Subscribe to Updates

    Get the latest creative news from FooBar about art, design and business.

    What's Hot

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026

    ನಾಗಪ್ಪಯ್ಯ ಹಂದೆ ರಂಗಮಂದಿರದಲ್ಲಿ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜನವರಿ 17

    January 15, 2026

    ಮಂಗಳೂರಿನ ರಾಮಕೃಷ್ಣ ಮಠದ ಅಮೃತ ಭವನದಲ್ಲಿ ‘ಆರಾಧನೋತ್ಸವ 2026’ | ಜನವರಿ 17 ಮತ್ತು 18

    January 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಬಯಲಾಟ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಮತ್ತು ‘ವಾರ್ಷಿಕ ಪ್ರಶಸ್ತಿ’ ಪ್ರಕಟ
    Awards

    ಕರ್ನಾಟಕ ಬಯಲಾಟ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಮತ್ತು ‘ವಾರ್ಷಿಕ ಪ್ರಶಸ್ತಿ’ ಪ್ರಕಟ

    January 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಾಗಲಕೋಟೆ : ಕರ್ನಾಟಕ ಬಯಲಾಟ ಅಕಾಡೆಮಿಯಿಂದ ಪ್ರತಿವರ್ಷದಂತೆ ನೀಡುವ ‘ಗೌರವ ಪ್ರಶಸ್ತಿ’ಗೆ ಐವರನ್ನು ಹಾಗೂ ‘ವಾರ್ಷಿಕ ಪ್ರಶಸ್ತಿ’ಗೆ ಹತ್ತು ಜನ ಕಲಾವಿದರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ. ಕೆ.ಆರ್ು. ದುರ್ಗಾದಾಸ್ ತಿಳಿಸಿದ್ದಾರೆ.

    ಕರ್ನಾಟಕ ಬಯಲಾಟ ಅಕಾಡೆಮಿಯಿಂದ ಕೊಡಮಾಡುವ ‘ಗೌರವ ಪ್ರಶಸ್ತಿ’ಗೆ ಬಳ್ಳಾರಿ ಜಿಲ್ಲೆಯ ಕೆ. ಈರಣ್ಣ (ಬಯಲಾಟ), ಕೊಪ್ಪಳ ಜಿಲ್ಲೆಯ ಹನಮಂತಪ್ಪ ಪೂಜಾರ (ಸಣ್ಣಾಟ), ಬೆಳಗಾವಿಯ ಕಾಡಪ್ಪ ಯಲ್ಲಪ್ಪ ಉಪ್ಪಾರ (ಸಣ್ಣಾಟ), ಹಾಸನ ಜಿಲ್ಲೆಯ ಆರ್.ಬಿ. ಪಟ್ಟೇಗೌಡ (ಮೂಡಲಪಾಯ), ಬೆಳಗಾವಿಯ ಸುಶೀಲಮ್ಮ ಹೆಗಡೆ (ದೊಡ್ಡಾಟ)ದಲ್ಲಿ ಭಾಜನರಾಗಿದ್ದಾರೆ. ‘ವಾರ್ಷಿಕ ಪ್ರಶಸ್ತಿ’ಗೆ ಮೈಸೂರು ಜಿಲ್ಲೆಯ ಎಚ್.ಸಿ. ಶಿವಬುದ್ದಿ (ಸೂತ್ರದ ಗೊಂಬೆಯಾಟ), ಮಂಡ್ಯ ಜಿಲ್ಲೆಯ ಜಯಪ್ರಕಾಶಗೌಡ (ಮೂಡಲಪಾಯ), ವಿಜಯನಗರ ಜಿಲ್ಲೆಯ ಹೊಳೆಯಾಚೆ ಕೊಟ್ರಪ್ಪ (ಬಯಲಾಟ), ಬಾಗಲಕೋಟೆ ಜಿಲ್ಲೆಯ ಶಿವಾಜಿ ಜಾಧವ (ಬಯಲಾಟ), ಚಿತ್ರದುರ್ಗ ಜಿಲ್ಲೆಯ ನಂದಗೋಪಾಲ (ಬಯಲಾಟ), ಧಾರವಾಡ ಜಿಲ್ಲೆಯ ಮಲ್ಲಪ್ಪ ಕರಿಮಲ್ಲಣ್ಣವರ (ದೊಡ್ಡಾಟ), ಬಳ್ಳಾರಿ ಜಿಲ್ಲೆಯ ಬಂಡ್ರಿ ಲಿಂಗಪ್ಪ (ಬಯಲಾಟ), ವಿಜಯನಗರ ಜಿಲ್ಲೆಯ ಚೂಟಿ ಚಿದಾನಂದ (ಬಯಲಾಟ). ದಾವಣಗೆರೆ ಜಿಲ್ಲೆಯ ಓದೋವೀರಪ್ಪ (ಬಯಲಾಟ), ವಿಜಯಪುರ ಜಿಲ್ಲೆಯ ಮಳೆಪ್ಪ ಬಸಪ್ಪ ಬಡಿಗೇರ (ಬಯಲಾಟ) ಆಯ್ಕೆಯಾಗಿದ್ದಾರೆ.

    2025ನೇ ಸಾಲಿನ ಕರ್ನಾಟಕ ಬಯಲಾಟ ಅಕಾಡೆಮಿಯ ಗೌರವ ಮತ್ತು ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವು ಫೆಬ್ರುವರಿ ಮೊದಲ ವಾರದಲ್ಲಿ ಧಾರವಾಡದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. 2025ನೇ ಸಾಲಿನ ಬಯಲಾಟ ಗೌರವ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಬಯಲಾಟ ಕಲಾಪ್ರಕಾರಗಳಿಗೆ ನೀಡಿರುವ ಅಮೂಲ್ಯವಾದ ಹಾಗೂ ಅನನ್ಯವಾದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗೌರವ ಪ್ರಶಸ್ತಿ ಪುರಸ್ಥತರಿಗೆ ತಲಾ ರೂ.ಐವತ್ತು ಸಾವಿರ ನಗದು, ಪ್ರಶಸ್ತಿ ಫಲಕ, ಶಾಲು ಹಾರ ಮತ್ತು ಪ್ರಶಸ್ತಿ ಪತ್ರ ಹಾಗೂ ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ.ಇಪ್ಪತ್ತೈದು ಸಾವಿರ ನಗದು, ಪ್ರಶಸ್ತಿ ಫಲಕ, ಶಾಲು, ಹಾರ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

    award baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10
    Next Article ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಎಷ್ಟೊಂದು ನಾವೆಗಳು’
    roovari

    Add Comment Cancel Reply


    Related Posts

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026

    ನಾಗಪ್ಪಯ್ಯ ಹಂದೆ ರಂಗಮಂದಿರದಲ್ಲಿ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜನವರಿ 17

    January 15, 2026

    ಮಂಗಳೂರಿನ ರಾಮಕೃಷ್ಣ ಮಠದ ಅಮೃತ ಭವನದಲ್ಲಿ ‘ಆರಾಧನೋತ್ಸವ 2026’ | ಜನವರಿ 17 ಮತ್ತು 18

    January 15, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಎಷ್ಟೊಂದು ನಾವೆಗಳು’

    January 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.