ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಶ್ರೀ ರಾಮಕೃಷ್ಣಯ್ಯ ವಿರಚಿತ ‘ಸುಧನ್ವಾರ್ಜುನ’ ಪ್ರಸಂಗದೊಂದಿಗೆ ಮಾಸಿಕ ತಾಳಮದ್ದಲೆಯು ದಿನಾಂಕ 17 ಫೆಬ್ರವರಿ 2026ರ ಮಂಗಳವಾರ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್ ಹಾಗೂ ಚೆಂಡೆ ಮದ್ದಲೆಗಳಲ್ಲಿ ಅನೀಶ ಕೃಷ್ಣ ಪುಣಚ, ಸಮರ್ಥ ವಿಷ್ಣು ಕಡಂಬಳಿಕೆ ಭಾಗವಹಿಸಿದರು. ಮುಮ್ಮೇಳದಲ್ಲಿ ಗುಡ್ಡಪ್ಪ ಬಲ್ಯ (ಸುಧನ್ವ), ಮಾಂಬಾಡಿ ವೇಣುಗೋಪಾಲ ಭಟ್ (ಅರ್ಜುನ), ಭಾಸ್ಕರ ಬಾರ್ಯ (ಪ್ರಭಾವತಿ), ಬಡೆಕ್ಕಿಲ ಚಂದ್ರಶೇಖರ ಭಟ್ (ಶ್ರೀ ಕೃಷ್ಣ), ದುಗ್ಗಪ್ಪ ನಡುಗಲ್ಲು (ಹಂಸಧ್ವಜ), ಪ್ರೇಮಲತಾ ರಾವ್ (ಶಂಖ, ಲಿಖಿತ), ಕಿಶೋರಿ ದುಗ್ಗಪ್ಪ ನಡುಗಲ್ಲು (ಸುಗರ್ಭೆ) ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ದೇವಳದ ಸಂಚಾಲನಾ ಸಮಿತಿಯ ಸದಸ್ಯರಾದ ಶಂಕರ ಭಟ್ ಪ್ರಾಯೋಜಿಸಿದರು. ಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಸ್ವಾಗತಿಸಿ, ದೇವಳದ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ವಂದಿಸಿದರು.
