Subscribe to Updates

    Get the latest creative news from FooBar about art, design and business.

    What's Hot

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೀ ಮಾಯೆಯೊಳಗೋ ನಿನ್ನೊಳು ಮಾಯೆಯೊ’ ಕಥಾ ಸಂಕಲನ ಲೋಕಾರ್ಪಣೆ
    Book Release

    ‘ನೀ ಮಾಯೆಯೊಳಗೋ ನಿನ್ನೊಳು ಮಾಯೆಯೊ’ ಕಥಾ ಸಂಕಲನ ಲೋಕಾರ್ಪಣೆ

    January 9, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಅಶ್ರಯದಲ್ಲಿ ಸಾಹಿತಿ, ಸಂಶೋಧಕಿ ರಾಜಶ್ರೀ ಟಿ. ರೈ ಪೆರ್ಲ ಇವರ ‘ನೀ ಮಾಯೆಯೊಳಗೋ ನಿನ್ನೊಳು ಮಾಯೆಯೊ’ ಕಥಾ ಸಂಕಲನದ ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ 07 ಜನವರಿ 2026ರಂದು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ಬಿ.ಎ. ವಿವೇಕ ರೈ ವಿಚಾರ ವೇದಿಕೆಯಲ್ಲಿ ನಡೆಯಿತು.

    ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ. ನಾಗಪ್ಪ ಗೌಡ ಕೃತಿ ಅನಾವರಣಗೊಳಿಸಿ ಮಾತನಾಡುತ್ತಾ “ಸಂಪ್ರದಾಯ ಮತ್ತು ಅಧುನಿಕತೆಯ ನಡುವಿನ ಸಂಘರ್ಷದಿಂದ ಕಥೆಗಳು ಹುಟ್ಟುತ್ತವೆ. ಸಾಮಾಜಿಕ ಅಸಮಾನತೆ, ವೈಷಮ್ಯ, ಕೌಟುಂಬಿಕ ಕಲಹ, ಧಾರ್ಮಿಕ ಡಾಂಭಿಕತೆ ಮೊದಲಾದವುಗಳನ್ನು ವಸ್ತುವಾಗುಳ್ಳ ಕತೆಗಳನ್ನು ಸುಂದರವಾಗಿ ಹೆಣೆದಿರುವ ಕಥೆಗಳು ರಾಜಶ್ರೀ ಟಿ. ರೈ ಪೆರ್ಲ ಇವರ ‘ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ’ ಸಂಕಲನದಲ್ಲಿದೆ” ಎಂದರು.

    ಪ್ರಾಧ್ಯಾಪಕರಾದ ಪ್ರೊ. ಸೋಮಣ್ಣ ಹೊಂಗಳ್ಳಿ ಅವರು ಕೃತಿಯ ಕುರಿತು ಮಾತನಾಡಿ, “ಕನ್ನಡ ಕಥಾಸಾಹಿತ್ಯದ ಇತಿಹಾಸ ಬಹಳ ಶ್ರೀಮಂತವಾದುದು. ಲೇಖಕಿ ರಾಜಶ್ರೀ ರೈ ಇವರು ಸಮಾಜದೊಳಗೇ ಇದ್ದು ಸಮಾಜದ ಅನೇಕ ಸೂಕ್ಷ್ಮತೆಗಳನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಈ ಕೃತಿಯ ಮೂಲಕ ಮಾಡಿದ್ದಾರೆ. ಮಹಿಳೆಯರ ಅಂತರಂಗದ ಅನೇಕ ಸಂಗತಿಗಳಿಗೆ ಸೇರಿದಂತೆ ಇವತ್ತಿನ ಸಮಾಜಕ್ಕೆ ಪೂರಕವಾಗಿ ಅನೇಕ ಹಂದರಗಳು, ಒಳ್ಳೆಯ ಸಂದೇಶಗಳು ಈ ಕೃತಿಯಲ್ಲಿದೆ” ಎಂದರು.

    ಸಹಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ಇವರು ಮಾತನಾಡಿ, “ಜಗತ್ತನ್ನು ಪರಿಸರವನ್ನು ಸೂಕ್ಷ್ಮವಾಗಿ ನೋಡಬಲ್ಲ ವ್ಯಕ್ತಿಗಳು ಮಾತ್ರ ಸೃಜನಶೀಲರಾಗಿ ಬೆಳೆಯಲು ಸಾಧ್ಯ. ರಾಜಶ್ರೀಯವರಲ್ಲಿ ಸೃಜನಶೀಲ ಬರಹ ಮತ್ತು ಸಂಶೋಧನ ಸಾಮರ್ಥ್ಯ ಮೇಳೈಸಿದೆ” ಎಂದರು. ಉಪನ್ಯಾಸಕ ಡಾ. ಯಶುಕುಮಾರ್ ಇವರು ಮಾತನಾಡಿ, “ನಮ್ಮ ಸುತ್ತುಮುತ್ತಲಿನ ಘಟನೆಗಳಿಗೆ ಮೂರ್ತ ಸ್ವರೂಪ ಕೊಡುವುದಕ್ಕೆ ನಾವು ವಿಫಲರಾಗುತ್ತಿದ್ದೇವೆ. ಆದರೆ ಲೇಖಕಿ ರಾಜಶ್ರೀಯವರು ಕಥನ ಕಟ್ಟುವ ಪ್ರಯತ್ನದಲ್ಲಿ ಸಫಲರಾಗಿದ್ದಾರೆ. ದೈವಾರಾಧನೆ ಹಾಗೂ ಸಮಾಜದ ಅನೇಕ ಸಂಗತಿಗಳು ಈ ಕೃತಿಯ ಮೂಲಕ ಅನಾವರಣಗೊಂಡಿದೆ” ಎಂದರು. ಲೇಖಕಿ ರಾಜಶ್ರೀ ಟಿ. ರೈ ಪೆರ್ಲ ಇವರು ಕಥೆ ಸೃಷ್ಟಿಯಾದ ವಾಸ್ತವತೆ ಹಾಗೂ ಕೌತುಕದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿ ನಾಯಕ ಅಭಿಷೇಕ್ ವಾಲ್ಮೀಕಿ ಮತ್ತು ಸ್ನೇಹ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪವಿತ್ರಾ ಸ್ವಾಗತಿಸಿ, ಸ್ನೇಹ ಕಾರ್ಯಕ್ರಮ ನಿರೂಪಿದರು.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ | ಕೊನೆಯ ದಿನಾಂಕ ಫೆಬ್ರವರಿ 10
    Next Article ಲೇಖಕಿ ಡಾ. ಗಿರಿಜಾ ಶಾಸ್ತ್ರಿಯವರಿಗೆ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’
    roovari

    Add Comment Cancel Reply


    Related Posts

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.