Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಶ್ರೀ ರಾಮಚಂದ್ರ ಹೆಗಡೆಯವರಿಗೆ ‘ಯಕ್ಷ ಸಾಧಕ’ ಪ್ರಶಸ್ತಿ ಪ್ರದಾನ  
    Awards

    ಉಡುಪಿಯಲ್ಲಿ ಶ್ರೀ ರಾಮಚಂದ್ರ ಹೆಗಡೆಯವರಿಗೆ ‘ಯಕ್ಷ ಸಾಧಕ’ ಪ್ರಶಸ್ತಿ ಪ್ರದಾನ  

    August 16, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ: ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿಯಿಂದ ಕೊಡಮಾಡುವ ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಗುರು ಮಟಪಾಡಿ ವೀರಭದ್ರ ನಾಯಕ ಸ್ಮಾರಕ ‘ಯಕ್ಷ ಸಾಧಕ’ ಪ್ರಶಸ್ತಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಉಜ್ವಲ್ ಡೆವಲಪರ್ಸ್‌ ಅವರ ಸಹಕಾರದೊಂದಿಗೆ ಯಕ್ಷಗಾನ ಕ್ಷೇತ್ರದ ಹಿರಿಯ ಮೇರು ಕಲಾವಿದ ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆಯವರಿಗೆ ಪ್ರದಾನ ಮಾಡಲಾಯಿತು.

    ಅಜ್ಜರಕಾಡಿನ ಪುರಭವನದಲ್ಲಿ ದಿನಾಂಕ 12-08-2023ರಂದು ನಡೆದ ಈ ಪ್ರಶಸ್ತಿ ಪ್ರದಾನ ಸಂಮಾರಂಭಕ್ಕೆ ಮಾಹೆಯ ಕುಲಪತಿಗಳಾದ ಡಾ. ಎಂ.ಡಿ ವೆಂಕಟೇಶ್ ಅವರು ಚೆಂಡೆ ವಾದನದ ಮೂಲಕ ಚಾಲನೆ ನೀಡಿದರು. ಅವರು ಮಾತನಾಡಿ ‘ಯಕ್ಷಗಾನ ಎಂಬುದು ಒಂದು ಕಲೆ . ಇದು ಕರಾವಳಿ ಭಾಗದ ಸಾಂಸ್ಕೃತಿಕ ಪ್ರತೀಕವಾಗಿದೆ ಹಾಗೂ ಈಗಲೂ ಸಹ ಜನರ ಪ್ರೋತ್ಸಾಹ ಬೆಂಬಲದಿಂದ ಕಲೆ ಉಳಿದು ಬೆಳೆಯುವುದಕ್ಕೆ ಸಹಕಾರಿಯಾಗಿದೆ” ಎಂದರು. ಸಮ್ಮಾನ ಸ್ವೀಕರಿಸಿದ ಕೊಂಡದಕುಳಿ ಅವರು ಯಕ್ಷಗಾನ ಕಲೆಯ ಪ್ರಾಮುಖ್ಯತೆಯನ್ನು ವಿಶ್ಲೇಷಿಸುತ್ತಾ “ಕಲಾವಿದರು ನಾವು ಯಕ್ಷಗಾನದಿಂದ ಏನನ್ನು ಪಡೆಯುತ್ತೇವೋ ಅದರಲ್ಲಿ ಒಂದು ಭಾಗವನ್ನು ಕಲೆಯ ಬೆಳವಣಿಗೆಗೆ ಹಾಗೂ ಹಿಂತಿರುಗಿಸಿದರೆ ಆಗ ನಾವು ಸಮಾಜದ ಋಣವನ್ನು ತೀರಿಸಿದಂತಾಗುತ್ತದೆ” ಎಂದರು.

    ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮಾಹೆಯ ಸಹಕುಲಾಧಿಪತಿ ಹಾಗೂ ಬೇಳಂಜೆ ಸಂಜೀವ ಹೆಗ್ಡೆ, ಟ್ರಸ್ಟಿನ ವಿಶ್ವಸ್ಥ ಡಾ.ಎಚ್.ಎಸ್. ಬಲ್ಲಾಳ್ ಬಾಳೆ ಅವರು ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಲು ಟ್ರಸ್ಟ್ ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ವಿವರಿಸಿದ್ದಲ್ಲದೆ ಮಾಹೆಯ ವತಿಯಿಂದಲೂ ಯಕ್ಷಗಾನ ಕಲೆಯ ಬೆಳವಣಿಗೆಗೆ ಹೆಚ್ಚಿನ ನೆರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಮಾಹೆಯ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಡಾ. ಜಿ.ಶಂಕರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಜ್ವಲ್ ಡೆವಲಪರ್ಸ್ ನ ಎಂ.ಡಿ ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು. ಇಂದ್ರಾಳಿ ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ, ಪಳ್ಳಿ ಕಿಶನ್ ಹೆಗ್ಡೆ ಅವರು ಸ್ವಾಗತಿಸಿ ಪ್ರಸ್ತಾವನೆಗೈದರು, ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸಮ್ಮಾನ ಪತ್ರ ವಾಚಿಸಿ ನಿರೂಪಿಸಿದರು. ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳು ಪೂರ್ವ ರಂಗ ನಡೆಸಿಕೊಟ್ಟರು. ಕಲಾವಿದರ ಅಭಿನಂದನೆಯ ನಂತರ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಳುವಂಗಡ ಕಾವೇರಿ ಉದಯ ಇವರ ಪ್ರತಿಭೆಯನ್ನರಸಿ ಬಂದ ‘ಸಾಹಿತ್ಯ ರತ್ನ ರಾಷ್ಟ್ರೀಯ ಪ್ರಶಸ್ತಿ’
    Next Article ಮಂಗಳೂರಿನಲ್ಲಿ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ‘ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ’ಗೆ ಕಥಾ ಸಂಕಲನ ‘ಹಾಯ್ ಮೆಟಾಯ್’ ಕೃತಿ ಆಯ್ಕೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.