ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೋಳುವಾರು ಪುತ್ತೂರು ಇದರ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಲೆಯು ದಿನಾಂಕ 2 ಫೆಬ್ರವರಿ 2026ರಂದು ‘ಪಾರ್ಥ ಸಾರಥ್ಯ’ ಪ್ರಸಂಗದೊಂದಿಗೆ ನಡೆಯಿತು.
ಹಿಮ್ಮೇಳದಲ್ಲಿ ಆನಂದ ಸವಣೂರು, ನಿತೀಶ್ ಎಂಕಣ್ಣ ಮೂಲೆ, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ಶರಣ್ಯ ನೆತ್ತರಕೆರೆ, ಅನಿಷ್ ಕೃಷ್ಣ ಪುಣಚ, ಶಿವಪ್ರಸಾದ್ ನಾಕೂರು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ (ದಿವಾಕರ್ ಗೇರುಕಟ್ಟೆ), ಅರ್ಜುನ (ಭಾಸ್ಕರ್ ಬಾರ್ಯ), ಕೌರವ (ಗುಡ್ಡಪ್ಪ ಬಲ್ಯ), ಬಲರಾಮ (ಮಾಂಬಾಡಿ ವೇಣುಗೋಪಾಲ್ ಭಟ್) ಸಹಕರಿಸಿದರು.

