ಬೆಂಗಳೂರು : ಬೆಂಗಳೂರಿನ ಒರಿಯಂಟಲ್ ಫೌಂಡೇಶನ್ ರಿಜಿಸ್ಟರ್ ವತಿಯಿಂದ ನಡೆದ 2026 ಸಾಲಿನ ಪ್ರತಿಷ್ಠಿತ ನೋಬೆಲ್ ಕನ್ನಡಿಗ ರಾಜ್ಯ ಪ್ರಶಸ್ತಿಯನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 01 ಫೆಬ್ರುವರಿ 2026ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ, ಕೃಷ್ಣರಾಜ ಪರಿಷತ್ ಮಂದಿರದಲ್ಲಿ ನಡೆಯಿತು.
ಜ್ಯೋತಿಷ್ಯ ರತ್ನ ಡಾ. ಕುಮಾರ ವಶಿಷ್ಠ ಆಶೀರ್ವಚನ ನೀಡಿದರು. ಧಾರ್ಮಿಕ ಚಿಂತಕ ಹಾಗೂ ಹಿಂದೂ ಸಭಾ ಅಧ್ಯಕ್ಷರಾದ ಡಾ. ಪ್ರಹಲ್ಲಾದ್, ಡಾ. ವಿಜಯಕುಮಾರ್, ಕರ್ನಾಟಕ ರಾಜ್ಯ ಸಿ.ಆರ್.ಒ. ಅಧ್ಯಕ್ಷರಾದ ಡಾ. ರಾಜೀವ್ ಗಾಂಧಿ, ಹೆಸರಾಂತ ನಟಿ ಅಭಿನಯ, ಖ್ಯಾತ ಹಿನ್ನೆಲೆ ಗಾಯಕಿ ಡಾ. ಗೀತಾ ಎಚ್. ಕೈವಾರ, ಡಾ. ಸ್ಮಿತಾ ಪಾಟೀಲ್, ಮಹಾಲಕ್ಷ್ಮಿ ವೃದ್ಧಾಶ್ರಮದ ಡಾ. ಗೋವಿಂದರಾಜು, ಕರ್ನಾಟಕ ರೈತ ಸಂಘದ ಡಾ. ಎಚ್. ಪುಷ್ಪಲತಾ, ಹಾಸ್ಯ ಕಲಾವಿದ ಮೈಸೂರು ರಮಾನಂದ, ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷರಾದ ಚಂದನ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ರಾಧಾ ಶಾನ್ ಭೋಗ್ ಕಾರ್ಯಕ್ರಮ ನಿರೂಪಿಸಿ. ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಸ್ವಾಗತಿಸಿ, ವಂದಿಸಿದರು.
