Subscribe to Updates

    Get the latest creative news from FooBar about art, design and business.

    What's Hot

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೇಖಕಿ ಡಾ. ಗಿರಿಜಾ ಶಾಸ್ತ್ರಿಯವರಿಗೆ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’
    Awards

    ಲೇಖಕಿ ಡಾ. ಗಿರಿಜಾ ಶಾಸ್ತ್ರಿಯವರಿಗೆ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’

    January 9, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸ ದಿವಂಗತ ಮುಳಿಯ ತಿಮ್ಮಪ್ಪಯ್ಯನವರ ನೆನಪಿನಲ್ಲಿ ನೀಡಲಾಗುವ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ಗೆ ಕನ್ನಡದ ಪ್ರಸಿದ್ಧ ಬರಹಗಾರ್ತಿ ಡಾ. ಗಿರಿಜಾ ಶಾಸ್ತ್ರಿ ಇವರು ಆಯ್ಕೆಯಾಗಿದ್ದಾರೆ. ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25,000/- ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 17 ಜನವರಿ 2026ರಂದು ನಡೆಯಲಿರುವುದು ಎಂದು ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿಯವರು ತಿಳಿಸಿರುತ್ತಾರೆ.

    ಡಾ. ಗಿರಿಜಾ ಶಾಸ್ತ್ರಿ ಇವರು ಮೈಸೂರಿನ ಕೆ.ಆರ್. ನಗರ ತಾಲೂಕಿನ ಸಾಲಿಗ್ರಾಮದವರು. ತಂದೆ ದಿ. ಶ್ರೀಕಂಠ ಶಾಸ್ತ್ರಿ, ತಾಯಿ ದಿ. ಸೀತಮ್ಮ. ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಸ್ನಾತಕೋತ್ತರ ಪದವೀಧರೆಯಾಗಿದ್ದು, ‘ಕನ್ನಡ ಕಥಾ ಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ’ ಮಹಾಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪಡೆದಿದ್ದಾರೆ. ಗಿರಿಜಾ ಶಾಸ್ತ್ರಿಯವರ ಬರಹಗಳು ಎಲ್ಲಾ ಪ್ರಕಾರಗಳಲ್ಲಿ ಮೂಡಿದ್ದು, ವಿಶೇಷವಾಗಿ ಕವಿತೆ, ಪ್ರಬಂಧ, ಅನುವಾದ ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿವೆ. ಸಂಶೋಧಕರಾಗಿ ಪ್ರಬಂಧಗಳನ್ನು ಇವರು ಬರೆದಿದ್ದಾರೆ. ಕಥಾಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ, ಮಾನಸಿಯ ಲೋಕ, ವೇಶ್ಯಾ ಸಂಕಥನ ಇವರ ಮುಖ್ಯ ಸಂಶೋಧನಾ ಪ್ರಬಂಧಗಳು. ಹೆಣ್ಣೊಬ್ಬಳ ದನಿ, ಪುಸ್ತಕ ಮತ್ತು ನವಿಲುಗರಿ, ಉರಿಯ ಉಯ್ಲು ಮೊದಲಾದವು ಇವರ ಕವನಸಂಕಲನಗಳು ಅಲ್ಲದೆ ಹಲವಾರು ವಿಮರ್ಶಾ ಲೇಖನಗಳನ್ನು ಬರೆದಿದ್ದಾರೆ. ಸಂಪಾದಕರಾಗಿ, ಅನುವಾದಕರಾಗಿ, ವಿಮರ್ಶಕರಾಗಿ ಹಲವಾರು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ ಇವರು ಅಮೇರಿಕಾಯಣ ಸಹಪಯಣ ಎಂಬ ಪ್ರವಾಸಕಥನವನ್ನು ಬರೆದಿದ್ದಾರೆ. ಸಮಾಜಮುಖಿ ಸಂಘಟನೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಅನೇಕ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರೀಯ, ಸ್ಥಳೀಯ ವಿಚಾರ ಸಂಕಿರಣಗಳಲ್ಲಿ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಮಂಡನೆ, ಕವಿಗೋಷ್ಠಿಗಳಲ್ಲಿ ಕವಿತಾ ವಾಚನ ಮಾಡಿದ್ದಲ್ಲದೆ, ಅಭಿನಂದನ ಗ್ರಂಥಗಳಲ್ಲಿ ಲೇಖನಗಳನ್ನು ಬರೆದಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಇವರಿಗೆ ಹರಿಹರ ಶ್ರೀ ಪ್ರಶಸ್ತಿ, ಸಂಕ್ರಮಣ ಪ್ರಶಸ್ತಿ, ಸುಶೀಲಶೆಟ್ಟಿ ಪ್ರಶಸ್ತಿ, ಜಿ.ಎಸ್. ಶಿವರುದ್ರಪ್ಪ ಪ್ರಶಸ್ತಿ, ವಿಶಿಷ್ಟ ಲೇಖಕಿ ಪ್ರಶಸ್ತಿ ಸೇರಿದಂತೆ ಹಲವಾರು ಸಂಮಾನ ಗೌರವಗಳು ಸಂದಿವೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ನೀ ಮಾಯೆಯೊಳಗೋ ನಿನ್ನೊಳು ಮಾಯೆಯೊ’ ಕಥಾ ಸಂಕಲನ ಲೋಕಾರ್ಪಣೆ
    Next Article ಪುಸ್ತಕ ವಿಮರ್ಶೆ | ‘ನನ್ನ ಸೋಲೋ ಟ್ರಿಪ್’ ಹೊಸ ದೃಷ್ಟಿಕೋನದ ಪ್ರವಾಸ ಕಥನ
    roovari

    Add Comment Cancel Reply


    Related Posts

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.