Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಮಕೃಷ್ಣ ಮಠದಲ್ಲಿ ‘ಕಥಾ ಕೀರ್ತನ ವೈಭವ -2023’ ಮತ್ತು ‘ಅಚ್ಯುತಶ್ರೀ ರಾಷ್ಟ್ರೀಯ ಪುರಸ್ಕಾರ’ ಪ್ರದಾನ
    Awards

    ರಾಮಕೃಷ್ಣ ಮಠದಲ್ಲಿ ‘ಕಥಾ ಕೀರ್ತನ ವೈಭವ -2023’ ಮತ್ತು ‘ಅಚ್ಯುತಶ್ರೀ ರಾಷ್ಟ್ರೀಯ ಪುರಸ್ಕಾರ’ ಪ್ರದಾನ

    December 20, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಥಾ ಕೀರ್ತನದ ಮೇರು ನಾಡೋಜ ಸಂತ ಭದ್ರಗಿರಿ ಅಚ್ಯುತದಾಸರು ಹಾಗೂ ಕೀರ್ತನಾಚಾರ್ಯ ಲಕ್ಷ್ಮಣದಾಸ ವೇಲಣಕರ್ ಅವರ ಸ್ಮರಣಾರ್ಥ ಬೆಂಗಳೂರಿನ ಷಡ್ಜ ಕಲಾ ಕೇಂದ್ರ ಹಾಗೂ ರಾಮಕೃಷ್ಣ ಮಠ ಮಂಗಳೂರು ಜಂಟಿಯಾಗಿ ಆಯೋಜಿಸಿದ್ದ ‘ಕಥಾ ಕೀರ್ತನ ವೈಭವ -2023’ ಮತ್ತು ‘ಅಚ್ಯುತಶ್ರೀ ರಾಷ್ಟ್ರೀಯ ಪುರಸ್ಕಾರ’ ಪ್ರದಾನ ಸಮಾರಂಭವು ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ದಿನಾಂಕ 17-12-2023ರಂದು ನಡೆಯಿತು.

    ಪ್ರತಿ ವರ್ಷ ಕಥಾಕೀರ್ತನ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ ನೀಡಲಾಗುವ ‘ಅಚ್ಯುತಶ್ರೀ’ ರಾಷ್ಟ್ರೀಯ ಪುರಸ್ಕಾರವನ್ನು ಈ ಬಾರಿ ಮಹಾರಾಷ್ಟ್ರದ ಪುಣೆಯ ಹರಿದಾಸರಾದ ಚಾರುದತ್ತ ಆಫಳೆ ಬುವಾ ಅವರಿಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ ನಾಡಿನ ಖ್ಯಾತ ಹರಿದಾಸರಾದ ಪೊಳಲಿ ಜಗದೀಶದಾಸರು ರಚಿಸಿದ “ಸುವರ್ಣ ಸಿರಿ – ದೃಷ್ಟಾಂತ ಕಥಾಕೀರ್ತನ” ಗ್ರಂಥದ ಲೋಕಾರ್ಪಣೆಗೊಳಿಸಲಾಯಿತು. ಬಳಿಕ ಹರಿಕಥಾ ಕ್ಷೇತ್ರದಲ್ಲಿ 50 ವಸಂತಗಳನ್ನು ಪೂರೈಸುತ್ತಿರುವ ಪೊಳಲಿ ಜಗದೀಶದಾಸರು ಹಾಗೂ ಹರಿಕಥಾ ಕಲಾ ಸೇವೆಗೈದ ಶ್ರೀ ಎಂ. ಲಕ್ಷ್ಮೀನಾರಾಯಣ ಭಟ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ, ವಿಧಾನಪರಿಷತ್ ಸದಸ್ಯರಾಗಿರುವ ಪ್ರತಾಪ್ ಸಿಂಹ ನಾಯಕ್, ಮಂಗಳೂರಿನ ಹರಿಕಥಾ ಪರಿಷತ್ತಿನ ಅಧ್ಯಕ್ಷರಾಗಿರುವ ಶ್ರೀ ಕೆ. ಮಹಾಬಲ ಶೆಟ್ಟಿ, ಷಡ್ಜ ಕಲಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ದತ್ತಾತ್ರೇಯ ವೇಲಣಕರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಕುಮಾರಿ ವೈಭವಿ ಕುಂಬ್ಳೆ ‘ಪಾಶುಪತ ಪ್ರದಾನ’ ಹರಿಕಥೆ ಪ್ರಸ್ತುತಪಡಿಸಿದರು.

