಜೀವಮಾನದ ಸೇವೆ ನೀಡಿರುವ ರಂಗಕರ್ಮಿಗಳಿಂದ ನೇರವಾಗಿ ಅಥವಾ ಹಿತೈಷಿ ಕಲಾಸಕ್ತರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಅನುವಾದ ಪುರಸ್ಕಾರಕ್ಕಾಗಿ ಭಾಷಾಂತರ ಕ್ಷೇತ್ರದಲ್ಲಿ ವಿಶೇಷವಾಗಿ ಇತರ ಭಾಷೆಗಳ ಕೃತಿಗಳನ್ನು ಕೊಂಕಣಿಗೆ ಅತ್ಯುತ್ತಮವಾಗಿ ಅನುವಾದಿಸಿ ದೀರ್ಘ ಅವಧಿಗೆ ಸೇವೆ ಸಲ್ಲಿಸಿರುವವರಿಂದ ನೇರವಾಗಿ ಅಥವಾ ಹಿತೈಷಿ ಸಾಹಿತ್ಯಾಸಕ್ತರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಮೊದಲು www.vishwakonkani.org ತಮ್ಮ ಹೆಸರು ನೊಂದಾಯಿಸಿಕೊಂಡು, ಆನಂತರ ವಿವರವಾದ ಪ್ರಸ್ತಾವನ ಅರ್ಜಿಯನ್ನು ಅಧ್ಯಕ್ಷರು, ವಿಶ್ವ ಕೊಂಕಣಿ ಕೇಂದ್ರ, ಶಕ್ತಿನಗರ, ಮಂಗಳೂರು-575016 ಇಲ್ಲಿಗೆ ದಿನಾಂಕ 05 ಜನವರಿ 2026ರೊಳಗೆ ಕಳುಹಿಸಿಕೊಡಬೇಕಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 31 ಜನವರಿ 2026ರಂದು ಜರಗಲಿದೆ.
