Subscribe to Updates

    Get the latest creative news from FooBar about art, design and business.

    What's Hot

    ಸಾಗರದ ಲಯನ್ಸ್ ಕ್ಲಬ್ ನಲ್ಲಿ ‘ವಿಶ್ವ ಜಾನಪದ ದಿನಾಚರಣೆ’ | ಆಗಸ್ಟ್ 21

    August 20, 2025

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    August 20, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ‘ರಾಗರತ್ನಮಾಲಿಕೆ -40’ | ಆಗಸ್ಟ್ 22

    August 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಕೇಶವ ಭಟ್ಟ ಮತ್ತು ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ
    Awards

    ಉಡುಪಿಯಲ್ಲಿ ಕೇಶವ ಭಟ್ಟ ಮತ್ತು ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ

    August 9, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಾಹೆ ವಿಶ್ವವಿದ್ಯಾನಿಲಯದ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಸಂಯುಕ್ತ ಆಶ್ರಯದಲ್ಲಿ 2022 ನೇ ಸಾಲಿನ ಸಾಹಿತಿ ತಾಳ್ತಜೆ ಕೇಶವ ಭಟ್ಟ ಅವರ ಹೆಸರಿನಲ್ಲಿ ನೀಡುವ ‘’ಕೇಶವ ಭಟ್ಟ ಪ್ರಶಸ್ತಿ’ಯನ್ನು ಡಾ.ಹರಿಕೃಷ್ಣ ಭರಣ್ಯ ಮತ್ತು 2023ನೇ ಸಾಲಿನ ಪ್ರಶಸ್ತಿಯನ್ನು ಡಾ.ಎನ್.ಆರ್.ನಾಯಕ್ ಹಾಗೂ ಕವಿ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಿನಲ್ಲಿ ನೀಡುವ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಯನ್ನು ಶಂಕರ ಸಿಹಿಮೊಗ್ಗೆಯವರಿಗೆ ದಿನಾಂಕ 05-08-2023ರಂದು ಎಂ.ಜಿ.ಎಂ.ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.
    ಎಂ.ಜಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಡಾ.ತಾಳ್ತಜೆ ವಸಂತ ಕುಮಾರ್ ಪ್ರಸ್ತಾವನೆಗೈದರು. ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ರವಿರಾಜ್ ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿ ವಿಜೇತ ಕವನ ಸಂಕಲನ ‘‘ಇರುವೆ ಮತ್ತು ಗೋಡೆ’ ಕೃತಿ ಪರಿಚಯ ಮಾಡಿದರು. ಮಣಿಪಾಲ ಕೆ.ಎಂ.ಸಿ.ಡೀನ್ ಡಾ.ಪದ್ಮರಾಜ ಹೆಗ್ಡೆಯವರು ಕಡೆಂಗೋಡ್ಲು ಕವನ ಸಂಕಲನವನ್ನು ಬಿಡುಗಡೆಗೊಳಿಸಿದರು. ವಿಶ್ರಾಂತ ಕನ್ನಡ ಪ್ರಾಧ್ಯಾಪಕಿ ಡಾ.ಪ್ರಮೀಳಾ ಮಾಧವ ಇವರು ಗಿರಿಜಾ ಕಲ್ಯಾಣ-ಮರುಓದು ವಿಷಯದ ಕುರಿತು ಉಪನ್ಯಾಸ ನೀಡಿದರು. ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿ, ಎಂ.ಜಿ.ಎಂ.ಕಾಲೇಜಿನ ಉಪನ್ಯಾಸಕ ರಾಘವೇಂದ್ರ ತುಂಗ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ರಂಗ ಶ್ರಾವಣ’ ನಾಟಕೋತ್ಸವ 2023 | ಆಗಸ್ಟ್ 11, 12 ಮತ್ತು 13ರಂದು
    Next Article ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ, ಪ್ರತಿಭಾ ಪುರಸ್ಕಾರ
    roovari

    Add Comment Cancel Reply


    Related Posts

    ಸಾಗರದ ಲಯನ್ಸ್ ಕ್ಲಬ್ ನಲ್ಲಿ ‘ವಿಶ್ವ ಜಾನಪದ ದಿನಾಚರಣೆ’ | ಆಗಸ್ಟ್ 21

    August 20, 2025

    ಗಣೇಶ್ ಕಾಸರಗೋಡು ಇವರಿಗೆ ‘ರಾಷ್ಟ್ರೀಯ ಪ್ರಶಸ್ತಿ’

    August 19, 2025

    ಚೇಳ್ಯಾರು ಗುತ್ತಿನ ಮನೆಯಲ್ಲಿ ಆಗೋಳಿ ಮಂಜಣ್ಣ ನೆಂಪು ಮತ್ತು ಉಪನ್ಯಾಸ ಕಾರ್ಯಕ್ರಮ

    August 19, 2025

    ಮೂಡಬಿದಿರೆಯ ಜೈನ ಮಠದಲ್ಲಿ ‘ತುಳು ಕಾವ್ಯ ಯಾನ 28’ | ಆಗಸ್ಟ್ 24

    August 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.