Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಮುಂಡಾಜೆಯಲ್ಲಿ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣೆ | ಜೂನ್ 19

    June 18, 2025

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ‘ಅಗ್ರಹಾರ ಕೃಷ್ಣಮೂರ್ತಿ’
    Literature

    ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ‘ಅಗ್ರಹಾರ ಕೃಷ್ಣಮೂರ್ತಿ’

    November 11, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತುಮಕೂರು : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕೊರಟಗೆರೆ ತಾಲೂಕು ಜಟ್ಟಿ ಅಗ್ರಹಾರದ ಕೃಷ್ಣಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ 16ನೇ ಸಮ್ಮೇಳನದ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ದಿನಾಂಕ 29 ನವೆಂಬರ್ 2024 ಹಾಗೂ 30 ನವೆಂಬರ್ 2024ರಂದು ನಗರದ ಗಾಜಿನ ಮನೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.

    ಅಗ್ರಹಾರ ಕೃಷ್ಣಮೂರ್ತಿಯವರು ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿ 30 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರಕಿಸಿಕೊಡಲು ಕಾರಣೀಭೂತರಾಗಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ದಕ್ಷಿಣ ಭಾರತದ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಶ್ರಮಿಸಿದ್ದಾರೆ. ಅಕಾಡೆಮಿಯ ಕಾರ್ಯದರ್ಶಿಯಾಗಿದ್ದ ಸಮಯದಲ್ಲಿ ಸಾಹಿತ್ಯ ಮತ್ತು ಭಾಷೆಗಳ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿದ್ದಾರೆ. ಭಾಷಾಂತರ ಚಟುವಟಿಕೆ, ಪುಸ್ತಕ ಪ್ರಕಟಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

    ಪ್ರೊ. ಎಂ.ಎಂ. ಕಲಬುರ್ಗಿ ಜತೆಗೂಡಿ 12ನೇ ಶತಮಾನದ ಶಿವಶರಣರ 2,500 ವಚನಗಳನ್ನು ಭಾರತದ ಇತರೆ 15 ಭಾಷೆಗಳಿಗೆ ಅನುವಾದಿಸಿದ್ದಾರೆ. ‘ಬೆಳದಿಂಗಪ್ಪನ ಪೂಜೆ’ ಸಂಶೋಧನಾ ಗ್ರಂಥ, ‘ನೀವು ಮತ್ತು ಪ್ರೀತಿ’ ಕಾದಂಬರಿ, ‘ಬಹುವಚನ’ ವಿಮರ್ಶಾ ಕೃತಿ, ‘ಧ್ಯಾನ’ ಕವನ ಸಂಕಲನ ಮೂಡಿ ಬಂದಿವೆ. ‘ಕುವೆಂಪು ನೂರು ನಮನ’ ಎಂಬ 100 ಲೇಖಕರ ಪುಸ್ತಕಗಳನ್ನು ಸಂಪಾದಿಸಿ ಏಕಕಾಲದಲ್ಲಿ ಪ್ರಕಟಿಸಿದ ಹೆಗ್ಗಳಿಕೆ. ಪ್ರಗತಿಪರ ಚಿಂತಕರಾದ ಅಗ್ರಹಾರ ಕೃಷ್ಣಮೂರ್ತಿಯವರು ಕನ್ನಡದ ಸಾಕಷ್ಟು ಕೃತಿಗಳನ್ನು ಬೇರೆ ಭಾಷೆಗಳಿಗೆ ಅನುವಾದ ಮಾಡಿದ್ದಾರೆ. ಭಾರತೀಯ ಸಾಹಿತ್ಯ, ಭಾಷೆ ಕುರಿತು ವಿದೇಶಗಳಲ್ಲಿ ನಡೆದ ಸುಮಾರು 25 ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ ಹಿರಿಮೆ. ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ, ವರ್ಧಮಾನ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ದೆಹಲಿ ಕರ್ನಾಟಕ ಸಂಘದ ವಿಶಿಷ್ಟ ಕನ್ನಡಿಗ ಪ್ರಶಸ್ತಿ, ಪೂರ್ಣಚಂದ್ರ ತೇಜಸ್ವಿ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಅಪ್ಪು ನೆಡುಂಗಾಡಿ ಅವರ ‘ಕುಂದಲತ’
    Next Article ವಿದ್ಯಾಗಿರಿಯಲ್ಲಿ ಆಳ್ವಾಸ್ ದೀಪಾವಳಿ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025

    ಬಿ. ತಮ್ಮಯ್ಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ಫಲಿತಾಂಶ ಪ್ರಕಟ

    June 18, 2025

    Book review | ‘Dharma Yuddha’ of Dr. N. Mogasale

    June 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.