Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸುಮನಸಾ ಕೊಡವೂರು’ ಸಂಸ್ಥೆಯ ರಂಗಹಬ್ಬದ 3ನೇ ದಿನದ ನಾಟಕ ‘ಅಗ್ನಿ ಮತ್ತು ಮಳೆ’
    Drama

    ‘ಸುಮನಸಾ ಕೊಡವೂರು’ ಸಂಸ್ಥೆಯ ರಂಗಹಬ್ಬದ 3ನೇ ದಿನದ ನಾಟಕ ‘ಅಗ್ನಿ ಮತ್ತು ಮಳೆ’

    February 28, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ : ಉಡುಪಿಯ ಅಜ್ಜರ ಕಾಡಿನಲ್ಲಿರುವ ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬದ 3ನೇ ದಿನದ ಕಾರ್ಯಕ್ರಮವು ದಿನಾಂಕ 27-02-2024ರಂದು ನಡೆಯಿತು.
    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ “ರಂಗ ಚಟುವಟಿಕೆಗಳು ಉತ್ಸವಗಳಾಗದೇ ಚಳವಳಿಗಳಾಗಬೇಕು. ಇಲ್ಲದೇ ಇದ್ದರೆ ಮನೋರಂಜನೆಗೆ ಸೀಮಿತವಾಗುತ್ತವೆ ಹೊರತು ಬೇರೇನನ್ನೂ ಹೇಳಲಾರವು. ರಂಗಚಟುವಟಿಕೆಗಳ ದೊಡ್ಡ ಕೇಂದ್ರವಾದ ಉಡುಪಿಯಲ್ಲಿ ಅನೇಕ ರಂಗಸಂಸ್ಥೆಗಳಿವೆ. ನಿರಂತರ ರಂಗ ಕಾರ್ಯಕ್ರಮಗಳಾಗುತ್ತಿರುತ್ತವೆ. ಆದರೆ, ಪರಸ್ಪರ ಕೊಡುಕೊಳ್ಳುವಿಕೆ ಇಲ್ಲದೇ ಸಂಸ್ಥೆಗಳು ದ್ವೀಪಗಳಾಗುತ್ತಿವೆ. ಇಲ್ಲಿ ರಂಗಚಳವಳಿಯಾಗದೇ ಇರಲು ಇದೂ ಕೂಡಾ ಕಾರಣ ಎಂದು ವಿಶ್ಲೇಷಿಸಿ ಕಲಾವಿದರಲ್ಲಿ, ಸಂಘಟಕರಲ್ಲಿ ಸಾಂಸ್ಕೃತಿಕ, ಸಾಮಾಜಿಕ ಬದ್ಧತೆ ಇರಬೇಕು. ವ್ಯವಸ್ಥೆಗೆ ಪ್ರಭುತ್ವಕ್ಕೆ ಪ್ರತಿರೋಧವಾಗಿ ರಂಗಭೂಮಿ ಹುಟ್ಟಿದೆ. ಆದರೆ ಇಂದು ಪ್ರಭುತ್ವದೊಂದಿಗೆ ಹೊಂದಾಣಿಕೆ, ರಾಜಿ ಮಾಡಿಕೊಂಡು ಪ್ರದರ್ಶನಗಳು ನಡೆಯುತ್ತಿವೆ. ಧರ್ಮ, ದೇವರು, ಭಾಷೆ ಹೀಗೆ ಎಲ್ಲವೂ ರಾಜಕೀಯ ಪ್ರಪಗಾಂಡದ ಟೂಲ್ ಆಗಿ ಬಳಕೆಯಾಗುತ್ತಿರುವ ಈ ಹೊತ್ತಿನಲ್ಲಿ ರಂಗಭೂಮಿ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನು ಎಲ್ಲ ರಂಗಕರ್ಮಿಗಳು ಅರಿಯುವ ಅಗತ್ಯ ಇದೆ. ಕಗ್ಗತ್ತಲ ಕಾಲದಲ್ಲಿ ಕಗ್ಗತ್ತಲ ಕಾಲದ ಬಗ್ಗೆ ಹಾಡಬೇಕು ಎಂದು ಬ್ರೆಕ್ಟ್ ಹಿಂದೆಯೇ ಹೇಳಿದ್ದ. ನಾವು ಕೂಡ ಇಂದಿನ ಪರಿಸ್ಥಿತಿಯ ಬಗ್ಗೆ ಮಾತನಾಡಬೇಕು. ತುಳು ನಾಟಕರಂಗ ಬಹಳ ಬೆಳೆದಿದೆ. ಅದರ ಜೊತೆಗೆ ಪ್ರತಿಕ್ರಿಯಾತ್ಮಕ ಪ್ರದರ್ಶನಗಳೂ ನಡೆಯುತ್ತಿದ್ದು, ಅವುಗಳನ್ನು ಪ್ರೋತ್ಸಾಹಿಸಬೇಕು” ಎಂದು ಹೇಳಿದರು.
