Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪರಿಚಯ ಲೇಖನ | ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲೊಂದು ‘ಆರ್ಟ್ಮಾ ಆರ್ಟ್ ಗ್ಯಾಲರಿ’
    Article

    ಪರಿಚಯ ಲೇಖನ | ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲೊಂದು ‘ಆರ್ಟ್ಮಾ ಆರ್ಟ್ ಗ್ಯಾಲರಿ’

    August 7, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಭಿತ್ತಿಯೊಂದಿಲ್ಲದಿರೆ ಚಿತ್ರವೆಂತಿರಲಹುದು?|
    ಚಿತ್ರವಿಲ್ಲದ ಭಿತ್ತಿ ಸೊಗಸಹುದದೆಂತು?||
    ನಿತ್ಯಸತ್ತ್ವವೇ ಭಿತ್ತಿ, ಜೀವಿತ ಕ್ಷಣಚಿತ್ರ|
    ತತ್ತ್ವವೀ ಸಂಬಂಧ – ಮಂಕುತಿಮ್ಮ||
    ಚಿತ್ರವೊಂದಕ್ಕೆ ಗೋಡೆ ಬೇಕೇ ಬೇಕು. ಚಿತ್ರವಿಲ್ಲದ ಗೋಡೆಯು ಕೂಡ ಸೊಗಸಾಗಿ ಕಾಣೋದಿಲ್ಲ. ಒಂದಕ್ಕೊಂದು ಸಂಬಂಧ.
    ಹೊರಗಿನ ಜಗತ್ತನ್ನು ವಿವಿಧ ರೀತಿಯಿಂದ ನೋಡುವವ ಕಲಾವಿದ. ತನ್ನ ಅನುಭವಗಳನ್ನು ವಿವಿಧ ರೀತಿಯಲ್ಲಿ ಸಂಯೋಜನೆಗೊಳಿಸಿ ತಿಳಿಸುವ ಪ್ರಯತ್ನ ಕಲಾವಿದರದು. ನಾಲ್ಕು ಗೋಡೆಗಳ ಮಧ್ಯೆ ರಚಿಸಿದ ಕಲಾವಿದನ ಕಲಾಕೃತಿಗಳನ್ನು ಸಮುದಾಯಕ್ಕೆ ತಲುಪಿಸುವಲ್ಲಿ, ಕಲೆಗೊಂದು ಮೌಲ್ಯವನ್ನು ತಂದುಕೊಡುವಲ್ಲಿ ಕಲಾ ಗ್ಯಾಲರಿಗಳ ಪಾತ್ರ ದೊಡ್ಡದು. ಕಲಾವಿದನ ಕಲಾಕೃತಿ ನೋಡುಗ ಇಲ್ಲದೆ ಸಾಫಲ್ಯವಾಗುವುದಿಲ್ಲ. ಕಲಾವಿದ ಸೃಷ್ಟಿ ಮಾಡಿದರೆ ಅದರಿಂದ ಪ್ರಭಾವಿತರಾಗುವವರು ನೋಡುಗರು.ಇವರಿಬ್ಬರ ಮಧ್ಯೆ ಸಂಪರ್ಕಸೇತುವಾಗಿ ಕೆಲಸ ಮಾಡುವುದು ಕಲಾ ಗ್ಯಾಲರಿ.
    ಇಂಥಹ ಒಂದು ಕಲಾ ಗ್ಯಾಲರಿ ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ‘ಆರ್ಟ್ಮಾ ಆರ್ಟ್ ಗ್ಯಾಲರಿ’ ಅನ್ನುವ ಹೆಸರಿನಲ್ಲಿ ತಲೆಯೆತ್ತಿದೆ. ಜನನಿಬಿಡ  ಸ್ಥಳವಾದರೂ ಗ್ಯಾಲರಿ ಒಳ ಆವರಣ ಪ್ರಶಾಂತವಾಗಿ ಹಳ್ಳಿ ಮನೆಯ ಮಾಳಿಗೆಯನ್ನು ನೆನಪಿಸುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಅಪಾರ ಪ್ರೀತಿ ಇರುವ ಶ್ರೀ ಆತ್ಮರಾಮ್ ಎನ್ ಗಂಗಾರಾಮ್ ಅವರು ಇದರ ಸಂಸ್ಥಾಪಕರು. ಅನೇಕ ಸೃಜನಶೀಲ ಮನಸ್ಸುಗಳಿಂದ ಸೃಷ್ಟಿಯಾದ ಕಲಾಕೃತಿಗಳಿಗೆ ಇದೊಂದು ವೇದಿಕೆಯಾಗಲಿದೆ. ಸಾಂಸ್ಕೃತಿಕ ನಗರವಾಗಿಸಲು ತನ್ನದೊಂದು ಚಿಕ್ಕ ಕೊಡುಗೆ ಎನ್ನುವುದು ಇವರ ಮನದಾಳ. ಹನ್ನೆರಡು ಜನ ಕಲಾವಿದರ ‘ಒರಟೋರಿಯೋ’(ORATORIO) ಕಲಾಪ್ರದರ್ಶನ ದಿನಾಂಕ 03-08-2023ರಂದು ಶ್ರೀ ಚಿರಂಜೀವ್ ಸಿಂಗ್ ಮತ್ತು ಶ್ರೀ ಎಸ್.ಜಿ.ವಾಸುದೇವ್ ಅವರಿಂದ ಲೋಕಾರ್ಪಣೆಗೊಂಡಿತು. ಈ ಗ್ಯಾಲರಿಯ ಮೇಲ್ವಿಚಾರಣೆಯನ್ನು ಕಲಾವಿದ ಶ್ರೀ ಧನಂಜಯ್ ದಾಸ್ ವಹಿಸಿಕೊಂಡಿದ್ದಾರೆ. ಈ ಕಲಾಪ್ರದರ್ಶನವು ದಿನಾಂಕ 22-08-2023ರ ತನಕ ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ ಸಂಜೆ 7ರ ತನಕ ತೆರೆದಿರುತ್ತದೆ. ಜನರ ಪ್ರೋತ್ಸಾಹ ಬೆಂಬಲದಿಂದ ಮಾತ್ರ ಕಲೆಯ ಬೆಳವಣಿಗೆ ಸಾಧ್ಯ. ನೀವು ಹೋಗಿ ನೋಡಿ ಬನ್ನಿ.
    • ಗಣಪತಿ ಎಸ್. ಹೆಗ್ಡೆ

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ಯಕ್ಷ ಬಾನುಲಿ ಸರಣಿ ತಾಳಮದ್ದಳೆ – ‘ಯಕ್ಷ ದಾಂಪತ್ಯ’
    Next Article ಮನೆ ಮನೆ ಗಮಕದಲ್ಲಿ ವಿದ್ವತ್ ಪೂರ್ಣ ವಾಚನ ಮತ್ತು ವ್ಯಾಖ್ಯಾನ ‘ಚಂದ್ರಹಾಸ ಚರಿತ್ರೆ’
    roovari

    Add Comment Cancel Reply


    Related Posts

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    ಪುಸ್ತಕ ವಿಮರ್ಶೆ | ಡಾ. ಮೋಹನ ಕುಂಟಾರ್ ಇವರ ‘ಪುರಾಣ ಕಥಾಕೋಶ’

    May 28, 2025

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.