Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ಸಿದ್ಧಾರ್ಥ ಮಾಧ್ಯಮಿಕಾ ಇವರಿಂದ ‘ನಟನಾ ಕಾರ್ಯಾಗಾರ’ | ಜೂನ್ 29
    Drama

    ಬೆಂಗಳೂರಿನಲ್ಲಿ ಸಿದ್ಧಾರ್ಥ ಮಾಧ್ಯಮಿಕಾ ಇವರಿಂದ ‘ನಟನಾ ಕಾರ್ಯಾಗಾರ’ | ಜೂನ್ 29

    June 27, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ‘ಕಣ’ ಇದರ ವತಿಯಿಂದ ಸಿದ್ಧಾರ್ಥ ಮಾಧ್ಯಮಿಕಾ ಇವರಿಂದ ಮೂರು ತಿಂಗಳುಗಳ ಕಾಲ ನಡೆಯಲಿರುವ ‘ನಟನಾ ಕಾರ್ಯಾಗಾರ’ವು ದಿನಾಂಕ 29-06-2024ರಂದು ಬೆಂಗಳೂರಿನ ಕೆ.ವಿ. ಸುಬ್ಬಣ್ಣ ಆಪ್ತ ರಂಗಮಂದಿರದಲ್ಲಿ ಪ್ರಾರಂಭವಾಗಲಿದೆ. ಈ ಕಾರ್ಯಾಗಾರದಲ್ಲಿ ಪ್ರತಿ ವಾರಾಂತ್ಯ ಶನಿವಾರ ಮತ್ತು ಭಾನುವಾರ 10-00ರಿಂದ 1-00 ಗಂಟೆಯವರೆಗೆ ಮೂರು ತಾಸುಗಳು ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9663704395 ಸಂಪರ್ಕಿಸಿರಿ.

    * ಕತೆ ಅಂದರೆ ಏನು ?
    * ಮೊಟ್ಟ ಮೊದಲು ಕತೆ ಹೇಳಿದವರು ಯಾರು ?
    * ಮೊದಲ ಕತೆ ಹೇಳಿದವರು ಅದನ್ನು ಯಾಕಾಗಿ ಹೇಳಿದ್ದರು ?
    * ಕಾಲ ಕ್ರಮೇಣ ಕತೆ ಹೇಳುವ ಪ್ರಕ್ರಿಯೆ ತನ್ನೊಳಗೆ ಏನೇನನ್ನೆಲ್ಲಾ ಹುದುಗಿಸುಕೊಳ್ಳುತ್ತಾ ಬರುತ್ತಿದೆ ?
    * ಇವತ್ತಿನ ಕಾಲಮಾನದಲ್ಲಿ ನಾವು ಕತೆಯನ್ನು ಯಾಕೆ ಹೇಳಬೇಕು ?
    * ಕಲಾವಿದರು ಅಂದರೆ ಯಾರು ?
    * ಕಲೆ ಎಂದರೆ ಏನು ?

    ಹೀಗೆ ಹತ್ತು ಹಲವು ಕುತೂಹಲ ಭರಿತ ಪ್ರಶ್ನೆಗಳೊಂದಿಗೆ ಶುರವಾಗುವ ಮೂರು ತಿಂಗಳುಗಳ ಕಾಲದ ಈ ವಾರಾಂತ್ಯ ಶಿಬಿರದಲ್ಲಿ, ನಮ್ಮ ಬದುಕಿನ ಭಾಗವಾಗಿರುವ ನಟನೆ ಮತ್ತು ಕತೆ ಹೇಳುವ ಕಲೆಗಳನ್ನು, ಇಲ್ಲಿಯವರೆಗೂ ಕಂಡರಿಯದ ರೀತಿಯಲ್ಲಿ ಕಾಣುವ ಪ್ರಯತ್ನ ಮಾಡುತ್ತ, ಒಂದು ನಾಟಕವನ್ನು ಕಟ್ಟುವೆವು. ತಯಾರಾದ ನಾಟಕವನ್ನು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರದರ್ಶಿಸಲಾಗುವುದು. ಈ ವಾರಾಂತ್ಯ ಶಿಬಿರ ಮೂರು ತಿಂಗಳಲ್ಲಿ ನಿಜಕ್ಕೂ ಮುಗಿದುಬಿಡುವುದಿಲ್ಲ..! ಬದಲಿಗೆ, ಈ ಶಿಬಿರದಲ್ಲಿ ಭಾಗಿಯಾಗುವ ಪ್ರತಿಯೊಬ್ಬರಲ್ಲೂ ಬದುಕಿನಾದ್ಯಂತ ಬೆಳೆಯುತ್ತ ಜೊತೆಗೇ ಸಾಗಲಿರುವುದು…

