Subscribe to Updates

    Get the latest creative news from FooBar about art, design and business.

    What's Hot

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಶ್ವತ್ಥಾಮ’ | ಜೂನ್ 12

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ಕೊಡಿಯಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ‘ಎ ಮಾರ್ನಿಂಗ್ ವಿತ್ ಪಂಡಿತ್ ರವಿಕಿರಣ್ ಮಣಿಪಾಲ್’
    Music

    ಮಂಗಳೂರು ಕೊಡಿಯಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ‘ಎ ಮಾರ್ನಿಂಗ್ ವಿತ್ ಪಂಡಿತ್ ರವಿಕಿರಣ್ ಮಣಿಪಾಲ್’

    September 7, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ & ಕಲ್ಚರಲ್ ಹೆರಿಟೇಜ್ (ಇಂಟಾಕ್) ಇದರ ಮಂಗಳೂರು ಅಧ್ಯಾಯ, ಆರ್ಟ್ ಕೆನರಾ ಟ್ರಸ್ಟ್ ಮತ್ತು ಚಿರಂತನ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ಸಹಯೋಗದೊಂದಿಗೆ ‘ಎ ಮಾರ್ನಿಂಗ್ ವಿತ್ ಪಂಡಿತ್ ರವಿಕಿರಣ್ ಮಣಿಪಾಲ್’ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಗೋಷ್ಠಿಯು ದಿನಾಂಕ 03-09-2023ರ ಭಾನುವಾರ ಬೆಳಿಗ್ಗೆ ನಗರದ ಕೊಡಿಯಲ್‌ಗುತ್ತು ಪಶ್ಚಿಮದಲ್ಲಿರುವ ಕೊಡಿಯಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ನಡೆಯಿತು.

    ಪಂಡಿತ್ ರವಿಕಿರಣ್ ಮಣಿಪಾಲ್ ಅವರು ಮಂಗಳೂರು ಆಕಾಶವಾಣಿಯ ಪ್ರಥಮ ದರ್ಜೆ ಕಲಾವಿದರಾಗಿರುವರು. ಇವರು ಆಗ್ರಾ ಗ್ವಾಲಿಯರ್ ಘರಾನಾದ ಪ್ರಸಿದ್ಧ ಗುರುಗಳಾದ ಉಡುಪಿಯ ಪಂಡಿತ್ ಮಾಧವ ಭಟ್ ಅವರಲ್ಲಿ ತಮ್ಮ ಆರಂಭಿಕ ತರಬೇತಿಯನ್ನು ಪಡೆದು ನಂತರ ನಾರಾಯಣ ಪಂಡಿತ್ ಅವರಲ್ಲಿ ತಮ್ಮ ವ್ಯಾಸಂಗ ಮುಂದುವರೆಸಿದರು. ಅಖಿಲ ಭಾರತೀಯ ಗಂಧರ್ವ ಮಹಾ ವಿದ್ಯಾಲಯದಿಂದ ‘ಸಂಗೀತ ಅಲಂಕಾರ’ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ‘ವಿದ್ವತ್’ ಪದವಿ ಪಡೆದಿರುವ ಇವರು ಭಾರತದ ಅನೇಕ ಪ್ರತಿಷ್ಠಿತ ಸಂಗೀತ ಉತ್ಸವಗಳಲ್ಲಿ ಪ್ರದರ್ಶನ ನೀಡಿರುವುದು  ಮಾತ್ರವಲ್ಲದೆ ಗಲ್ಫ್ ದೇಶಗಳು, ಮಲೇಷ್ಯಾ ಮತ್ತು ಸಿಂಗಾಪುರಗಳಲ್ಲೂ ಪ್ರದರ್ಶನ ನೀಡಿದ್ದಾರೆ.

