Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಿಕ್ಷಕರ ಪ್ರತಿಭಾ ಪರಿಷತ್‌ ಆಯೋಜಿಸಿದ ‘ಕವನ ರಚನೆ ಮತ್ತು ವಾಚನ ಸ್ಪರ್ಧೆ’ಯ ವಿಜೇತರು
    Competition

    ಶಿಕ್ಷಕರ ಪ್ರತಿಭಾ ಪರಿಷತ್‌ ಆಯೋಜಿಸಿದ ‘ಕವನ ರಚನೆ ಮತ್ತು ವಾಚನ ಸ್ಪರ್ಧೆ’ಯ ವಿಜೇತರು

    June 13, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ) ಮೈಸೂರು, ಸಾಹಿತಿ ಶಿಕ್ಷಕರ ವೇದಿಕೆಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ಸಾಧಕ ಮಹಿಳೆಯರ ಕುರಿತು ‘ಕವನ ರಚನೆ ಮತ್ತು ವಾಚನ ಸ್ಪರ್ಧೆ’ಯ ಫಲಿತಾಂಶ ಘೋಷಣೆ ಮತ್ತು ಅಭಿನಂದನಾ ಪ್ರಮಾಣ ಪತ್ರ ವಿತರಣಾ ಸಮಾರಂಭವು ದಿನಾಂಕ 05-06-2023ರಂದು ನಡೆಯಿತು.

    ಸಮಾರಂಭದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ.) ಮೈಸೂರು ಇವರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ಪಿ. ಮಹೇಶ್ ವಹಿಸಿದ್ದು, ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಂತೋಷ ಕುಮಾರ ಬಂಡೆ ಇವರು ಮುಖ್ಯ ಅತಿಥಿಗಳಾಗಿ, ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶ್ರೀ ಚಂದ್ರಶೇಖರ ನಾಯಕ ಇವರು ಗೌರವ ಅತಿಥಿಗಳಾಗಿ ಹಾಗೂ ಸಹಕಾರ ಸಮಿತಿಗಳ ಮುಖ್ಯಸ್ಥರಾದ ಶ್ರೀಮತಿ ಉಮಾದೇವಿ ಗುಡ್ಡದ ಅತಿಥಿಗಳಾಗಿ ಭಾಗವಹಿಸಿದ್ದರು. ಪರಿಷತ್ತಿನ ಮುಖ್ಯಸ್ಥರಾದ ಶ್ರೀ ಲೀಲಾಧರ ಮೊಗೇರ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಲಕ್ಷ್ಮೀ ವಿ. ಭಟ್‌ – ಪ್ರಥಮ ಬಹುಮಾನ

    ಶ್ರೀಮತಿ ಭುವನೇಶ್ವರಿ ಅಂಗಡಿ – ದ್ವಿತೀಯ ಬಹುಮಾನ

    ಶ್ರೀಮತಿ ಭಾಗ್ಯ ಎಂ.ವಿ. – ಮೂರನೇ ಬಹುಮಾನ

    ಕವನ ರಚನೆ ಮತ್ತು ವಾಚನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಮಂಗಳೂರು ಉರ್ವಾ ಕೆನರಾ ಪ್ರೌಢಶಾಲೆಯ ಶಿಕ್ಷಕಿ ಲಕ್ಷ್ಮೀ ವಿ. ಭಟ್‌, ದ್ವಿತೀಯ ಬಹುಮಾನವನ್ನು ಗದಗ ನವಗುಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶ್ರೀಮತಿ ಭುವನೇಶ್ವರಿ ಅಂಗಡಿ ಮತ್ತು ಮೂರನೇ ಬಹುಮಾನವನ್ನು ಅರಸೀಕೆರೆ ಬಾಣಾವರದ ಶ್ರೀಮತಿ ಭಾಗ್ಯ ಎಂ.ವಿ. ಅವರು ಪಡೆದಿದ್ದಾರೆ. 125 ಶಿಕ್ಷಕ ಮತ್ತು ಶಿಕ್ಷಕಿಯರು ಭಾಗವಹಿಸಿದ ಈ ಸ್ಪರ್ಧೆಯ ತೀರ್ಪುಗಾರರಾಗಿ ಶ್ರೀ ಲಕ್ಷಣ ಮಾಳಿ, ಶ್ರೀಮತಿ ಸವಿತಾ ನಾಯ್ಕ, ಶ್ರೀಮತಿ ವಿನಯ ನಾಯಕ್, ಶ್ರೀ ಆನಂದ ಹುಕ್ಕನ್ನವರ, ಶ್ರೀಮತಿ ಸುನೀತಾ ಮಾಳಗಿ ಮತ್ತು ಶ್ರೀಮತಿ ಕೀರ್ತಿಲತಾ ಹೊಸ್ಸಾಳೆಯವರು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ಸಂಸ್ಕೃತಿ ಡ್ಯಾನ್ಸ್ ಅಕಾಡೆಮಿಯಲ್ಲಿ ತಾಳ ಕಾರ್ಯಗಾರ
    Next Article ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಣೇಶ ಕೊಲಕಾಡಿಯವರಿಗೆ ಸಾಹಿತ್ಯ ಪರಿಷತ್ತಿನಿಂದ ಗೌರವ
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.