Subscribe to Updates

    Get the latest creative news from FooBar about art, design and business.

    What's Hot

    ವಿಮರ್ಶಕಿ ತಾರಿಣಿ ಮತ್ತು ಕಥೆಗಾರ ಮನೋಹರ ಪೈಗೆ ‘ಈ ಹೊತ್ತಿಗೆ ಪ್ರಶಸ್ತಿ’

    January 29, 2026

    ಉರ್ವ ಅಂಬೇಡ್ಕರ್ ಭವನದಲ್ಲಿ ‘ಬಸಂತ್ ಉತ್ಸವ್’ ಸಂಗೀತ ಕಾರ್ಯಕ್ರಮ | ಫೆಬ್ರುವರಿ 01

    January 29, 2026

    ಭಾಸ್ಕರ ರೈ ಕುಕ್ಕುವಳ್ಳಿಯವರ ‘ಕಲ್ಲುರ್ಟಿ ಕಥನ’ ನಮ್ಮ ಕೊಂಬಾರು ಯೂಟ್ಯೂಬ್ ನಲ್ಲಿ ಬಿಡುಗಡೆ

    January 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಬ್ಬಕ್ಕ : 500 ಪ್ರೇರಣಾದಾಯಿ 99ನೇ ಉಪನ್ಯಾಸ ಕಾರ್ಯಕ್ರಮ ಮತ್ತು ಸೇವಾ ಸಾಧಕರಿಗೆ ಸಮ್ಮಾನ
    Felicitation

    ಅಬ್ಬಕ್ಕ : 500 ಪ್ರೇರಣಾದಾಯಿ 99ನೇ ಉಪನ್ಯಾಸ ಕಾರ್ಯಕ್ರಮ ಮತ್ತು ಸೇವಾ ಸಾಧಕರಿಗೆ ಸಮ್ಮಾನ

    January 29, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ‘ಅಬ್ಬಕ್ಕ : 500 ಪ್ರೇರಣಾದಾಯಿ 100 ಸರಣಿ ಉಪನ್ಯಾಸ’ದ 99ನೇ ಕಾರ್ಯಕ್ರಮ ಮತ್ತು ಸಾಧಕರ ಸಮ್ಮಾನ ಸಮಾರಂಭವು ದಿನಾಂಕ 12 ಜನವರಿ 2026ರಂದು ವಿದ್ಯಾ ಸಂಸ್ಥೆಯ ‘ರಾಜ ಸಭಾಂಗಣ’ದಲ್ಲಿ ಯಶಸ್ವಿಯಾಗಿ ನಡೆಯಿತು.

    ಕಾರ್ಯಕ್ರಮವನ್ನು ಮೂಡಬಿದಿರೆ ಚೌಟ ಮನೆತನದ ಅಬ್ಬಕ್ಕ ವಂಶಸ್ಥೆ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ಉದ್ಘಾಟಿಸಿ ಮಾತನಾಡಿ “ರಾಣಿ ಅಬ್ಬಕ್ಕರ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನ ಮುಂದಿನ ತಲೆಮಾರಿಗೆ ಪ್ರೇರಣೆಯಾಗಲಿದೆ. ಯುವ ಜನಾಂಗ ಅದರಿಂದ ಪ್ರೇರಣೆ ಪಡೆದು ಯಶಸ್ವಿ ಜೀವನವನ್ನು ನಡೆಸುವುದಕ್ಕೆ ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶ ಪ್ರೇಮವನ್ನು ಬೆಳೆಸಿ ಸಾರ್ಥಕ ಬದುಕನ್ನು ಕಾಣಬೇಕು” ಎಂದರು.

