Subscribe to Updates

    Get the latest creative news from FooBar about art, design and business.

    What's Hot

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಿನ್ನಿಗೋಳಿಯಲ್ಲಿ ಉಚಿತ ನೃತ್ಯ ತರಗತಿ ಕಾರ್ಯಕ್ರಮ ಉದ್ಘಾಟನೆ
    Bharathanatya

    ಕಿನ್ನಿಗೋಳಿಯಲ್ಲಿ ಉಚಿತ ನೃತ್ಯ ತರಗತಿ ಕಾರ್ಯಕ್ರಮ ಉದ್ಘಾಟನೆ

    July 18, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಿನ್ನಿಗೋಳಿ : ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್‌ನಲ್ಲಿ ಈ ಶೈಕ್ಷಣಿಕ ವರ್ಷದ ಉಚಿತ ನೃತ್ಯ ತರಗತಿ ಕಾರ್ಯಕ್ರಮದ ಉದ್ಘಾಟನೆಯು 10-07-2023 ರಂದು ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಿನ್ನಿಗೋಳಿಯ ಶಿವಪ್ರಣಾಮ್ ನೃತ್ಯ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಅನ್ನಪೂರ್ಣ ರಿತೇಶ್ “ವಿದ್ಯೆ ನಮ್ಮನ್ನು ಬಾಹ್ಯವಾಗಿ ರೂಪಿಸಿ ಬದುಕನ್ನು ನೀಡುತ್ತದೆ. ಕಲೆ ನಮ್ಮ ಅಂತಃ ರಂಗವನ್ನು ಪ್ರಚೋದಿಸಿ ಹೃದಯವನ್ನು ಅರಳಿಸುತ್ತದೆ. ಬಾಹ್ಯ ಹಾಗೂ ಅಂತಃ ರಂಗದ ವೃದ್ಧಿಯಿಂದ ಜೀವನ ಸಮೃದ್ಧವಾಗುತ್ತದೆ ಹಾಗೂ ಪ್ರಬುದ್ಧವಾಗುತ್ತದೆ. ಆ ಕಡೆಗೆ ಸಾಗುವ ಮನಸ್ಸು, ಶಿಕ್ಷಣ ಮತ್ತು ನೃತ್ಯಕಲೆಯಿಂದ ಇದು ಸಾಧ್ಯವಾಗಲಿದೆ. ಜೀವನದ ಪರಿಪೂರ್ಣತೆಗಾಗಿ ನೃತ್ಯಕಲೆ ಪೂರಕವಾಗಬಲ್ಲದು” ಎಂದು ಶುಭ ಹಾರೈಸಿದರು.
    ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, “ನೃತ್ಯಕಲೆ ನಮ್ಮ ಹೃದಯದ ಭಾಷೆ. ಈ ಕಲೆಯಲ್ಲಿ ಎಲ್ಲಾ ಶಿಕ್ಷಣವೂ ಇದೆ. ಹಾಗಾಗಿ ಶಿಕ್ಷಣದಲ್ಲಿ ನೃತ್ಯಕಲೆ ಇರಲೇಬೇಕು. ಇದರಿಂದ ಹೃದಯವಂತ ಮತ್ತು ಸುಸಂಸ್ಕೃತ ವ್ಯಕ್ತಿಗಳ ಪೀಳಿಗೆಯ ನಿರ್ಮಾಣ ಸಾಧ್ಯವಾಗುತ್ತದೆ.” ಎಂದು ನುಡಿದರು.
    ಈ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಸೊಸೈಟಿಯ ಕೋಶಾಧಿಕಾರಿ ಭುವನಾಭಿರಾಮ ಉಡುಪ, ಶಾಲಾ ಸಂಚಾಲಕರಾದ ದೇವಪ್ರಸಾದ್ ಪುನರೂರು, ನೃತ್ಯ ತರಬೇತುದಾರರಾದ ಸುಧಾಕರ್ ಸುರತ್ಕಲ್ ಉಪಸ್ಥಿತರಿದ್ದರು.
    ಶಾಲಾ ಪ್ರಾಂಶುಪಾಲರಾದ ಶ್ರೀ ಜಿತೇಂದ್ರ ವಿ. ರಾವ್ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಹೇಮಲತಾ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ದೀಪಿಕಾ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಆಯ್ಕೆ   
    Next Article ಮಂಗಳೂರು ಸ್ಯಾಂಡ್ಸ್ ಪಿಟ್ ಬೆಂಗ್ರೆ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆ
    roovari

    Add Comment Cancel Reply


    Related Posts

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಮಂಗಳೂರಿನ ಪುರಭವನದಲ್ಲಿ ಸ್ವರುಣ್ ಸ್ಮರಣಾಂಜಲಿ

    June 16, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.