ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಮ್ಮಿಕೊಳ್ಳುವ ‘ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ’ದ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆಯಾಗಿದ್ದಾರೆ. ಇವರ ಶೈಕ್ಷಣಿಕ, ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಯನ್ನು ಪರಿಗಣಿಸಿ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಹಿರಿಯರ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಈ ಯುವ ಸಾಹಿತ್ಯ ಸಮ್ಮೇಳನವು ಬಾಗಲಕೋಟೆ ಜಿಲ್ಲೆಯ ಮುಧೋಳದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ದಿನಾಂಕ 15 ಮಾರ್ಚ್ 2026 ಭಾನುವಾರದಂದು ನಡೆಯಲಿದ್ದು ಸಮ್ಮೇಳನದಲ್ಲಿ ಧ್ವಜರೋಹಣ, ಪುಸ್ತಕ ಬಿಡುಗಡೆ, ವಿಚಾರಗೋಷ್ಠಿ, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ತಾವೆಲ್ಲರೂ ಪ್ರೀತಿಯಿಂದ ಆಗಮಿಸಿ ಸಮ್ಮೇಳನವನ್ನು ಯಶಸ್ವಿ ಮಾಡಿಕೊಡಬೇಕೆಂದು ಎಂ. ರಮೇಶ ಕಮತಗಿ (ರಾಮಪ್ಪ ಮೇಟಿ) ಇವರು ತಿಳಿಸಿದ್ದಾರೆ. ಸಂಪರ್ಕ ಸಂಖ್ಯೆ 9686782774.
