ಮೈಸೂರು : ಜಾನಪದ ಕಲಾವಿದರ ಒಕ್ಕೂಟ (ರಿ.) ಮೈಸೂರು ವಿಭಾಗ ಕರ್ನಾಟಕ ಇದರ ವತಿಯಿಂದ ರಾಜ್ಯಮಟ್ಟದ ‘ಜಾನಪದ ಕಲಾರತ್ನ ಪ್ರಶಸ್ತಿ’ ಮತ್ತು ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 21 ಫೆಬ್ರವರಿ 2026ರಂದು ಬೆಳಗ್ಗೆ 11-00 ಗಂಟೆಗೆ ಮೈಸೂರಿನ ಕೃಷ್ಣಮೂರ್ತಿಪುರಂ ನಮನ ಕಲಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕರಾದ ಮಾನ್ಯಶ್ರೀ ಟಿ.ಎಸ್. ಶ್ರೀವತ್ಸ ಇವರು ವಹಿಸಲಿದ್ದು, ಮೈಸೂರು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಮಡ್ಡೀಕೆರೆ ಶ್ರೀ ಗೋಪಾಲ್ ಇವರು ಉದ್ಘಾಟನೆ ಮಾಡಲಿದ್ದಾರೆ. ನಾಡಿನ ಸುಪ್ರಸಿದ್ಧ ಕವಿ ಡಾ. ಜಯಪ್ಪ ಹೊನ್ನಾಳಿ ಇವರು ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಹಾಗೂ ಸಂಪನ್ಮೂಲ ವ್ಯಕ್ತಿ ಡಿ. ನಾಗರಾಜು ಇವರು ‘ಜಾನಪದ ಕಲೆಗಳ’ ಕುರಿತು ವಿಶೇಷ ನೀಡಲಿದ್ದಾರೆ. ಖ್ಯಾತ ಸಾಹಿತಿ ಟಿ. ಸತೀಶ್ ಜವರೇಗೌಡ ಮತ್ತು ಸಂಸ್ಥಾಪಕ ಕಾರ್ಯದರ್ಶಿ ಕುಮಾರಿ ಪ್ರಮೀಳಾ ಭಾಗ್ಯರಾಮ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

