Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಕಲಾಭಿ ಯಕ್ಷಗಾನ ಅಧ್ಯಯನ ಕೇಂದ್ರ ಆರಂಭ

    June 9, 2025

    ಲೋಕರ್ಪಣೆಗೊಂಡ ‘ಕನ್ನಡಿಯಲ್ಲಿ ಕನ್ನಡಿಗ’ ಇದರ 3 ಮತ್ತು 4ನೇ ಸಂಚಿಕೆ

    June 9, 2025

    ಬಡಿಯಡ್ಕದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿ

    June 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್‌ ನಿಧನ
    Yakshagana

    ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್‌ ನಿಧನ

    June 9, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪೂಂಜಾಲಕಟ್ಟೆ : ತೆಂಕುತಿಟ್ಟಿನ ಹಿರಿಯ ಹಾಸ್ಯ ಕಲಾವಿದ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್‌ ದಿನಾಂಕ 08 ಜೂನ್ 2025ರಂದು ನಿಧನ ಹೊಂದಿದ್ದಾರೆ. ಇವರಿಗೆ 70 ವರ್ಷ ವಯಸ್ಸಾಗಿತ್ತು. ಶೆಟ್ಟಿಗಾರ್ ಅವರು ಕಟೀಲು 2ನೇ ಮೇಳದಲ್ಲಿ ಪ್ರಧಾನ ಹಾಸ್ಯಗಾರರಾಗಿ ಬಳಿಕ ನಿವೃತ್ತಿ ಹೊಂದಿದ್ದರು. ಅವರು ತೆಂಕುತಿಟ್ಟು ಯಕ್ಷಗಾನದಲ್ಲಿ ಆಗ್ರಗಣ್ಯ ಪಾರಂಪರಿಕ ಹಾಸ್ಯಗಾರರಾಗಿ ಪ್ರಸಿದ್ಧರಾಗಿದ್ದರು.

    ಸಂಗಬೆಟ್ಟುವಿನಲ್ಲಿ ದಿ. ರಾಮಣ್ಣ ಶೆಟ್ಟಿಗಾರ್ ಹಾಗೂ ಗಿರಿಜಾ ದಂಪತಿಯ ಪುತ್ರರಾಗಿ 1956ರ ಮಾರ್ಚ್ 01ರಂದು ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ಪಡೆದು ಯಕ್ಷಗಾನದ ಬಗ್ಗೆ ಆಕರ್ಷಿತರಾದರು. ಕೊರಗದಾಸ ಸಿದ್ದಕಟ್ಟೆ ಅವರಲ್ಲಿ ನಾಟ್ಯಾಭ್ಯಾಸ ಮಾಡಿ ತಮ್ಮ 22ನೇ ವರ್ಷದಲ್ಲಿ ರಂಗ ಪ್ರವೇಶಿಸಿ ವೇಣೂರು ಸುಂದರ ಆಚಾರ್ಯರ ಗರಡಿಯಲ್ಲಿ ಪಳಗಿದ ಅವರು ಒಬ್ಬ ಉತ್ತಮ ಹಾಸ್ಯ ಕಲಾವಿದರಾಗಿ ಮೂಡಿಬಂದರು. ತುಳು, ಕನ್ನಡ ಪೌರಾಣಿಕ ಪ್ರಸಂಗಗಳಲ್ಲಿ ಪ್ರೌಢಿಮೆಯನ್ನು ಸಾಧಿಸಿದ ಅವರು ಕನ್ನಡ, ತುಳು ಎರಡೂ ಭಾಷೆಗಳಲ್ಲಿ ಸಮರ್ಥವಾಗಿ ಪಾತ್ರ ನಿರ್ವಹಣೆ ಬಲ್ಲವರಾಗಿದ್ದರು. ತೆಂಕುತಿಟ್ಟಿನ ಕುಂಡಾವು, ಸುಬ್ರಹ್ಮಣ್ಯ, ಕೊಲ್ಲೂರು, ಸುಂಕದಕಟ್ಟೆ, ಸುರತ್ಕಲ್, ಕಟೀಲು ಮೇಳ ಹೀಗೆ ಸುಮಾರು ಐದು ದಶಕ ಯಕ್ಷಗಾನ ತಿರುಗಾಟ ಮಾಡಿದ ಕೀರ್ತಿ ಇವರಿಗೆ.

    ಕಟೀಲು ಮೇಳದಲ್ಲಿ ಸುದೀರ್ಘಕಾಲ ಪ್ರಧಾನ ಹಾಸ್ಯ ಕಲಾವಿದರಾಗಿದ್ದರು. ಮೂಕಾಸುರ, ವಿಜಯ, ದಾರುಕ, ಬಾಹುಕ, ವಾಪಣ್ಣ, ಶ್ರೀ ದೇವೀ ಮಹಾತ್ಮಯ ಪುರೋಹಿತ ಮುಂತಾದ ಪಾತ್ರಗಳು ಅವರಿಗೆ ಹೆಸರು ತಂದುಕೊಟ್ಟಿದ್ದವು. ಯಕ್ಷಗಾನ ಮತ್ತು ತಾಳಮದ್ದಳೆಗಳಲ್ಲಿ ಪಾತ್ರ ನಿರ್ವಹಿಸುತ್ತಿದ್ದು, ನಿವೃತ್ತಿಯ ಬಳಿಕ ವ್ಯಾಪಾರ ನಡೆಸುತ್ತಿದ್ದರು. ಮೂಕಾಸುರ, ವಿಜಯ, ದಾರುಕ, ಪಾಪಣ್ಣ, ಬಾಹುಕ ಹೀಗೆ ಹಲವು ಪಾತ್ರಗಳ ಮೂಲಕ ಕಲಾಭಿಮಾನಿಗಳನ್ನು ಇವರು ರಂಜಿಸಿದ್ದಾರೆ. ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಅವರು ಪಡೆದಿದ್ದರು. ಯಕ್ಷಗಾನ ಕಲಾರಂಗ ಪ್ರಶಸ್ತಿ ಜೊತೆಗೆ ಒಂದು ವಾರದ ಹಿಂದೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ʼಸುವರ್ಣ ಪುರಸ್ಕಾರʼ ಇವರಿಗೆ ಲಭಿಸಿದೆ. ಪತ್ನಿ ಮತ್ತು ಇಬ್ಬರು ಪುತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಸ್ವರಕುಟೀರದಲ್ಲಿ ‘ಭಿನ್ನಧ್ವನಿ’ ಮಕ್ಕಳ ರಂಗಕೂಟ
    Next Article ಶಿವಗಂಗೆಯ ಆದಿಮದಲ್ಲಿ ‘ಹುಣ್ಣಿಮೆ ಹಾಡು 218’ | ಜೂನ್ 11
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಕಲಾಭಿ ಯಕ್ಷಗಾನ ಅಧ್ಯಯನ ಕೇಂದ್ರ ಆರಂಭ

    June 9, 2025

    ಲೋಕರ್ಪಣೆಗೊಂಡ ‘ಕನ್ನಡಿಯಲ್ಲಿ ಕನ್ನಡಿಗ’ ಇದರ 3 ಮತ್ತು 4ನೇ ಸಂಚಿಕೆ

    June 9, 2025

    ಬಡಿಯಡ್ಕದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿ

    June 9, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.