Subscribe to Updates

    Get the latest creative news from FooBar about art, design and business.

    What's Hot

    ಸಿ. ಇ. ಕಾಮತ್ ಕುಶಲಕರ್ಮಿಗಳ ತರಬೇತಿ ಸಂಸ್ಥೆಯಿಂದ ಅರ್ಜಿ ಆಹ್ವಾನ | ಸೆಪ್ಟೆಂಬರ್ 15

    September 10, 2025

    ‘ಬಹುವಚನಂ’ನಲ್ಲಿ ‘ಭೂತಾರಾಧನೆ’ ಕುರಿತು ಉಪನ್ಯಾಸ | ಸೆಪ್ಟೆಂಬರ್ 14

    September 10, 2025

    ಮಂಗಳೂರಿನಲ್ಲಿ ಬೃಹತ್ ಜನಾಗ್ರಹ ಸಭೆ

    September 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಾಂಗಣದಲ್ಲಿ ಎ.ಕೆ. ನಾರಾಯಣ ಶೆಟ್ಟಿ ಮತ್ತು ಎ.ಕೆ. ಮಹಾಬಲ ಶೆಟ್ಟಿ ಸಂಸ್ಮರಣೆ
    Yakshagana

    ಯಕ್ಷಾಂಗಣದಲ್ಲಿ ಎ.ಕೆ. ನಾರಾಯಣ ಶೆಟ್ಟಿ ಮತ್ತು ಎ.ಕೆ. ಮಹಾಬಲ ಶೆಟ್ಟಿ ಸಂಸ್ಮರಣೆ

    November 27, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗ‌ಣ ಮಂಗಳೂರು, ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023’ ಹನ್ನೊಂದನೇ ವರ್ಷದ ನುಡಿ ಹಬ್ಬದಲ್ಲಿ ದಿನಾಂಕ 23-11-2023ರಂದು ಕೀರ್ತಿಶೇಷ ಅರ್ಥಧಾರಿಗಳಾದ ಪರಂಗಿಪೇಟೆಯ ಎ.ಕೆ. ನಾರಾಯಣ ಶೆಟ್ಟಿ ಮತ್ತು ಎ.ಕೆ. ಮಹಾಬಲ ಶೆಟ್ಟಿ ಅವರ ಸಂಸ್ಮರಣಾ ಸಮಾರಂಭ ಜರಗಿತು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ “ಯಕ್ಷಗಾನವು ಮನುಷ್ಯ ಜೀವನದ ಮೌಲ್ಯ ಪ್ರತಿಪಾದನೆ ಜೊತೆಗೆ ಪುರಾಣ ಪಾತ್ರಗಳ ತತ್ವಾದರ್ಶಗಳನ್ನು ಪರಿಚಯಿಸುತ್ತದೆ. ಅಲ್ಲದೆ ಮನೋರಂಜನೆಯನ್ನೂ ಒದಗಿಸುವುದರಿಂದ ಅದು ಸಾಂಸ್ಕೃತಿಕ ಸಂಪನ್ನತೆಯ ಕಲೆ. ಅದಕ್ಕಾಗಿ ದುಡಿದ ಹಿರಿಯರು ಸದಾ ಸ್ಮರಣೀಯರು” ಎಂದು ಹೇಳಿದರು. ಮಹೇಶ್ ಮೋಟರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಅವರು ಸಂಸ್ಮರಣ ಜ್ಯೋತಿ ಬೆಳಗಿ ನುಡಿ ನಮನ ಸಲ್ಲಿಸಿದರು.

    ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಕೋಡಿಕಲ್ ಶ್ರೀ ಕುರು ಆಂಬಾ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಹಾಬಲ ಚೌಟ, ಬ್ರಿಟಿಷ್ ಬಯಾಲಾಜಿಕಲ್ ಸಂಸ್ಥೆಯ ಸಿ.ಎಸ್. ಭಂಡಾರಿ ಇರಾ, ಖ್ಯಾತ ಭಾಗವತ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಸಾರಿಗೆ ಉದ್ಯಮಿ ಅಡ್ಯಾರ್ ಮಾಧವ ನಾಯಕ್, ದಿ. ಎ.ಕೆ. ನಾರಾಯಣ ಶೆಟ್ಟರ ಸುಪುತ್ರ ಎ.ಕೆ. ಶ್ರೀನಾಥ್ ಶೆಟ್ಟಿ ಮತ್ತು ದಿ. ಎ.ಕೆ. ಮಹಾಬಲ ಶೆಟ್ಟರ ಮಗ ಎ.ಕೆ. ರಮಾನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

    ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ನಿರೂಪಿಸಿದರು. ಸಂಚಾಲಕ ಕರುಣಾಕರ ಶೆಟ್ಟಿ ಪಣಿಯೂರು ವಂದಿಸಿದರು. ಯಕ್ಷಾಂಗಣದ ಪದಾಧಿಕಾರಿಗಳಾದ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ರವೀಂದ್ರ ರೈ ಕಲ್ಲಿಮಾರು, ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಉಮೇಶ ಆಚಾರ್ ಗೇರುಕಟ್ಟೆ, ನಿವೇದಿತ ಎನ್. ಶೆಟ್ಟಿ, ಸುಮಾಪ್ರಸಾದ್ ಉಪಸ್ಥಿತರಿದ್ದರು. ಯಕ್ಷಗಾನ ತಾಳಮದ್ದಳೆ ಸಪ್ತಾಹದ ಐದನೇ ದಿನ ‘ಶ್ರೀಹರಿ ಚರಿತ್ರೆ’ ಸರಣಿಯಲ್ಲಿ ಪಟ್ಲ ಸತೀಶ್ ಶೆಟ್ಟಿ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ಅವರ ಭಾಗವತಿಕೆಯಲ್ಲಿ ‘ಅಜಾಮಿಳ ಚರಿತ್ರೆ’ ತಾಳಮದ್ದಳೆ ಜರಗಿತು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ರಾಮಕೃಷ್ಣ ಮಠದ ವಿವೇಕಾನಂದ ಸಭಾಂಗಣದಲ್ಲಿ ‘ಯಕ್ಷಾಮೃತ’ | ಡಿಸೆಂಬರ್ 10
    Next Article ಪ್ರೀತಿ ಸಹಬಾಳ್ವೆಯ ಯಾತ್ರೆ – ರಾಷ್ಟ್ರೀಯ ಸಾಂಸ್ಕೃತಿಕ ಜಾಥಾ | ಡಿಸೆಂಬರ್ 1ರಿಂದ 7
    roovari

    Add Comment Cancel Reply


    Related Posts

    ಶ್ರೀ ಎಡನೀರು ಮಠದಲ್ಲಿ ವೇಣುವಾದನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 11

    September 10, 2025

    ತೆಕ್ಕಟ್ಟೆಯಲ್ಲಿ ‘ರಾಜಾರುದ್ರಕೋಪ’ ಯಕ್ಷಗಾನ ಪ್ರದರ್ಶನ

    September 9, 2025

    ಉಪ್ಪಿನಂಗಡಿಯಲ್ಲಿ ಶ್ರೀ ಮಹಾಭಾರತ ಸರಣಿ ಸುವರ್ಣ ಶತಕ ತಾಳಮದ್ದಳೆ ಕಾರ್ಯಕ್ರಮ

    September 9, 2025

    ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ‘ಸಂಜೀವ ಯಕ್ಷ ಜೀವ-ಭಾವ’ | ಸೆಪ್ಟೆಂಬರ್ 12

    September 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.