Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಂಬಾರಿನಲ್ಲಿ ಕುಣಿತ ಭಜನಾ ತರಬೇತಿ ಸಮಾರೋಪ ಸಮಾರಂಭ
    Dance

    ಕೊಂಬಾರಿನಲ್ಲಿ ಕುಣಿತ ಭಜನಾ ತರಬೇತಿ ಸಮಾರೋಪ ಸಮಾರಂಭ

    July 11, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಡಬ : ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಕಡಬ ತಾಲೂಕು ಮತ್ತು ಶ್ರೀ ಮಂಜುನಾಥೇಶ್ವರ ಮಹಿಳಾ ಭಜನಾ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ಜರಗಿದ ಕುಣಿತ ಭಜನಾ ತರಬೇತಿ ಶಿಬಿರದ ಸಮಾರೋಪ ಹಾಗೂ ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಕೊಂಬಾರು ಮಣಿಭಾಂಡ ಮಂಜುಶ್ರೀ ಭಜನಾ ಮಂದಿರದಲ್ಲಿ ದಿನಾಂಕ : 18-06-2023ರಂದು ಜರಗಿತು.

    ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೊಂಬಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಯಶ್ರೀ ರಾಮಚಂದ್ರ ಗೌಡ, “ದೇವರ ನಾಮ ಸಂಕೀರ್ತನೆಯಿಂದ ನಮಗೆ ಮಾನಸಿಕ ನೆಮ್ಮದಿ, ಭಗವಂತನ ಕೃಪಾಕಟಾಕ್ಷ ದೊರೆಯುತ್ತದೆ. ಪ್ರತಿ ಮನೆಗಳಲ್ಲಿಯೂ ನಾವು ದಿನಕ್ಕೆ ಒಂದು ಹೊತ್ತಿಗಾದರೂ ಮನೆ ಮಂದಿ ಎಲ್ಲರೂ ಸೇರಿ ಭಜನೆ ಹಾಡುವ ರೂಢಿಯನ್ನು ಬೆಳೆಸಿಕೊಳ್ಳಬೇಕು. ಆ ಮೂಲಕ ಮನೆ ಮಕ್ಕಳಿಗೂ ಭಜನೆಯ ಬಗ್ಗೆ ಆಸಕ್ತಿ ಮೂಡಿಸಬೇಕು” ಎಂದರು.

    ಆಹ್ವಾನಿತ ಭಜನಾ ತಂಡಗಳ ಕುಣಿತ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಡಬ ಆರಕ್ಷಕ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ, “ಭಜನೆ ಎನ್ನುವುದು ಮನೆ ಮತ್ತು ಮನಗಳನ್ನು ಒಗ್ಗೂಡಿಸುವ ಮಾಧ್ಯಮವಾಗಿದೆ” ಎಂದರು. ವಿಹಿಂಪ ಕಡಬ ನಗರದ ಅಧ್ಯಕ್ಷ ಸತ್ಯನಾರಾಯಣ ಹೆಗ್ಡೆ ನಡುಮಜಲು ಮಾತನಾಡಿದರು. ಕೊಂಬಾರು ಮಣಿಭಾಂಡ ಮಂಜುಶ್ರೀ ಭಜನಾ ಮಂಡಳಿ ಅಧ್ಯಕ್ಷ ಓಡಪ್ಪ ಗೌಡ ತೇರೆಬೀದಿ ಅಧ್ಯಕ್ಷತೆ ವಹಿಸಿದ್ದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಕಡಬ ತಾ.ಯೋ. ಮೇದಪ್ಪ ಗೌಡ ನಾವೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್‌ನ ಕಡಬ ತಾಲೂಕು ಅಧ್ಯಕ್ಷ ಸುಂದರ ಗೌಡ ಒಗ್ಗು ಬಿಳಿನೆಲೆ, ಪ್ರಸನ್ನಕುಮಾರ್ ಕೆ.ಎನ್. ಕುಮಾರಪುರ ಕಟ್ಟೆ, ಪರಮೇಶ್ವರ ಗೌಡ, ವಿಜಯಕುಮಾರ್ ನಡುತೋಟ ಮತ್ತು ವಿನೋದ್ ಕುಮಾರ್ ಉಪಸ್ಥಿತರಿದ್ದರು. ಭಜನಾ ತರಬೇತಿ ನೀಡಿದ ತರಬೇತುದಾರರನ್ನು ಗೌರವಿಸಲಾಯಿತು. ಪರಿಸರದ 8 ಭಜನಾ ತಂಡಗಳು ಕುಣಿತ ಭಜನೆಯಲ್ಲಿ ಭಾಗವಹಿಸಿದವು. ಸಂಧ್ಯಾ ಪೆರುಂದೋಡಿ ಸ್ವಾಗತಿಸಿ, ಚಿದಾನಂದ ಗೌಡ ದೇವುಪಾಲ್ ಪ್ರಸ್ತಾವನೆಗೈದರು. ಅಪೂರ್ವ ಚೇತನ್‌ ಕುಮಾರ್‌ ಪೆರುಂದೋಡಿ ನಿರೂಪಿಸಿ, ಮಮತಾ ಅಮ್ಚೂರು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ‘ಎಂಪ್ಟಿ ಸ್ಪೇಸ್’ ನಲ್ಲಿ ‘ಹುತ್ತವ ಬಡಿದರೆ’ | ಜುಲೈ 16ರಂದು
    Next Article ಕಾಬೆಟ್ಟು ಶಾಲೆಯಲ್ಲಿ ಯಕ್ಷಗಾನ ತರಬೇತಿಗೆ ಚಾಲನೆ
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮಕ್ಕಳ ರಂಗ ಹಬ್ಬ’ | ಮೇ 20  

    May 19, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.