Subscribe to Updates

    Get the latest creative news from FooBar about art, design and business.

    What's Hot

    ಮಡಿಕೇರಿಯಲ್ಲಿ ಸುಗಮ ಸಂಗೀತ ಕಲಾ ತರಬೇತಿ ಶಿಬಿರ ಉದ್ಘಾಟನೆ

    August 6, 2025

    ಕೊಡವೂರಿನಲ್ಲಿ ‘ಧೀಂಕಿಟ ಯಕ್ಷಗಾನ ಹೆಜ್ಜೆ’ ತರಬೇತಿ ಶಿಬಿರ

    August 6, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಯಾಗಿ ಸರ್ದಾರ್ ಮನ್ ಪ್ರಿತ್ ಸಿಂಗ್ ನಾಮ ನಿರ್ದೇಶನ

    August 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಜಿ.ಎಲ್. ಆಚಾರ್ಯ ಶತಮಾನೋತ್ಸವ ಪ್ರಯುಕ್ತ ‘ಆಚಾರ್ಯ ಕವಿಗೋಷ್ಠಿ’
    Book Release

    ಪುತ್ತೂರಿನಲ್ಲಿ ಜಿ.ಎಲ್. ಆಚಾರ್ಯ ಶತಮಾನೋತ್ಸವ ಪ್ರಯುಕ್ತ ‘ಆಚಾರ್ಯ ಕವಿಗೋಷ್ಠಿ’

    August 6, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ ಶಿಕ್ಷಕ ಕವಿಗಳಿಗಾಗಿ ಏರ್ಪಡಿಸಿದ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿಯು ದಿನಾಂಕ 03 ಆಗಸ್ಟ್ 2025ರಂದು ನಡೆಯಿತು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲಾ ಘಟಕ, ಕಥಾ ಬಿಂದು ಪ್ರಕಾಶನ ಮಂಗಳೂರು ಮತ್ತು ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಶತಮಾನೋತ್ಸವ ಸಮಿತಿ ಪುತ್ತೂರು ಇದರ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

    ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಪತ್ರಕರ್ತರೂ ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ.ಬಿ. ಅರ್ತಿಕಜೆ “ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು. ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು. ವಿವಿಧ ಬಗೆಯ ಸಾಹಿತ್ಯ ಓದು ಕಡಿಮೆಯಾಗುತ್ತಿದೆ. ಶಿಕ್ಷಕರು ಸಾಹಿತ್ಯದ ಬಗೆಯ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಬರೆವಣಿಗೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕನ್ನಡ ಭಾಷೆಯ ಸೌಂದರ್ಯವನ್ನು ಉಳಿಸಿಕೊಳ್ಳಬೇಕು” ಎಂದು ಶಿಕ್ಷಕ ಸಾಹಿತಿಗಳಿಗೆ ಕಿವಿಮಾತು ಹೇಳಿದರು.

    ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಇದರ ಮಾಲಕ ಜಿ.ಎಲ್. ಬಲರಾಮ ಆಚಾರ್ಯರು ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ‘ಗೀತಾಚಾರ್ಯ ಶ್ರೀಕೃಷ್ಣ ಜಗದ್ಗುರು ಶಿಕ್ಷಕರೆಲ್ಲಾ ಆಚಾರ್ಯರು. ಅವರ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಗೌರವವಿದೆ” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಭಾಗವಹಿಸಿದ ಕವಿಗಳಿಗೆ ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಿದರು.

    ಇದೇ ಸಂದರ್ಭದಲ್ಲಿ ಸಾಹಿತಿ ಜಯಾನಂದ ಪೆರಾಜೆ ಸಂಪಾದಕತ್ವದ ಭಗವದ್ಗೀತೆಯ ಬಗ್ಗೆ ಕವಿಗಳಿಂದ ರಚಿತವಾದ ಕವನಸಂಕಲನ ‘ಗೀತಾ ಫಲ’ ಕೃತಿಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಬಿಡುಗಡೆಗೊಳಿಸಿ ಪುಸ್ತಕದ ಹೂರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಹಿತಿಗಳು ತಮ್ಮ ಕೃತಿಗಳಿಂದ ಗುರುತಿಸ್ಪಡಬೇಕೇ ಹೊರತು ಹೆಸರಿನಂದಲ್ಲ ಎಂದು ಅಭಿಪ್ರಾಯಪಟ್ಟರು.

    ಮುಖ್ಯ ಅತಿಥಿಯಾಗಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಡಾ. ಶಾಂತಾ ಪುತ್ತೂರು ಅವರು ಹಿರಿಯ ಆಚಾರ್ಯ ವಿ.ಬಿ. ಅರ್ತಿಕಜೆಯವರಿಗೆ ರಕ್ಷಾಬಂಧನ ಮಾಡಿದರು. ಕವಿಗಳಾದ ಗುಣಾಜೆ ರಾಮಚಂದ್ರ ಭಟ್, ಡಾ. ಸುರೇಶ ನೆಗಳಗುಳಿ, ಹಾ.ಮ. ಸತೀಶ ಬೆಂಗಳೂರು, ವಿಜಯ ಕುಮಾರ ಹೆಬ್ಬಾರಬೈಲು ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಣ ಸೌರಭ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ಸ್ವಾಗತಿಸಿ ಪ್ರಸ್ತಾವನೆಗೈದರು. ಕಥಾಬಿಂದು ಪ್ರಕಾಶನ ಮಂಗಳೂರಿನ ಕಾದಂಬರಿಕಾರ ಪಿ.ವಿ. ಪ್ರದೀಪ್ ಕುಮರ್ ಶುಭಾಸಂಶನೆ ಮಾಡಿ ವಂದಿಸಿದರು. ಡಾ. ವಾಣಿಶ್ರೀ ಕಾಸರಗೋಡು ತಂಡದಿಂದ ‘ಸಾಹಿತ್ಯ ಗಾನ ನೃತ್ಯ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ದೇವಕಿ ಜಯಾನಂದ ಉಪ್ಪಿನಂಗಡಿ ನಿರೂಪಿಸಿದರು.

    baikady Book release Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕಲಾಂಗಣದಲ್ಲಿ ಕವಿತೆಗಳು ಹಾಡುಗಳಾದವು
    Next Article ಪುಸ್ತಕ ವಿಮರ್ಶೆ | ಮನದಾಳದಲ್ಲಿ ಮಿನುಗುತ್ತಿರುವ ತಾರೆ ಸುನಂದಾ ಬೆಳಗಾಂವಕರ
    roovari

    Add Comment Cancel Reply


    Related Posts

    ಮಡಿಕೇರಿಯಲ್ಲಿ ಸುಗಮ ಸಂಗೀತ ಕಲಾ ತರಬೇತಿ ಶಿಬಿರ ಉದ್ಘಾಟನೆ

    August 6, 2025

    ಕೊಡವೂರಿನಲ್ಲಿ ‘ಧೀಂಕಿಟ ಯಕ್ಷಗಾನ ಹೆಜ್ಜೆ’ ತರಬೇತಿ ಶಿಬಿರ

    August 6, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಯಾಗಿ ಸರ್ದಾರ್ ಮನ್ ಪ್ರಿತ್ ಸಿಂಗ್ ನಾಮ ನಿರ್ದೇಶನ

    August 6, 2025

    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಘಾಟನೆಗೊಂಡ ಸಾಹಿತ್ಯ ಸಂಘ

    August 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.