Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಟೀಲು ದುರ್ಗಾ ಮಕ್ಕಳ ಮೇಳದ ಕಲಾ ಪರ್ವ ಹಾಗೂ ಪ್ರಶಸ್ತಿ ಪ್ರದಾನ
    Awards

    ಕಟೀಲು ದುರ್ಗಾ ಮಕ್ಕಳ ಮೇಳದ ಕಲಾ ಪರ್ವ ಹಾಗೂ ಪ್ರಶಸ್ತಿ ಪ್ರದಾನ

    June 6, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಜಪೆ: ಕಟೀಲು ದುರ್ಗಾ ಮಕ್ಕಳ ಮೇಳದ 14ನೇ ವಾರ್ಷಿಕ ಕಲಾ ಪರ್ವ ದಿನಾಂಕ 04-06-2023ರ ಶನಿವಾರ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯಿತು. ಈ ಸಂದರ್ಭ ಯುವ ಹಾಗೂ ಹಿರಿಯ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
    ಎರಡೂವರೆ ಸಾವಿರಕ್ಕೂ ಹೆಚ್ಚು ಬಾರಿ ‘ಶ್ರೀದೇವಿ’ ಪಾತ್ರವನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸಿ ಪ್ರಸಿದ್ಧರಾಗಿರುವ ಹಿರಿಯ ಕಲಾವಿದ ಬಾಯಾರು ರಮೇಶ ಭಟ್ಟ ಅವರಿಗೆ ಕಟೀಲು ದುರ್ಗಾ ಮಕ್ಕಳ ಮೇಳ ಪ್ರಶಸ್ತಿ ಹಾಗೂ ಉದಯೋನ್ಮುಖ ಯುವ ಪ್ರತಿಭೆ ಪ್ರದ್ಯುಮ್ನ ಮೂರ್ತಿ ಕಡಂದಲೆ ಯವರಿಗೆ ಶ್ರೀನಿಧಿ ಆಸ್ರಣ್ಣ ಸ್ಮರಣಾರ್ಥ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಹಿರಿಯಕಲಾವಿದ, ಯಕ್ಷಗಾನದ ಗುರು ಸಂಘಟಕ ಮತ್ತು ಸರಯೂ ಮಕ್ಕಳ ಮೇಳದ ಸಂಚಾಲಕ ರವಿ ಅಲೆವುರಾಯ ಅವರಿಗೆ ವಿಶೇಷ ಗೌರವಾರ್ಪಣೆ ನೀಡಿ ಸನ್ಮಾನಿಸಲಾಯಿತು.
    ಉದ್ಯಮಿ ರಾಮ ಪ್ರಕಾಶ್ ಹೊಳ್ಳ ಮಾತನಾಡಿ ‘ ಯಕ್ಷಗಾನದ ಪರಂಪರೆ ಹಾಗೂ ಮರೆತು ಹೋಗುತ್ತಿರುವ ಪೂರ್ವ ರಂಗದ ಅಭ್ಯಾಸ- ಪ್ರದರ್ಶನದ ಜತೆಗೆ ಸುಸಂಸ್ಕೃತ ಬದುಕಿನ ಪಾಠಗಳನ್ನು ಮಕ್ಕಳಲ್ಲಿ ಜಾಗೃತಗೊಳಿಸುವಲ್ಲಿ ದುರ್ಗಾ ಮಕ್ಕಳ ಮೇಳ ಶ್ಲಾಘನೀಯ ಪಾತ್ರವಹಿಸಿದೆ ’ ಎಂದರು. ದೇವಳದ ಅರ್ಚಕರಾದ ವೆಂಕಟರಮಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವೀ ಪ್ರಸಾದ್ ಶೆಟ್ಟಿ, ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರುಗುತ್ತು, ಚರಣ್ ಜೆ.ಶೆಟ್ಟಿ ಅತ್ತೂರು, ರತ್ನಾಕರ ಶೆಟ್ಟಿ ಎಕ್ಕಾರು, ರವಿರಾಜ ಆಚಾರ್ಯ ಬಜಪೆ, ರವಿ ಪ್ರಸನ್ನ, ಧಮೇಂದ್ರ ಕಾಟಿಪಳ್ಳ, ಸುಧಾಕರ ಪೂಂಜ ಮತ್ತಿತರರು ಉಪಸ್ಥಿತರಿದ್ದರು. ದುರ್ಗಾ ಮಕ್ಕಳ ಮೇಳದ ಅಧ್ಯಕ್ಷ ಹರಿ ನಾರಾಯಣದಾಸ ಆಸ್ರಣ್ಣ ಪ್ರಾಸ್ತಾವಿಕ ಮಾತನಾಡಿದರು. ಕಮಲಾದೇವಿ ಪ್ರಸಾದ ಆಸ್ರಣ್ಣ ಸ್ವಾಗತಿಸಿ ವಾದಿರಾಜ ಕಲ್ಲೂರಾಯ, ಪಶುಪತಿ ಶಾಸ್ತ್ರಿ ಮತ್ತು ವೈಷ್ಣವಿ ರಾವ್‌ ಸನ್ಮಾನಪತ್ರ ವಾಚಿಸಿದರು. ಸ್ಕಂದ ಪ್ರಸಾದ್ ಭಟ್ ವಂದಿಸಿ, ಮೇಳದ ಕಾರ್ಯದರ್ಶಿ ವಾಸುದೇವ ಕಾರ್ಯಕ್ರಮ ನಿರೂಪಿಸಿದರು. ಬಳಿಕ ದುರ್ಗಾ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ‘ಭಾರ್ಗವ ವಿಜಯ’ ಯಕ್ಷಗಾನ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಹಯಗ್ರೀವದಲ್ಲಿ ಯಕ್ಷಗಾನ ತರಗತಿ
    Next Article ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.