Subscribe to Updates

    Get the latest creative news from FooBar about art, design and business.

    What's Hot

    ಬೇಕಲದಲ್ಲಿ ‘ಸಮನ್ವಯ ಗಡಿನಾಡ ಜಾನಪದ ಉತ್ಸವ’ | ಫೆಬ್ರುವರಿ 01

    January 31, 2026

    ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ‘ಉಡುಪಿ ಜಿಲ್ಲಾ ಗಮಕ ಕಲಾ ಸಮ್ಮೇಳನ’

    January 31, 2026

    ಪುಸ್ತಕ ಬಹುಮಾನಕ್ಕೆ ಕೃತಿ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 31

    January 31, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರಂಗಚಕ್ರದಿಂದ ‘ಅಭಿನಯ ಕಾರ್ಯಾಗಾರ‘ | ಜೂನ್ 16ರಿಂದ ಜುಲೈ 31
    Drama

    ಬೆಂಗಳೂರಿನ ರಂಗಚಕ್ರದಿಂದ ‘ಅಭಿನಯ ಕಾರ್ಯಾಗಾರ‘ | ಜೂನ್ 16ರಿಂದ ಜುಲೈ 31

    June 9, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ರಂಗಚಕ್ರ ತಂಡವು ಅಭಿನಯ ಕಾರ್ಯಾಗಾರದ ಮೂಲಕ ಹೊಸ  ಪ್ರತಿಭೆಗಳನ್ನು ರಂಗಭೂಮಿಗೆ ಪರಿಚಯಿಸುತ್ತ ಹಲವಾರು ನಾಟಕಗಳನ್ನು ಪ್ರಸ್ತುತಪಡಿಸಿದೆ. ಇವರ ಈ ಬಾರಿಯ  ಅಭಿನಯ ಕಾರ್ಯಾಗಾರವು ರಂಗಕರ್ಮಿ ಮಧು ಮಳವಳ್ಳಿಯವರ ನಿರ್ದೇಶನದಲ್ಲಿ ಜೂನ್ 16 ರಿಂದ ಜುಲೈ 31ರ ವರೆಗೆ ನಡೆಯಲಿದೆ. ಈ ಕಾರ್ಯಾಗಾರವನ್ನು ಹಿರಿಯ ರಂಗತಜ್ಞ ಡಾ. ಬಿ. ವಿ. ರಾಜಾರಾಮ್ ಇವರು ಉದ್ಘಾಟನೆ ಮಾಡಲಿದ್ದಾರೆ.

    18ವರ್ಷ ಮೇಲ್ಪಟ್ಟವರಿಗೆ ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದ್ದು, ನಾಡಿನ ಹೆಸರಾಂತ ರಂಗಕರ್ಮಿಗಳಾದ ಡಾ. ರಾಜರಾಮ್, ಸುರೇಶ್ ಆನಗಳ್ಳಿ, ಬಿ. ಸುರೇಶ, ಪ್ರಸನ್ನಕುಮಾರ್ ಕೆರಗೂಡು, ಲವಕುಮಾರ್, ಗುಂಡಣ್ಣ ಚಿಕ್ಕಮಗಳೂರು ಮತ್ತು ಉಮಾಶ್ರೀ ಮಧು ಮಳವಳ್ಳಿ ಮಾರ್ಗದರ್ಶನ ನೀಡಲಿದ್ದಾರೆ.

    ಈ ಕಾರ್ಯಾಗಾರವು ಸಂಜೆ 6 ರಿಂದ 9ರ ವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಮಾಸ್ತಿ ರಂಗ ತಾಲೀಮು ಕೊಠಡಿಯಲ್ಲಿ ನಡೆಯಲಿದ್ದು ಹೆಚ್ಚಿನ ಮಾಹಿತಿ, ನೋಂದಣಿ ಹಾಗೂ ಪ್ರವೇಶಾತಿಗಾಗಿ ಮಹೇಶ್ ಕುಮಾರ್ 8971600558 ಇವರನ್ನು ಸಂಪರ್ಕಿಸಬಹುದು.

