Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕ್ಷೇತ್ರ ಶರವು ದೇವಾಲಯದ ಸಭಾಂಗಣದಲ್ಲಿ ‘ಬಂಗಾರ ಪರ್ಬ’ ಸರಣಿ ಕಾರ್ಯಕ್ರಮ- 5 
    Literature

    ಶ್ರೀ ಕ್ಷೇತ್ರ ಶರವು ದೇವಾಲಯದ ಸಭಾಂಗಣದಲ್ಲಿ ‘ಬಂಗಾರ ಪರ್ಬ’ ಸರಣಿ ಕಾರ್ಯಕ್ರಮ- 5 

    August 2, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತುಳು ಕೂಟ (ರಿ.) ಕುಡ್ಲ ಇದರ ‘ಬಂಗಾರ ಪರ್ಬ’ 5ನೆಯ ಸರಣಿ ಕಾರ್ಯಕ್ರಮ’ವು ಶ್ರೀ ಕ್ಷೇತ್ರ ಶರವು ದೇವಾಲಯದ ಸಭಾಂಗಣದಲ್ಲಿ ದಿನಾಂಕ 29-07-2023ರಂದು ಜರಗಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ಶ್ರೀ ಕ್ಷೇತ್ರ ಶರವು ದೇವಾಲಯದ ಶಿಲೆ ಶಿಲೆ ಮೊಕ್ತೇಸರರಾದ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮಾತನಾಡುತ್ತಾ “ತುಳು ಭಾಷೆಯನ್ನು ನಾವು ತುಳುವರೇ ಮರೆತರೆ ಭಾಷಾ ಬೆಳವಣಿಗೆ ನಡೆಯದು. ಬೇರೆ ಬೇರೆ ಭಾಷೆಗಳನ್ನು ಕಲಿತರೂ ಮಾತೃಭಾಷೆಯನ್ನು ನಮ್ಮ ಮುಂದಿನ ಪೀಳಿಗೆಗೆ ನಾವೇ ತಲಪಿಸಬೇಕು. ಹಾಗಾದಾಗ ಮಾತ್ರ ಭಾಷೆಗೊಂದು ಸ್ಥಿರತೆ ಬರುತ್ತದೆ. ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ವಾಸಿಸುವಾಗಲೂ ತುಳುವನ್ನು ಪ್ರೀತಿಯಿಂದ ತೌಳವ ಮಂದಿಗಳೂ ಆಡುವಂತಾಗುತ್ತದೆ. ತುಳುಕೂಟ ಬಂಗಾರ್ ಪರ್ಬದ ಸಂಭ್ರಮಾಚರಣೆಯನ್ನು ನಡೆಸುತ್ತಿರುವಈ ಸಂದರ್ಭದಲ್ಲಿ ಅದಕ್ಕೆ ಬೇಕಾಗುವ ಜನ ಜಾಗೃತಿಯನ್ನು ಮತ್ತು ತುಳು ಕೃಷಿಯನ್ನು ಮಾಡುತ್ತಾ ಬರುತ್ತಿದೆ. ಶ್ರೀಕ್ಷೇತ್ರದಲ್ಲೂ ತುಳುವಿಗೆ ಸಂಬಂಧಪಟ್ಟಂತೆ ಅನೇಕ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿದ್ದೇವೆ. ಎಲ್ಲರೂ ಒಟ್ಟಾಗಿ ತುಳುತೇರನ್ನು ಎಳೆಯೋಣ.” ಎ೦ದು ಹೇಳಿದರು.

    ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಬ್ಯಾಂಕಿನ ಸಹಕಾರ ರತ್ನ ಬಿರುದಾಂಕಿತ ಶ್ರೀ ಚಿತ್ರರಂಜನ್ ಬೋಳಾರ ಇವರು “ತುಳು ಕಾರ್ಯಕ್ರಮ ಮತ್ತು ಸಂಘಟನೆಯ ಕಾರ್ಯಗಳಿಗೆ ನಮ್ಮ ಬ್ಯಾಂಕ್ ಪೂರ್ಣ ಸಹಕಾರ ನೀಡುತ್ತದೆ. ತುಳು ಕೂಟದ ತುಳು ಸರಣಿ ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತೇನೆ.” ಎಂದರು.