    ಸಭೆಯ ಪ್ರಾಸ್ತಾವಿಕ ನುಡಿಗಳಲ್ಲಿ ಡಾ. ದತ್ತಾತ್ರೇಯ ವೇಲಣಕರ್ “ಸಂತ ಭದ್ರಗಿರಿ ಅಚ್ಯುತದಾಸರು ಹಾಗೂ ತಂದೆ ಕೀರ್ತನಾಚಾರ್ಯ ಲಕ್ಷ್ಮಣದಾಸ ವೇಲಣಕರ್ ಅವರು ಹರಿಕಥಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಸ್ಮರಿಸುತ್ತಾ ಐದು ವರ್ಷಗಳಿಂದ ಈ ಕಾರ್ಯಕ್ರಮ ಹಮ್ಮಿಕೊಂಡು ಬಂದಿದ್ದು, ಪ್ರತಿ ವರ್ಷ ಹರಿಕಥಾ ಕ್ಷೇತ್ರಕ್ಕೆ ಕೊಡುಗೆ ನೀಡಿದ ಮಹನೀಯರಿಗೆ ಅಚ್ಯುತಶ್ರೀ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದೇವೆ” ಎಂದರು.

    ಮಂಗಳೂರು ಆಶ್ರಮದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ “ಕಥಾಕೀರ್ತನ ಹಾಗೂ ಅಧ್ಯಾತ್ಮದ ನಡುವೆ ಅವಿನಾಭಾವ ಸಂಬಂಧವಿದೆ. ರಾಮಕೃಷ್ಣ ಮಠ ಈ ರೀತಿ ಆಧ್ಯಾತ್ಮಿಕತೆಯೆಡೆಗೆ ಕರೆದುಕೊಂಡು ಹೋಗುವ ಕಲೆಗಳನ್ನು ಮೊದಲಿನಿಂದಲೂ ಪ್ರೋತ್ಸಾಹಿಸಿಕೊಂಡು ಬಂದಿದೆ” ಎಂದರು.

    ನಂತರ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, “ಭಾರತದ ಆತ್ಮ ಎಂದರೆ ಅದು ಅಧ್ಯಾತ್ಮ. ಬಾಲ್ಯದಲ್ಲಿ, ಹರಿಕಥೆ, ಸಂಕೀರ್ತನೆಗಳ ಸಂಸ್ಕಾರ ಯಾರ ಮೇಲೆ ಆಗಿರುತ್ತದೋ, ಅವರ ಯೋಚನೆ, ನಡವಳಿಕೆ ಹಾಗೂ ಒಟ್ಟಾರೆ ಜೀವನದ ಮೇಲೆ ಅದರ ಪರಿಣಾಮ ತಿಳಿದೋ ತಿಳಿಯದೆಯೋ ಬಿದ್ದೇ ಬೀಳುತ್ತದೆ. ಅವರ ಒಳಗಿರುವ ಅಗೋಚರ ಶಕ್ತಿ ಅವರನ್ನು ಸರಿಯಾದ ದಾರಿಯಲ್ಲಿ ನಡೆಯಲು ಪ್ರೇರಣೆ ಹಾಗೂ ಮಾರ್ಗದರ್ಶನವನ್ನು ನೀಡುತ್ತಿರುತ್ತದೆ. ಆ ಸಂಸ್ಕಾರ ನೀಡುವ ಶಕ್ತಿ ಹರಿಕಥೆಗೆ ಇದೆ” ಎಂದರು.

    ಸಭಾ ಕಾರ್ಯಕ್ರಮದ ನಂತರ ಶ್ರೀ ಚಾರುದತ್ತ ಆಫಳೆ ಬುವಾ ನಾರದೀಯ ಶೈಲಿಯಲ್ಲಿ ಸಂತ ನಾಮದೇವ ಜೀವನ ಆಧಾರಿತ ಹರಿಕಥೆ ನಡೆಸಿಕೊಟ್ಟರು. ಅವರಿಗೆ ತಬಲಾದಲ್ಲಿ ಶ್ರೀದತ್ತ ಪ್ರಭು ಹಾಗೂ ಹಾರ್ಮೋನಿಯಂನಲ್ಲಿ ಗೋಪಾಲ್ ಪ್ರಭು ಸಮರ್ಥ ಸಾಥ್ ನೀಡಿದರು. ಹರಿದಾಸರಾದ ಎಸ್.ಪಿ. ಗುರುದಾಸ್ ಕಾರ್ಯಕ್ರಮದ ನಿರೂಪಣೆಯನ್ನು ಸುಂದರವಾಗಿ ನಡೆಸಿಕೊಟ್ಟರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಅಭಯ ಲಕ್ಷ್ಮೀ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ
    Next Article ವಿಶೇಷ ಲೇಖನ | ಅಜಾತ ಶತ್ರು ಸಕಲ ಸಾಹಿತ್ಯ ಕೋವಿದ – ವಾಟೆ ಮಹಾಲಿಂಗ ಭಟ್
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ‘ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ’ಗೆ ಕಥಾ ಸಂಕಲನ ‘ಹಾಯ್ ಮೆಟಾಯ್’ ಕೃತಿ ಆಯ್ಕೆ

    May 7, 2025

    ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.