Subscribe to Updates

    Get the latest creative news from FooBar about art, design and business.

    What's Hot

    ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ‘ಶೇಣಿ ಪ್ರಶಸ್ತಿ 2025’ ಪ್ರದಾನ

    December 24, 2025

    ಬಳ್ಳಪದವು ನಾರಾಯಣೀಯಂ ಆವರಣದಲ್ಲಿ ‘ವೇದ ನಾದ ಯೋಗ ತರಂಗಿಣಿ’ | ಡಿಸೆಂಬರ್ 25ರಿಂದ 28

    December 24, 2025

    ಪುತ್ತೂರಿನಲ್ಲಿ ಸಾಹಿತ್ಯ ಮತ್ತು ಚಿತ್ರಕಲೆಯ ಸಂಗಮ ‘ಚಿತ್ರಕಲಾ ಸ್ಪರ್ಧೆ’ | ಡಿಸೆಂಬರ್ 28

    December 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಳಮದ್ದಳೆ ಕಾರ್ಯಕ್ರಮ
    Yakshagana

    ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಳಮದ್ದಳೆ ಕಾರ್ಯಕ್ರಮ

    December 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್ ಸುರತ್ಕಲ್ ಇದರ ದಶಮಾನ ವರ್ಷ ಸಂಭ್ರಮಾಚರಣೆ ಪ್ರಯುಕ್ತ ದಿನಾಂಕ 22 ಡಿಸೆಂಬರ್ 2025ರಂದು ತಾಳಮದ್ದಳೆ ಕಾರ್ಯಕ್ರಮವು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ‘ಶ್ರೀ ರಾಮ ನಿರ್ಯಾಣ’ ಎಂಬ ಆಖ್ಯಾನದೊಂದಿಗೆ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ, ಚೆಂಡೆ ಮದ್ದಳೆಗಳಲ್ಲಿ ಶಿವಪ್ರಸಾದ್ ಪುನರೂರು, ಕೆ. ರಾಮ ಹೊಳ್ಳ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಲಕ್ಷ್ಮಣ), ಹರಿಣಾಕ್ಷಿ ಜೆ. ಶೆಟ್ಟಿ (ದೂರ್ವಾಸ), ಸತ್ಯಭಾಮ ಕಾರಂತ (ಕಾಲಪುರುಷ) ಸಹಕರಿಸಿದರು. ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಸಂಘದ ಸಂಚಾಲಕರಾದ ವಾಸುದೇವ ರಾವ್ ಸ್ವಾಗತಿಸಿ, ಅಧ್ಯಕ್ಷೆ ಸುಲೋಚನಾ ವಿ. ರಾವ್ ವಂದಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಂಜನೇಯ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಸಂಘದ ಹಿರಿಯ ಕಲಾವಿದೆ ಶುಭಾ ಅಡಿಗ ದಶಮಾನ ಸಂಭ್ರಮದಲ್ಲಿ ಇರುವ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಗೆ ಶುಭ ಹಾರೈಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯಿಂದ ‘ನಾಟ್ಯಾಂಜಲಿ ನಲವತ್ತರ ನಲಿವು’ | ಡಿಸೆಂಬರ್ 25ರಿಂದ ಜನವರಿ 03
    Next Article ನಾದನೃತ್ಯ ತಿಂಗಳ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ವರ್ಣಿಕಾ ಆಚಾರ್ಯ ನೃತ್ಯ ಪ್ರದರ್ಶನ | ಡಿಸೆಂಬರ್ 25
    roovari

    Add Comment Cancel Reply


    Related Posts

    ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ‘ಶೇಣಿ ಪ್ರಶಸ್ತಿ 2025’ ಪ್ರದಾನ

    December 24, 2025

    ಬಳ್ಳಪದವು ನಾರಾಯಣೀಯಂ ಆವರಣದಲ್ಲಿ ‘ವೇದ ನಾದ ಯೋಗ ತರಂಗಿಣಿ’ | ಡಿಸೆಂಬರ್ 25ರಿಂದ 28

    December 24, 2025

    ಪುತ್ತೂರಿನಲ್ಲಿ ಸಾಹಿತ್ಯ ಮತ್ತು ಚಿತ್ರಕಲೆಯ ಸಂಗಮ ‘ಚಿತ್ರಕಲಾ ಸ್ಪರ್ಧೆ’ | ಡಿಸೆಂಬರ್ 28

    December 24, 2025

    ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ‘ಅಖಿಲ ಕರ್ನಾಟಕ ಐದನೆಯ ಕವಿಕಾವ್ಯ ಸಮ್ಮೇಳನ’

    December 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.