Subscribe to Updates

    Get the latest creative news from FooBar about art, design and business.

    What's Hot

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವೀರರಾಣಿ ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 15
    Awards

    ವೀರರಾಣಿ ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 15

    January 2, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಳ್ಳಾಲ : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ದಿನಾಂಕ 14 ಫೆಬ್ರವರಿ 2026ರಂದು ಜರಗುವ ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಓರ್ವ ಮಹಿಳಾ ಸಾಧಕರಿಗೆ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ ಮತ್ತು ಓರ್ವ ಮಹಿಳಾ ಸಾಧಕರಿಗೆ ‘ವೀರರಾಣಿ ಅಬ್ಬಕ್ಕ ಪುರಸ್ಕಾರ’ಗಳನ್ನು ನೀಡಲು ನಿರ್ಧರಿಸಲಾಗಿದೆ. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗಳು ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ.

    ವೀರರಾಣಿ ಅಬ್ಬಕ್ಕ ಪ್ರಶಸ್ತಿ : ತುಳುನಾಡಿನಲ್ಲಿ ಹುಟ್ಟಿ ಸಾಹಿತ್ಯ, ಸಂಸ್ಕೃತಿ ಮತ್ತು ಸಂಶೋಧನಾ ವಿಭಾಗಗಳಲ್ಲಿ ಗಣನೀಯ ಸಾಧನೆ ಮಾಡಿದ ಓರ್ವ ಮಹಿಳೆಗೆ ಈ ಪ್ರಶಸ್ತಿ ಮೀಸಲಾಗಿದೆ. ನಾಡು, ನುಡಿ ಹಾಗೂ ಪರಂಪರೆಗೆ ನೀಡಿದ ಮಹತ್ವದ ಸೇವೆಯನ್ನು ಇಲ್ಲಿ ಗಮನಿಸಲಾಗುವುದು.

    ವೀರರಾಣಿ ಅಬ್ಬಕ್ಕ ಪುರಸ್ಕಾರ : ತುಳು ಸಂಸ್ಕೃತಿಯ ಹಿನ್ನೆಲೆಯೊಂದಿಗೆ ಕಲೆ, ಕ್ರೀಡೆ, ಸಮಾಜಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ ಮಹಿಳೆಯೋರ್ವರಿಗೆ ಅಬ್ಬಕ್ಕ ಪುರಸ್ಕಾರ ನೀಡಲು ಉದ್ದೇಶಿಸಲಾಗಿದೆ. ಚಲನಚಿತ್ರ, ನಾಟಕ, ಲಲಿತ ಕಲೆಗಳು, ಕ್ರೀಡಾರಂಗ, ನಾಟಿವೈದ್ಯ, ಜಾನಪದ ಪ್ರಕಾರಗಳಲ್ಲಿರುವ ಪರಿಶ್ರಮಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಪ್ರಶಸ್ತಿ ಮತ್ತು ಪುರಸ್ಕಾರಗಳಿಗೆ ಅರ್ಹತೆ ಹೊಂದಿದವರು ಅಥವಾ ಅವರ ಬಗ್ಗೆ ತಿಳಿದವರು ದಿನಾಂಕ 15 ಜನವರಿ 2026ರೊಳಗೆ ಈ ಕೆಳಗಿನ ವಿಳಾಸಕ್ಕೆ ಮಾಹಿತಿ ನೀಡಲು ಕೋರಲಾಗಿದೆ. (ಈ ಹಿಂದೆ ಪ್ರಶಸ್ತಿಗಾಗಿ ವಿವರಗಳನ್ನು ಕಳುಹಿಸಿಕೊಟ್ಟವರು ಪುನ: ಕಳುಹಿಸಿಕೊಡುವ ಅವಶ್ಯಕತೆಯಿರುವುದಿಲ್ಲ)

    ಸಂಪರ್ಕ ವಿಳಾಸ: ದಿನಕರ ಉಳ್ಳಾಲ್, ಅಧ್ಯಕ್ಷರು, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ, ಅಪ್ಪಯ್ಯ ಮೆನ್ಷನ್, ಪೆರ್ಮನ್ನೂರು ಅಂಚೆ, ಮಂಗಳೂರು – 575017, ದ. ಕ. ಜಿಲ್ಲೆ ಮೊಬೈಲ್ : 98800 88333 / 93433 43888, ಇಮೇಲ್ : [email protected]

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ
    Next Article ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ
    roovari

    Add Comment Cancel Reply


    Related Posts

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026

    ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ

    January 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.