Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ
    Literature

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 09 ಫೆಬ್ರುವರಿ 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೋಮವಾರಪೇಟೆಯ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ. ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಶ್ರೀಮತಿ ಜಲಜಾ ಶೇಖರ್ ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿದ್ದಾರೆ. ಇಲ್ಲಿಯವರೆಗೆ ಏಳು ಪುಸ್ತಕಗಳನ್ನು ಇವರು ಹೊರತಂದಿದ್ದು ಇವರ ಎಂಟನೆಯ ಪುಸ್ತಕವು ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಳ್ಳಲಿದೆ. ವಿಚಾರದೆಡೆಗೆ, ನೆಲಮುಗಿಲು, ಅಗ್ನಿಕುಂಡ, ಪ್ರತಿಕ್ಷ, ವಿಲೋಕನ ವೈಚಾರಿಕ ಲೇಖನಗಳು, ದೂರ ತೀರ ಯಾನ ಪ್ರವಾಸ ಕಥನ, ಕನ್ನಡಿಯ ಬಿಂಬ ಕೃತಿಗಳನ್ನು ರಚಿಸಿದ್ದಾರೆ.

    ಶೈಕ್ಷಣಿಕ, ಸಾಹಿತ್ಯ ಅಲ್ಲದೆ ಸಾಮಾಜಿಕ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ಸೋಮವಾರಪೇಟೆಯ ‘ಅಕ್ಕನ ಬಳಗ’ದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಡಿ.ಸಿ.ಸಿ. ಬ್ಯಾಂಕ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರ ಮಂಡನೆ, ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಸನ್ಮಾನವನ್ನು ಪಡೆದುಕೊಂಡಿದ್ದಾರೆ.

    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್, ನಿರ್ದೇಶಕರಾದ ಸಂಜೀವ ಜೋಶಿ, ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಗೌರವ ಕಾರ್ಯದರ್ಶಿಗಳಾದ ಎ.ಪಿ. ವೀರರಾಜು, ಕೆ.ಆರ್. ಜ್ಯೋತಿ ಅರುಣ್, ಕೋಶಾಧಿಕಾರಿ ಕೆ.ಪಿ. ದಿನೇಶ್, ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್, ನಿಕಟ ಪೂರ್ವ ಅಧ್ಯಕ್ಷ ಜವರಪ್ಪ, ಐಗೂರು ಹೋಬಳಿ ಸಮಿತಿ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್ ಉಪಸ್ಥಿತರಿದ್ದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ಶಕ್ತಿನಗರದ ಸರಕಾರಿ ವಿದ್ಯಾ ಸಂಸ್ಥೆಯಲ್ಲಿ ‘ರಂಗೋಲಿ ಸ್ಪರ್ಧೆ’ | ಜನವರಿ 18

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.