    ಈ ಬೈಠಕ್ ಬೆಳಗಿನ ರಾಗಗಳ ನಿರಂತರ ಸುರಿಮಳೆಯಾಗಿತ್ತು. ಈ ಕಛೇರಿಯು ನಟ್ ಭೈರವಿಯಲ್ಲಿ ಮೂರು ಸಂಯೋಜನೆಗಳು ಮತ್ತು  ಜಯಂತ್ ಮಲ್ಹಾರ್ ನ ಎರಡು ಸಂಯೋಜನೆಗಳು ಮತ್ತು ಇವುಗಳ ಸುಂದರ ನಿರೂಪಣೆಯೊಂದಿಗೆ ಪ್ರಾರಂಭವಾಯಿತು ಮತ್ತು ರಾಗ್ ಪಿಲುನಲ್ಲಿ ಹಿತವಾದ ತುಮ್ರಿಯೊಂದಿಗೆ ಮುಕ್ತಾಯವಾಯಿತು. ಇದು ಇಂಟಾಕ್ ಮಂಗಳೂರು ಆಯೋಜಿಸಿರುವ ಮ್ಯೂಸಿಕಲ್ ಹೆರಿಟೇಜ್ ಆಫ್ ಕರ್ನಾಟಕ ಸರಣಿಯಡಿಯಲ್ಲಿ ಕೊಡಿಯಾಲ್ ಗುತ್ತುವಿನಲ್ಲಿ ನಡೆದ ಐದನೇ ಬೈಠಕ್  ಕಾರ್ಯಕ್ರಮವಾಗಿದೆ. ಈ ಪಾರಂಪರಿಕ ಮನೆಯ ಒಳ ವಿನ್ಯಾಸವು ಶಾಸ್ತ್ರೀಯ ಸಂಗೀತದ ಅನುಭವಕ್ಕಾಗಿ ಪರಿಪೂರ್ಣ ವಾತಾವರಣವನ್ನು ಒದಗಿಸಿತು.

    ಈ ಕಾರ್ಯಕ್ರಮದಲ್ಲಿ ಪಂಡಿತ್ ರವಿಕಿರಣ್ ಮಣಿಪಾಲ್ ಅವರೊಂದಿಗೆ ಸಹಕಲಾವಿದರಾಗಿ ತಬಲಾದಲ್ಲಿ ಭಾರವಿ ದೇರಾಜೆ, ಹಾರ್ಮೋನಿಯಂನಲ್ಲಿ ಶಶಿಕಿರಣ್ ಮಣಿಪಾಲ, ತಾನ್ಪುರದಲ್ಲಿ ಡಾ.ದಾಮೋದರ್ ಹೆಗ್ಡೆ ಸಹಕರಿಸಿದರು.

    ಇಂಟಾಕ್ ಮಂಗಳೂರು ಅಧ್ಯಾಯದ ಸಂಚಾಲಕ ಸುಭಾಸ್ ಚಂದ್ರ ಬಸು ಸ್ವಾಗತಿಸಿ ಬೈಠಕ್‌ಗೆ ಚಾಲನೆ ನೀಡಿದರು. ಶರ್ವಾಣಿ ಭಟ್ ಕಲಾವಿದರನ್ನು ಪರಿಚಯಿಸಿದರು. ಚಿರಂತನ ಚಾರಿಟೇಬಲ್ ಟ್ರಸ್ಟಿನ ಮೈಥಿಲಿ ವಂದಿಸಿದರು. ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿತ್ತು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಪದ್ಮಶ್ರೀ ಮಂಜಮ್ಮ ಜೋಗತಿ ಜೀವಾನಾಧಾರಿತ ‘ಮಾತಾ’ ಏಕವ್ಯಕ್ತಿ ನಾಟಕ ಪ್ರದರ್ಶನ
    Next Article ಮಂಗಳೂರು ಶಕ್ತಿನಗರದ ಕಲಾಂಗಣದಲ್ಲಿ ‘ನಿಮ್ಣೆಂ ಉತರ್’ ನಾಟಕ ಪ್ರದರ್ಶನ
    roovari

    Add Comment Cancel Reply


    Related Posts

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಲೇಖನ | ಅಗಲಿದ ಎಚ್.ಎಸ್.ವಿ.ಯವರಿಗೆ ಸಂಭ್ರಮದ ಕವಿ ಕಾವ್ಯ ನಮನ

    June 10, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ | ಜೂನ್ 15

    June 10, 2025

    ಬೆಂಗಳೂರಿನ ಸೇವಾ ಸದನದಲ್ಲಿ 19ನೇ ಹಾರ್ಮೋನಿಯಂ ಹಬ್ಬ | ಜೂನ್ 15

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.