    ಅಧ್ಯಕ್ಷ ದಾಮೋದರ ನಿಸರ್ಗರು ತುಳು ಕೂಟದ ಧ್ಯೇಯ್ಯೋದ್ದೇಶಗಳ ಬಗ್ಗೆ ಪ್ರಸ್ತಾಪಿಸುತ್ತಾ ಸರ್ವ ತುಳುವರ ಸಹಕಾರವನ್ನು ಕೋರಿದರು.

    ಹಿರಿಯ ನ್ಯಾಯವಾದಿಗಳಾದ ಕೆ. ಮಹಾಬಲ ಶೆಟ್ಟಿಯವರು ‘ಹರಿಕಥೆಯಲ್ಲಿ ತುಳು ಸಾಹಿತ್ಯ’ ಎಂಬ ವಿಷಯದ ಬಗ್ಗೆ ಉಪನ್ಯಾಸವಿತ್ತರು. ಯುಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಪ್ರೋ.ಭಾಸ್ಕರ ರೈ ಕುಕ್ಕುವಳ್ಳಿಯವರು ‘ಯುಕ್ಷಗಾನದಲ್ಲಿ ತುಳು ಪ್ರಸಂಗ ಹಾಗೂ ತುಳು ಭಾಷೆ’ಯ ಬಗ್ಗೆ ವಿಸ್ತಾರವಾಗಿ ವಿವರಿಸಿದರು.

    ಬಳಿಕ ಪುಷ್ಕಳ ಕುಮಾರ್ ತೋನ್ಸೆಯವರಿಂದ ‘ಸೀತೆನ ಮದ್ಮೆ’ ಎಂಬ ತುಳುಹರಿಕಥೆ ನಡೆಯಿತು. ಶ್ರೀ ಅಶೋಕ್ ಬೋಳೂರು, ಶ್ರೀ ಶಿವಪ್ರಸಾದ್ ಪ್ರಭು, ಶ್ರೀ ವಿಘ್ನೇಶ್ ಶೆಟ್ಟಿ ಬೋಳೂರು, ಶ್ರೀ ಧೀರಜ್ ಆಚಾರ್ಯ. ಶ್ರೀ ದಯಾನಂದ ಜಿ. ಕತ್ತಲ್ಸಾರ್, ಶ್ರೀ ಸದಾಶಿವ ಆಳ್ವ ತಲಪಾಡಿ ಮತ್ತು ಶ್ರೀ ಪುಷ್ಪರಾಜ ಕುಕ್ಕಾಜೆಯವರ ತಂಡದಿಂದ ‘ಕಾರ್ನಿಕೊದ ಕೊರಗಜ್ಜೆ’ ಎಂಬ ತುಳು ತಾಳಮದ್ದಲೆ ನಡೆಯಿತು.

    ಗೋಪಾಲಕೃಷ್ಣ ಪಿ, ರಮೇಶ ಕುಲಾಲ್ ಬಾಯಾರು, ದಿನೇಶ್  ಕುಂಪಲ, ಡಾ. ರಾಕೇಶ್ ಕುಮಾರ್ ಬಿ. ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಹಾಗೂ ಹೇಮಾ ನಿಸರ್ಗ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷರಾದ ಲ. ಜೆ.ವಿ.ಶೆಟ್ಟಿ ಸ್ವಾಗತಿಸಿ, ಖಚಾಂಚಿ ಚಂದ್ರಶೇಖರ ಸುವರ್ಣರು ಧನ್ಯವಾದವಿತ್ತರು.

    Share. Facebook Twitter Pinterest LinkedIn Tumblr WhatsApp Email
    Previous Articleದೂರದರ್ಶನ ಚಂದನದಲ್ಲಿ ‘ತುಳುನಾಡ ಆಟಿದ ಕೂಟ’
    Next Article ಕಿನ್ನಿಗೋಳಿಯಲ್ಲಿ ಅನಂತ ಪ್ರಕಾಶದ ಗಾಯತ್ರೀ ಪ್ರಕಾಶನದಿಂದ ಕೃತಿಗಳ ಬಿಡುಗಡೆ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.