Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಆಗಸ್ಟ್ 03

    July 30, 2025

    ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ‘ತಿಂತಿಣಿ ಮೌನೇಶ್ವರ’ | ಆಗಸ್ಟ್ 03

    July 30, 2025

    ಪುಸ್ತಕ ವಿಮರ್ಶೆ | ʼಕನ್ನಡತನʼ ಎಂಬ ಪ್ರಜ್ಞೆಯ ಅಸಲಿ ಮುಖ

    July 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಳು ಕೂಟ (ರಿ.) ಕುಡ್ಲ – ಬಂಗಾರ ಪರ್ಬ ಸರಣಿ ಕಾರ್ಯಕ್ರಮ -5 | ಜುಲೈ 29ರಂದು
    Harikathe

    ತುಳು ಕೂಟ (ರಿ.) ಕುಡ್ಲ – ಬಂಗಾರ ಪರ್ಬ ಸರಣಿ ಕಾರ್ಯಕ್ರಮ -5 | ಜುಲೈ 29ರಂದು

    July 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತುಳು ಕೂಟ ಕುಡ್ಲ ಇದರ ‘ಬಂಗಾರ ಪರ್ಬ’ ಸರಣಿ ಕಾರ್ಯಕ್ರಮವು ಶ್ರೀ ಕ್ಷೇತ್ರ ಶರವು ದೇವಾಲಯದ ಸಭಾಂಗಣದಲ್ಲಿ ದಿನಾಂಕ 29-07-2023ನೇ ಶುಕ್ರವಾರ ಸಂಜೆ 4 ಗಂಟೆಗೆ ನಡೆಯಲಿದೆ.

    ಶ್ರೀ ಕ್ಷೇತ್ರ ಶರವು ದೇವಾಲಯದ ಶಿಲೆ ಶಿಲೆ ಮೊಕ್ತೇಸರರಾದ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತುಳು ಕೂಟದ ಅಧ್ಯಕ್ಷರಾದ ಶ್ರೀ ಬಿ.ದಾಮೋದರ ನಿಸರ್ಗ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರು, ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರು ಹಾಗೂ ಒಡಿಯೂರು ಸೇವಾ ಬಳಗದ ಕಾರ್ಯಾಧ್ಯಕ್ಷರಾದ ಶ್ರೀ ತಾರಾನಾಥ ಶೆಟ್ಟಿ ಬೋಳಾರ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ(ನಿ.)ದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ ಮತ್ತು ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ಹರಿಕೃಷ್ಣ ಪುನರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ‘ದೇವಕೀ ತನಯ’, ಹಿರಿಯ ನ್ಯಾಯವಾದಿಗಳು ಮತ್ತು ಹರಿಕಥಾ ಪರಿಷತ್ತಿನ ಅಧ್ಯಕ್ಷರೂ ಆದ ಶ್ರೀ ಮಹಾಬಲ ಶೆಟ್ಟಿ ಕೂಡ್ಲು ‘ತುಳು ಹರಿಕಥೆ ಸಾಹಿತ್ಯ’ದ ಪರಿಚಯ ಮಾಡಿಕೊಡಲಿದ್ದು, ಹರಿದಾಸರಾದ ಶ್ರೀ ಪುಷ್ಕಳ್ ಕುಮಾರ್ ತೋನ್ಸೆ ಇವರು ‘ಸೀತೆನ ಮದ್ಮೆ’ ಎಂಬ ಕಥಾಕೀರ್ತನೆ ಮಾಡುವರು. ಕಲಾವಿದರೂ ಯಕ್ಷಗಾನ ಅಕಾಡಮಿಯ ಮಾಜಿ ಸದಸ್ಯರೂ ಆದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ‘ತುಳು ತಾಳಮದ್ದಳೆ’ಯ ಪರಿಚಯವನ್ನು ಮಾಡಲಿದ್ದಾರೆ.

    ಮತ್ತೆ ನಡೆಯುವ ‘ಕಾರ್ನಿಕದ ಕೊರಗಜ್ಜೆ’ ತಾಳಮದ್ದಳೆಯ ಹಿಮ್ಮೇಳದಲ್ಲಿ ಶ್ರೀ ಅಶೋಕ್ ಬೋಳೂರು ಮತ್ತು ಬಳಗದವರು ಹಾಗೂ ಮುಮ್ಮೇಳದಲ್ಲಿ ಶ್ರೀ ದಯಾನಂದ ಕತ್ತಲ್ಸಾರ್, ಶ್ರೀ ಸದಾಶಿವ ಆಳ್ವ ತಲಪಾಡಿ ಮತ್ತು ಶ್ರೀ ಪುಷ್ಪರಾಜ ಕುಕ್ಕಾಜೆ ಸಹಕರಿಸಲಿರುವರು. ತುಳು ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಮ್ಮೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕ.ಸಾ.ಪ ಉಡುಪಿ ಜಿಲ್ಲೆ ಮತ್ತು ಹೆಬ್ರಿ ತಾಲೂಕು ಘಟಕದ ವತಿಯಿಂದ ‘ಕನ್ನಡ ಡಿಂಡಿಮ ಸರಣಿ ಕಾರ್ಯಕ್ರಮ-2’
    Next Article ಮನೆ ಮನಗಳಲ್ಲಿ ಸಾಹಿತ್ಯ ಕಾರ್ಯಕ್ರಮದಲ್ಲಿ ಶ್ರೀ ಕೇಶವ ಕುಡ್ಲ ಅವರ ‘ಸಾಹಿತ್ಯ ಮತ್ತು ಸಂವಾದ’ | ಜುಲೈ 30ರಂದು
    roovari

    Add Comment Cancel Reply


    Related Posts

    ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ‘ತಿಂತಿಣಿ ಮೌನೇಶ್ವರ’ | ಆಗಸ್ಟ್ 03

    July 30, 2025

    ಬಂಟ್ವಾಳದಲ್ಲಿ ಕುಬಣೂರು ಶ್ರೀಧರ ರಾವ್ ಸ್ಮರಣೆ ಹಾಗೂ ತಾಳಮದ್ದಳೆ

    July 29, 2025

    ಬೆಳ್ತಂಗಡಿಯಲ್ಲಿ ಯಕ್ಷಸಾಂಗತ್ಯ ತಾಳಮದ್ದಳೆ ಸಪ್ತಾಹ ‘ಯಕ್ಷಾವತರಣ – 6’ | ಆಗಸ್ಟ್ 04ರಿಂದ 10

    July 29, 2025

    ಸರಣಿ ಕಾರ್ಯಕ್ರಮದಲ್ಲಿ ‘ಶ್ರೀ ರಾಮ ದರ್ಶನ’ ತಾಳಮದ್ದಲೆ

    July 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.