    ಮಧು ಮಳವಳ್ಳಿ
    ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಗಸನಪುರದವರಾದ ಇವರು ಐ.ಟಿ.ಐ ಮುಗಿಸಿ ಆಟೋಮೋಟಿವ್ ಅಕ್ಸಲ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವಾಗಲೇ ರಂಗಭೂಮಿಯ ಗೀಳು ಹಿಡಿಸಿಕೊಂಡವರು.  16 ವರ್ಷಗಳಿಂದ ಕನ್ನಡ ರಂಗಭೂಮಿಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿಕೊಂಡಿರುವ ಇವರು ಸರಿ ಸುಮಾರು 60 ನಾಟಕಗಳಲ್ಲಿ ಅಭಿನಯ ಮಾಡಿದ್ದಾರೆ ಹಾಗೂ 20 ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ.

    ಬೆಳಕಿನ ವಿನ್ಯಾಸದಲ್ಲಿ ಪರಿಣತಿ ಹೊಂದಿದ ಇವರು ಸುಮಾರು 350 ಕಿಂತಲೂ ಹೆಚ್ಚು ನಾಟಕಗಳಿಗೆ ಮತ್ತು ನೃತ್ಯ ರೂಪಕಗಳಿಗೆ ಬೆಳಕಿನ ವಿನ್ಯಾಸ ಮಾಡಿರುತ್ತಾರೆ. ಶ್ರೀಯುತರು ‘ ರಂಗಬಂಡಿ ಮಳವಳ್ಳಿ ‘ ಸಂಸ್ಥೆಯನ್ನು ಹುಟ್ಟು ಹಾಕಿ ಕಳೆದ 6 ವರ್ಷಗಳಿಂದ ಮಳವಳ್ಳಿ ಭಾಗದ ಸರ್ಕಾರಿ ಶಾಲೆಯ 120 ರಿಂದ 150 ಮಕ್ಕಳಿಗೆ ಉಚಿತವಾಗಿ  ‘ ಮಕ್ಕಳ ಹಬ್ಬ ’ ಎಂಬ ಬೇಸಿಗೆ ಶಿಬಿರಗಳನ್ನು ಮಾಡುತ್ತಾ ಬಂದಿದ್ದಾರೆ.  ಯುವ ಜನತೆಗೆ ಪ್ರತಿವರ್ಷ ಒಂದು ತಿಂಗಳ ರಂಗತರಬೇತಿ ಶಿಬಿರವನ್ನು ಮಾಡಿ ಆ ಶಿಬಿರಾರ್ಥಿಗಳಿಗೆ ರಂಗ ಪ್ರಯೋಗಗಳನ್ನು ನಿರ್ದೇಶನ ಮಾಡಿ ರಾಜ್ಯದ ಹಲವಾರು ಕಡೆ ಪ್ರದರ್ಶನವನ್ನು ಮಾಡಿಸಿದ್ದಾರೆ. ಭಾರತದ  ಹಲವು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿ ಅನುಭವ ಪಡೆದಿರುವ ಇವರು ಧಾರವಾಡ ರಂಗಾಯಣದಲ್ಲಿ ಬೆಳಕಿನ ಮತ್ತು ಧ್ವನಿ ವಿಭಾಗದ ತಂತ್ರಜ್ಞರಾಗಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಿಯಾಲ್ ಗುತ್ತುವಿನಲ್ಲಿ ‘ಚಿತ್ರಕಲಾ ಪ್ರದರ್ಶನ’ | ಜೂನ್ 3ರಿಂದ 10
    Next Article ರಂಗಸ್ಪಂದನ ಮಂಗಳೂರು – ‘ಸಾಂಸ್ಕೃತಿಕ ರಂಗ ದಿಬ್ಬಣ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ | ಜನವರಿ 31 ಮತ್ತು ಫೆಬ್ರವರಿ 01

    January 30, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026

    ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ | ಜನವರಿ 29 ಮತ್ತು 30

    January 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.