Subscribe to Updates

    Get the latest creative news from FooBar about art, design and business.

    What's Hot

    ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ

    August 10, 2026

    ‘ಕರಾವಳಿ ಮಹಿಳಾ ಕಥಾ ಸ್ಪರ್ಧೆ’ಯ ಬಹುಮಾನ ವಿತರಣಾ ಸಮಾರಂಭ

    August 10, 2026

    ಕೋಡಿಕಲ್ ಸರಯೂ ಸಭಾಭವನದಲ್ಲಿ ಯಕ್ಷಗಾನ ಪ್ರದರ್ಶನ

    August 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಬ್ದುಲ್‌ ರಹಿಮಾನ್ ಕುತ್ತೆತ್ತೂರು ಆಯ್ಕೆ
    Literature

    ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಬ್ದುಲ್‌ ರಹಿಮಾನ್ ಕುತ್ತೆತ್ತೂರು ಆಯ್ಕೆ

    January 1, 2026Updated:January 3, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಕವಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಆಯ್ಕೆಯಾಗಿದ್ದಾರೆ. ಅಕಾಡೆಮಿಯ ಸರ್ವ ಸದಸ್ಯರ ಸಭೆ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ನಡೆದಿದೆ ಎಂದು ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ.

    ಅಬ್ದುಲ್ ರಹಿಮಾನ್ ಕುತ್ತೆತ್ತೂರು ಅವರ, ಸರ್ವಜ್ಞನ ವಚನಗಳ ಭಾಷಾಂತರವನ್ನೊಳಗೊಂಡ ‘ಜೀಯಸೆಲೆ’ ಬ್ಯಾರಿ ಕವನ ಸಂಕಲನ, ‘ಬ್ಯಾರಿ ಪಂಚತಂತ್ರ’ (ಪಂಚತಂತ್ರ ಕತೆಗಳ ಅನುವಾದ ಗ್ರಂಥ) ಮತ್ತು ‘ಸಾಧನೆಡೊ ಸರದಾರ ಅಭಿವೃದ್ಧಿರೊ ಕಿನಾವುಗಾರ ಸರ್. ಎಂ. ವಿಶ್ವೇಶ್ವರಯ್ಯ’ ಬ್ಯಾರಿ ಕೃತಿಗಳನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಕಟಿಸಿದೆ. ಕಾದಂಬರಿಗಾರ ನಿಯಾಝ್ ಪಡೀಲ್ ಅವರ ‘ಯತೀಮ್’ ಕನ್ನಡ ಕಾದಂಬರಿಯನ್ನು ಇವರು ಬ್ಯಾರಿ ಭಾಷೆಗೆ ಅನುವಾದಿಸಿದ್ದು ಇತ್ತೀಚೆಗೆ ಬಿಡುಗಡೆಗೊಂಡಿದೆ. ಕನಕದಾಸರ ಮುಂಡಿಗೆ ಮತ್ತು ಕೀರ್ತನೆಗಳನ್ನು ಕನ್ನಡದಿಂದ ಬ್ಯಾರಿಗೆ ಅನುವಾದಿಸಿದ್ದು, ಪ್ರಕಟಣೆಯ ಹಂತದಲ್ಲಿದೆ.

    ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಹೊರತಂದ ಬ್ಯಾರಿ-ಕನ್ನಡ-ಇಂಗ್ಲೀಷ್ ನಿಘಂಟನ ಸಹಸಂಪಾದಕರಾಗಿ, ಬ್ಯಾರಿ-ಇಂಗ್ಲೀಷ್-ಕನ್ನಡ-ಹಿಂದಿ ಪದಕೋಶದ ಬ್ಯಾರಿ ಪದಗಳ ಸಂಗ್ರಾಹಕರಾಗಿ, ಬ್ಯಾರಿ ವ್ಯಾಕರಣ ಗ್ರಂಥದ ಸಂಪಾದಕರಾಗಿ, ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಹೊರತಂದ ಬ್ಯಾರಿ-ಕನ್ನಡ ಗಾದೆ-ನುಡಿ-ಗಟ್ಟು-ಒಗಟುಗಳ ಕೋಶದ ಸಂಪಾದಕರಲ್ಲಿ ಓರ್ವರಾಗಿ ಕೆಲಸ ನಿರ್ವಹಿಸಿದ್ದಾರೆ. ‘ಲೋಕಾನುಗ್ರಹಿ ಹಜ್ರತ್ ಮುಹಮ್ಮದ್ ಪೈಗಂಬರ್’ ಮತ್ತು ‘ಬಕ್ರೀದ್’ ಇವರ ಪ್ರಕಟಿತ ಕನ್ನಡ ಕೃತಿಗಳು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04
    Next Article ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 
    roovari

    Add Comment Cancel Reply


    Related Posts

    ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ

    August 10, 2026

    ‘ಕರಾವಳಿ ಮಹಿಳಾ ಕಥಾ ಸ್ಪರ್ಧೆ’ಯ ಬಹುಮಾನ ವಿತರಣಾ ಸಮಾರಂಭ

    August 10, 2026

    ಕೋಡಿಕಲ್ ಸರಯೂ ಸಭಾಭವನದಲ್ಲಿ ಯಕ್ಷಗಾನ ಪ್ರದರ್ಶನ

    August 10, 2026

    ಖ್ಯಾತ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೋಳೂರು ಮಧುಕುಮಾರ್ ವಿಧಿ ವಶ

    August 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.