    ‘ರಂಗಸಾಧಕ’ ಸನ್ಮಾನ ಸ್ವೀಕರಿಸಿದ ಕಲಾವಿದ ವಿಜಯ್ ಆರ್. ನಾಯಕ್ ಮಾರ್ಪಳ್ಳಿ ಮಾತನಾಡಿ, “ಸುಮನಸಾ ಸಂಸ್ಥೆ ನಾಟಕ ಪ್ರದರ್ಶನ ನೀಡಲು ಸೀಮಿತಗೊಳ್ಳದೇ ಅನೇಕ ರಂಗಚಟುವಟಿಕೆಗಳನ್ನು, ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. ರಂಗಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನು ಗುರುತಿಸುವ ಕಾರ್ಯವನ್ನು ಕೂಡ ಮಾಡುತ್ತಿದೆ” ಎಂದು ಶ್ಲಾಘಿಸಿದರು.
    ಉದ್ಯಮಿಗಳಾದ ರಂಜನ್ ಕಲ್ಕೂರ, ಸುರೇಶ್ ಯು., ಮಹೇಶ್ ಎಂ. ಬಂಗೇರ, ಸದಾನಂದ ಸಾಲ್ಯಾನ್, ಸುಮನಸಾದ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷ ಯೋಗೀಶ್ ಕೊಳಲಗಿರಿ, ಬಾಲಕೃಷ್ಣ ಶಿಬಾರ್ಲ ಉಪಸ್ಥಿತರಿದ್ದರು. ಉಪಾಧ್ಯಕ್ಷ ವಿನಯ್ ಕುಮಾರ್ ಕಲ್ಮಾಡಿ ಸ್ವಾಗತಿಸಿದರು. ಸದಸ್ಯರಾದ ಕವನಾ ವಂದಿಸಿ, ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ‘ನಗ್ನ ಥಿಯೇಟರ್ ಉಡುಪಿ’ ತಂಡದಿಂದ ‘ಅಗ್ನಿ ಮತ್ತು ಮಳೆ” ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಜಿ. ಪಿ. ಐ. ಇ. ಆರ್.  ರಾಷ್ಟ್ರೀಯ ರಂಗೋತ್ಸವದ ಬಿತ್ತಿಪತ್ರ ಬಿಡುಗಡೆ
    Next Article ಐವರು ಹಿರಿಯ ರಂಗಕರ್ಮಿಗಳಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2024’
    roovari

    Add Comment Cancel Reply


    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಮೈಸೂರು ಮತ್ತು ಬೆಂಗಳೂರಿನಲ್ಲಿ ‘ಎದೆಗೆ ಬಿದ್ದ ಅಕ್ಷರ’ ನಾಟಕ ಪ್ರದರ್ಶನ | ಮೇ 04

    May 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.