Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ರಜಾರಂಗು-ರಂಗ ಮಂಚ’ ಶಿಬಿರದ ಸಮಾರೋಪ ಸಮಾರಂಭ – ಮೇ 27 ಮತ್ತು 28ರಂದು
    Camp

    ‘ರಜಾರಂಗು-ರಂಗ ಮಂಚ’ ಶಿಬಿರದ ಸಮಾರೋಪ ಸಮಾರಂಭ – ಮೇ 27 ಮತ್ತು 28ರಂದು

    May 27, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ : ಕಳೆದ ಕೆಲವು ವರ್ಷಗಳಿಂದ ಹೊಸ ಹೊಸ ಆವಿಷ್ಕಾರದೊಂದಿಗೆ ತೆಕ್ಕಟ್ಟೆಯ ಉಭಯ ಸಂಸ್ಥೆಗಳು ಚಿಣ್ಣರ ಶಾಲಾ ರಜಾದಿನಗಳನ್ನು ಸುದುಪಯೋಗಪಡಿಸಿಕೊಳ್ಳಬೇಕೆಂಬ ಉದ್ಧೇಶದಿಂದ ‘ರಜಾರಂಗು-ರಂಗ ಮಂಚ’ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ. ಹಲವಾರು ಪ್ರಸಿದ್ಧ ಗಣ್ಯರು ಸಂಪನ್ಮೂಲ ವ್ಯಕ್ತಿಯಾಗಿ ಭಾರತದ ಹಲವಾರು ಚಟುವಟಿಕೆಗಳನ್ನು ಮಕ್ಕಳಿಗೆ ಉಣಬಡಿಸುತ್ತಾ ಶಿಬಿರ ಉನ್ನತ ಮಟ್ಟವನ್ನು ತಲುಪಿದೆ. ಕರಾವಳಿ ಭಾಗದಲ್ಲಿ ಹೊಸ ಹೊಸ ವಿಭಿನ್ನ ಚಟುವಟಿಕೆಗಳನ್ನು ವರ್ಷಪೂರ್ತಿ ಕಲಾಸಕ್ತರಿಗಾಗಿ ನಡೆಸುತ್ತ ಸಾಗಿ ಬಂದ ಸಂಸ್ಥೆ ಕಳೆದ ವರ್ಷ 150 ಮಕ್ಕಳ ಶಿಬಿರವನ್ನು 30 ದಿನಗಳೂ ಅದ್ಧೂರಿಯಾಗಿ ನಡೆಸಿದ್ದು ಈ ಭಾರಿ ಹದಿನೈದು ದಿನಗಳ ಬೇಸಿಗೆ ಶಿಬಿರವನ್ನು ಬಹಳ ಚೊಕ್ಕದಾಗಿ ಪೂರೈಸಿ ಇದೀಗ ಸಮಾರೋಪದತ್ತ ಸಾಗಿ ಬಂದಿದೆ.

    ಉಭಯ ಸಂಸ್ಥೆಗಳು ಬೇರೆ ಬೇರೆಯಾಗಿ ಮೇ 27 ಮತ್ತು 28ರಂದು ಸಮಾರೋಪಕ್ಕೆ ಸಜ್ಜಾಗಿದ್ದು, ಮೊದಲ ದಿನವಾಗಿ ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಸಂಸ್ಥೆಯ ಆಶ್ರಯದಲ್ಲಿ ದಿ. ಕಾಳಿಂಗ ನಾವುಡ ಸಂಸ್ಮರಣಾ ಕಾರ್ಯಕ್ರಮವಾಗಿ ಶಿಬಿರಾರ್ಥಿಗಳಿಂದ ಸೀತಾರಾಮ ಶೆಟ್ಟಿ ಕೊಯಿಕೂರು ನಿರ್ದೇಶನದಲ್ಲಿ ‘ದ್ರೌಪದಿ ಪ್ರತಾಪ’ ಯಕ್ಷಗಾನ ತಾಳಮದ್ದಲೆ ಹಾಗೂ ರಂಗ ನಿರ್ದೇಶಕ ರೋಹಿತ್ ಎಸ್. ಬೈಕಾಡಿ ನಿರ್ದೇಶನದಲ್ಲಿ ನವಗಿರಿನಂದರವರ ಕಥೆ ಆಧಾರಿತ ನಾಟಕ ‘ಹಕ್ಕಿ ಮಕ್ಕಳು’ ಪ್ರದರ್ಶನಗೊಳ್ಳಲಿದೆ. ಅಂದು ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಆನಂದ ಸಿ. ಕುಂದರ್, ಹೊಸಂಗಡಿ ರಾಜೀವ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮ, ಉಪನ್ಯಾಸಕ ಸುಜಯೀಂದ್ರ ಹಂದೆ, ನ್ಯಾಯವಾದಿ ಶ್ರೀಧರ ಪಿ.ಎಸ್., ಕಾಳಿಂಗ ನಾವುಡರ ಒಡನಾಡಿ ಗಂಪು ಪೈ ಸಾಲಿಗ್ರಾಮ ಉಪಸ್ಥಿತಲಿರುವರು.

    ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ನೇತೃತ್ವದಲ್ಲಿ ಶಿಬಿರದ ಸಂಘಟಕರಿಂದ ಜಯಂತ್ ಕಾಯ್ಕಿಣಿ ರಚನೆಯ ರೋಹಿತ್ ಎಸ್. ಬೈಕಾಡಿ ನಿರ್ದೇಶನದ ‘ಸೇವತಿ ಪ್ರಸಂಗ’ ಎನ್ನುವ ನಾಟಕ ರಂಗದಲ್ಲಿ ಪ್ರದರ್ಶನ ಕಾಣಲಿದೆ. ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಆನಂದ ಸಿ. ಕುಂದರ್, ಉದ್ಯಮಿ ಶಿವರಾಮ ಶೆಟ್ಟಿ ಮಲ್ಯಾಡಿ, ಪ್ರಸಿದ್ಧ ರಂಗ ನಟ ಉದ್ಯಾವರ ನಾಗೇಶ್, ಕಿರುತೆರೆ ಹಾಗು ರಂಗ ನಟ ಪ್ರದೀಪ್ ಚಂದ್ರ ಕುತ್ಪಾಡಿ, ಪ್ರಾಂಶುಪಾಲರಾದ ಅಭಿಲಾಷ ಎಸ್., ರಂಗ ನಿರ್ದೇಶಕ ರೋಹಿತ್ ಎಸ್. ಬೈಕಾಡಿ ಅಂದು ನಮ್ಮೊಂದಿಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಚಿತ್ರಕಲಾಮಂದಿರ ಕಲಾ ವಿದ್ಯಾಲಯ – ‘ಚಿತ್ರಕಲೆಯಲ್ಲಿ ಪದವಿ’
    Next Article ‘ದಿ ವಿಕ್ಟರಿ ಆಫ್ ಸುದರ್ಶನ’ ಇಂಗ್ಲಿಷ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ಶಿವೋಹಂ’ ನಾಟಕ ಪ್ರದರ್ಶನ | ಮೇ 31

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.