    ಯಕ್ಷಗಾನ ಕಲಾವಿದ ಮತ್ತು ಶಿಕ್ಷಕ ವರ್ಕಾಡಿ ರವಿ ಅಲೆವೂರಾಯ, ರಾಣಿ ಅಬ್ಬಕ್ಕ ವಿದೇಶಿ ಆಕ್ರಮಣಕಾರರ ವಿರುದ್ಧ ನಡೆಸಿದ ಹೋರಾಟ, ಅವರ ನಾಯಕತ್ವ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ವಿವರಿಸಿದರು. ‌ಕಾರ್ಯಕ್ರಮದಲ್ಲಿ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರವನ್ನು ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಇವರಿಗೆ ಪ್ರದಾನಿಸಲಾಯಿತು. ಇದೇ ಸಂದರ್ಭದಲ್ಲಿ ರಾಣಿ ಅಬ್ಬಕ್ಕ ಕುರಿತಾಗಿ ಗಮನಾರ್ಹ ಸೇವೆ ಸಲ್ಲಿಸಿದ ಸಾಧಕರನ್ನು ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು.

    ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಇದರ ಅಧ್ಯಕ್ಷ ಡಾ. ಎಂ. ತುಕಾರಾಂ ಪೂಜಾರಿ, ಉಳ್ಳಾಲ ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕ‌ರ ಉಳ್ಳಾಲ್, ಯಕ್ಷಾಂಗಣ ಮಂಗಳೂರು ಮತ್ತು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ, ಜವನೆರ್ ಬೆದ್ರ ಫೌಂಡೇಶನ್ ಸಂಸ್ಥಾಪಕ ಅಮರಕೋಟೆ, ವಿಶ್ರಾಂತ ಪ್ರಾಂಶುಪಾಲರು ಮತ್ತು ಸಾಹಿತಿ ಡಾ. ವಿ.ಕೆ. ಯಾದವ ಸಸಿಹಿತ್ಲು ಇವರುಗಳನ್ನು ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಪ್ರಕಾಶ್ ಮಲ್ಪೆ ಇವರ ನಿರ್ಮಾಣದ ಮಾದರಿ ಅಬ್ಬಕ್ಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು. ಅಲ್ಲದೆ ಕೆ. ಸುಧಾಕರ್ ಗಂಗೊಳ್ಳಿ ಇವರ ಸಂಗ್ರಹದ ಅಪರೂಪದ 25000 ಅಂಚೆ ಚೀಟಿಗಳ ಪ್ರದರ್ಶನ ನಡೆಯಿತು. ಆರ್.ಎಂ.ಎಸ್.ಎಸ್. ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೆ.ಆರ್.ಎಂ.ಎಸ್.ಎಸ್.ನ ಮಮತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪ ಮುಖ್ಯೋಪಾಧ್ಯಾಯರಾದ ಜಯಶೀಲಾ ವಂದಿಸಿದರು.

    baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಕಲ್ಕೂರ ಪ್ರತಿಷ್ಠಾನದಿಂದ ಮಧ್ವ ನವಮಿ ಆಚರಣೆ
    Next Article ನೃತ್ಯ ವಿಮರ್ಶೆ | ಹೃದಯಸ್ಪರ್ಶೀ ರೂಪಕಗಳ ‘ಬಹುಳ’ ನೃತ್ಯೋತ್ಸವ
    roovari

    Add Comment Cancel Reply


    Related Posts

    ವಿಮರ್ಶಕಿ ತಾರಿಣಿ ಮತ್ತು ಕಥೆಗಾರ ಮನೋಹರ ಪೈಗೆ ‘ಈ ಹೊತ್ತಿಗೆ ಪ್ರಶಸ್ತಿ’

    January 29, 2026

    ಉರ್ವ ಅಂಬೇಡ್ಕರ್ ಭವನದಲ್ಲಿ ‘ಬಸಂತ್ ಉತ್ಸವ್’ ಸಂಗೀತ ಕಾರ್ಯಕ್ರಮ | ಫೆಬ್ರುವರಿ 01

    January 29, 2026

    ನೃತ್ಯ ವಿಮರ್ಶೆ | ಹೃದಯಸ್ಪರ್ಶೀ ರೂಪಕಗಳ ‘ಬಹುಳ’ ನೃತ್ಯೋತ್ಸವ

    January 29, 2026

    ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಿಂದ ಮಧ್ವ ನವಮಿ ಆಚರಣೆ

    January 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.