Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಪ್ರೆಸ್ಟೀಜ್ ಪ್ರಿಮ್ ರೋಸ್ ಹಿಲ್ಸ್ ನಲ್ಲಿ ಯಕ್ಷಗಾನ ಪ್ರದರ್ಶನ | ನವೆಂಬರ್ 22

    November 21, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ | ನವೆಂಬರ್ 23ರಿಂದ 29

    November 21, 2025

    ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಿಷಿಕಾ ದೇವಾಡಿಗ ಆಯ್ಕೆ

    November 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಿಂಬೆಕಾಯಿಪುರದಲ್ಲಿ ‘ರೊಟ್ಟಿಯ ಸಲುವಾಗಿ ಇಷ್ಟೆಲ್ಲಾ…’
    Drama

    ನಿಂಬೆಕಾಯಿಪುರದಲ್ಲಿ ‘ರೊಟ್ಟಿಯ ಸಲುವಾಗಿ ಇಷ್ಟೆಲ್ಲಾ…’

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೊಸಕೋಟೆ: ನಿಂಬೆಕಾಯಿಪುರದ ಅಭಯ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿರುವ ರಂಗಮಂದಿರದಲ್ಲಿ ‘ಜನಮನದಾಟ- ಹೆಗ್ಗೋಡು’ ವಿಶೇಷ ತಿರುಗಾಟ ಪ್ರಯುಕ್ತ ಏರ್ಪಡಿಸಿದ್ದ ‘ರೊಟ್ಟಿಯ ಸಲುವಾಗಿ ಇಷ್ಟೆಲ್ಲಾ…’ ನಾಟಕದ ಪ್ರದರ್ಶನವು ದಿನಾಂಕ 09-07-2023 ರಂದು ನಡೆಯಿತು.
    ‘ಜನಪದರು ಸಾಂಸ್ಕೃತಿಕ ವೇದಿಕೆ’ಯ ಅಧ್ಯಕ್ಷರಾದ ಕೆ.ವಿ.ವೆಂಕಟರಮಣಪ್ಪ ಪಾಪಣ್ಣ ಕಾಟಂನಲ್ಲೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಸಮಾಜದಲ್ಲಿ ಅದರಲ್ಲಿಯೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಮೌಢ್ಯತೆ, ಅನಕ್ಷರತೆಯಂತಹ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ರಂಗಕಲೆಯು ಪರಿಣಾಮಕಾರಿಯಾದ ಸಾಧನವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಡಾ.ಎಂ.ಗಣೇಶ್ ಇವರ ರಂಗರೂಪ ಮತ್ತು ನಿರ್ದೇಶನದಲ್ಲಿ ನವ್ಯ, ಪ್ರಗತಿಶೀಲ ಹಾಗೂ ಬಂಡಾಯದ ಮಹತ್ವದ ಲೇಖಕರಾದ ಪಿ.ಲಂಕೇಶರ ಕಥೆಗಳ ಸಂಕಲನದಲ್ಲಿನ ನಾಟಕಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವಲ್ಲಿ ಯಶಸ್ವಿಯಾಗಿವೆ” ಎಂದರು.
    ನಾಟಕವು ಸಮಾಜದಲ್ಲಿರುವ ಹಸಿವು ಹಾಗೂ ಭ್ರಷ್ಟಾಚಾರದಿಂದ ನಲುಗಿ, ಅಧಿಕಾರ ಶಾಹಿಯ ಬುದ್ಧಿಗೇಡಿತನವನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರ ಪ್ರಶಂಸೆ ಗಳಿಸಿತು. ಇದೇ ಸಂದರ್ಭದಲ್ಲಿ ನಿನಾಸಂ ಹೆಗ್ಗೋಡು ಇದರ ಪ್ರಾಂಶುಪಾಲರಾದ ಡಾ.ಎಂ.ಗಣೇಶ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಪದಾಧಿಕಾರಿಗಳಾದ ಜಗದೀಶ್ ಕೆಂಗನಾಳ, ಓ ಸುರೇಶ್, ಸಿದ್ದೇಶ್ವರ ನನಸುಮನೆ, ಮುನಿರಾಜು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಸರಣಿ ಕಾರ್ಯಕ್ರಮ – ‘ಚೂಡಾಮಣಿ’
    Next Article ಕೊಡಗು ಜಿಲ್ಲೆಯ ಕಸಾಪದಿಂದ ನೂತನ ಜಿಲ್ಲಾಧಿಕಾರಿಯವರಿಗೆ ಸ್ವಾಗತ
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ | ನವೆಂಬರ್ 22

    November 20, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ವಿಚಾರ ಸಂಕಿರಣ | ನವೆಂಬರ್ 23

    November 20, 2025

    ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 24

    November 19, 2025

    ಬೆಂಗಳೂರಿನ ಕಲಾಕ್ಷೇತ್ರದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ನವೆಂಬರ್ 21

    November 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.