ಮಂಗಳೂರು : ದ.ರಾ. ಬೇಂದ್ರೆಯವರು ಕನ್ನಡದ ಶ್ರೇಷ್ಠ ಕವಿ. ಕಾವ್ಯವನ್ನೇ ಉಸಿರಾಡಿದ ಈ ಕವಿಯು ಕನ್ನಡದ ಎಲ್ಲ ಮಾದರಿಯ ಕಾವ್ಯ ಪ್ರಕಾರಗಳಲ್ಲೂ ತನ್ನ ಪ್ರತಿಭೆಯನ್ನು ಮೆರೆದವರು. ಬೇಂದ್ರೆ ಅವರ ಭಾಷಾ ವೈಖರಿಯು ಅದ್ಭುತವಾದುದು. ಅವರ ಕಾವ್ಯ ಜನಪದ ಗೀತೆಗಳಂತೆ ಕಂಡರೂ ಜನಪದವನ್ನು ಮೀರಿ ಆತ್ಮ ಅಧ್ಯಾತ್ಮಗಳ ಕಡೆಗೆ ಮುಖ ಮಾಡಿರುವುದು ಕವಿಯ ಅನನ್ಯತೆಯೇ ಆಗಿದೆ. 31 ಜನವರಿ 1896ರಲ್ಲಿ ಜನಿಸಿ ಕನ್ನಡ ಕಾವ್ಯದ ಅದ್ಭುತಗಳನ್ನು ಸೃಷ್ಟಿಸಿದ ಕವಿ ಬೇಂದ್ರೆಯವರ 131ನೇ ಜನ್ಮದಿನಾಚರಣೆಯನ್ನು ಮಂಗಳೂರಿನ ಕವಿ ಮಿತ್ರರು ಆಚರಿಸಿದರು.

ಬೇಂದ್ರೆಯವರ ಕಾವ್ಯದ ಬಗ್ಗೆ ಮಾತುಕತೆ, ಸಂವಾದ, ಕವಿತಾ ವಾಚನಗಳ ಮೂಲಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರೊ. ಪಿ. ಕೃಷ್ಣಮೂರ್ತಿ, ಗುಣಾಜೆ ರಾಮಚಂದ್ರ ಭಟ್, ಡಾ. ಸುರೇಶ ನೆಗಳಗುಳಿ, ಮಹೇಶ ಆರ್. ನಾಯಕ್, ಎನ್. ಸುಬ್ರಾಯ ಭಟ್, ರೇಮಂಡ್ ಡಿಕುನ್ಹ, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು, ರಾಜೇಂದ್ರ ಕೇದಿಗೆ, ಗೋಪಾಲಕೃಷ್ಣ ಶಾಸ್ತ್ರಿ, ಅನಾರ್ಕಲಿ ಸಲೀಂ ಮಂಡ್ಯ, ವೆಂಕಟೇಶ್ ಗಟ್ಟಿ, ರಘು ಇಡ್ಕಿದು, ವಿಭಾ ನಾರಾಯಣ್ ಪಾಲ್ಗೊಂಡಿದ್ದರು.