    ಸಿದ್ಧಾರ್ಥ ಮಾಧ್ಯಮಿಕಾ ಇವರು ನಟನಾ ತರಬೇತಿದಾರರಾಗಿ, ನಟರಾಗಿ, ನಿರ್ದೇಶಕರಾಗಿ, ಬರಹಗಾರರಾಗಿ ರಂಗಭೂಮಿ ಮತ್ತು ಸಿನಿಮಾ ಮಾಧ್ಯಮದಲ್ಲಿ ಕಳೆದ ಹದಿನೈದು ವರ್ಷಗಳಿಂದ ಕೆಲಸ ಮಾಡುತ್ತಿರುವರು. ಕತೆ ಹೇಳುವುದನ್ನು ಗಂಭೀರ ಉದ್ಯೋಗವೆಂದು ಪರಿಗಣಿಸಿ, ಕತೆ ಹೇಳಲು ಬೇಕಿರುವ ಸಂವೇದನೆಯನ್ನು ಎಲ್ಲಕಿಂತ ಮುಖ್ಯ ಎಂದು ತಿಳಿದ ಇವರು, “ನಮಮ ಇತಿಹಾಸ”, “ಈ ನಾವು” ಎಂಬ ಎರಡು ನಾಟಕಗಳನ್ನು ಬರೆದು, ನಿರ್ದೇಶಿಸಿರುವರು. ಎಸ್. ದಿವಾಕರ್ ಇವರ “ಇತಿಹಾಸ” ಕತೆ ಮತ್ತು ಮಂಜು ನಾಯಕ್ ಚಳ್ಳೂರ ಇವರ “ಫೂ” ಕಥಾ ಸಂಕಲನದ ನಾಲ್ಕು ಕಥೆಗಳನ್ನು ರಂಗಕ್ಕೆ ಅಳವಡಿಸಿ ನಿರ್ದೇಶಿಸಿರುವರು. ಕೃಷ್ಣಾ – ರುಕ್ಕೂ, ಶುದ್ಧಿ, ಭಿನ್ನ, ಕವಲುದಾರಿ, ಶುಭಮಂಗಳ ಹೀಗೆ ಇಪ್ಪತ್ತಕ್ಕೂ ಹೆಚ್ಚಿನ ಸಿಮಾಗಳಲ್ಲಿ ನಟಿಸಿರುವರು. ಪಿ. ಶೇಷಾದ್ರಿ ಅವರ ನಿರ್ದೇಶನದ ಸಿನಿಮಾಗಳಾದ ‘ಭೇಟಿ’ ಮತ್ತು ‘ಮೂಕಜ್ಜಿಯ ಕನಸುಗಳು’ ಸಿನಿಮಾಗಳಿಗೆ ಮುಖ್ಯ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವುದರ ಜೊತೆಗೆ ಆ ಸಿನಿಮಾಗಳಲ್ಲಿ ನಟಿಸಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಯಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ
    Next Article ಅಭಿನಯ ಭಾರತಿಯ ‘ವಸಂತೋತ್ಸವ’ದಲ್ಲಿ ಮೂರು ನಾಟಕಗಳ ಪ್ರದರ್ಶನ | ಜೂನ್ 1 ಮತ್ತು 2
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ತೆಕ್ಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನಕಂಡ “ಸೂರ್ಯ ಚಂದ್ರ” ಮಕ್ಕಳ ನಾಟಕ

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.