Subscribe to Updates

    Get the latest creative news from FooBar about art, design and business.

    What's Hot

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆಕರ್ಷ್’ – ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವ
    Cultural

    ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆಕರ್ಷ್’ – ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವ

    May 22, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಹೊಸ ಚಿಗುರು ಹಳೆಬೇರು ಕೂಡಿರಲು ಮರ ಸೊಬಗು ಎಂಬಂತೆ ಕಳೆದ 13 ವರ್ಷಗಳಿಂದ ಸನಾತನ ಭಾರತೀಯ ಸಂಸ್ಕೃತಿಯ ಜೊತೆಗೆ ಆಧುನಿಕ ಶಿಕ್ಷಣವನ್ನು ಒದಗಿಸುತ್ತಾ, ಪಠ್ಯ-ಪಠ್ಯೇತರ ಚಟುವಟಿಕೆಗಳಿಗೆ ಮಹತ್ವ ಕೊಡುತ್ತಾ ಬಂದಿರುವ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ 2023-24ನೇ ವರ್ಷದ ವಾರ್ಷಿಕೋತ್ಸವ ‘ಆಕರ್ಷ್’ – ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವವು ದಿನಾಂಕ 18-05-2024ರಂದು ಸಂಪನ್ನಗೊಂಡಿತು.

    ವಿದ್ಯಾಕೇಂದ್ರದ ಸಂಸ್ಥಾಪಕರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮನ್ನು ತಾವೇ ಬೆಳೆಸಿಕೊಳ್ಳಬೇಕು ಎಂಬ ಕಿವಿಮಾತು ನುಡಿದರು.

    ಖ್ಯಾತ ಯಕ್ಷಗಾನ ಭಾಗವತರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಸತೀಶ್ ಶೆಟ್ಟಿ ಪಟ್ಲ, ಖ್ಯಾತ ಯೂಟ್ಯೂಬರ್ ಕಂಟೆಂಟ್ ಕ್ರಿಯೇಟರ್ ಧನರಾಜ್ ಆಚಾರ್ಯ, ಪ್ರಜ್ಞಾ ಧನರಾಜ್ ಹಾಗೂ ಹಿರಿಯ ವಿದ್ಯಾರ್ಥಿ ಹಾಗೂ ಬೆಂಗಳೂರು ರಾಜವೃಕ್ಷ ರಿಲೇಟರ್ಸ್ ಪೈ.ಲಿ.ನ ನಿರ್ದೇಶಕ ಲಕ್ಷ್ಮೀಶ್ ಕೆ.ಜೆ. ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು. ಮಕ್ಕಳ ಪ್ರತಿಭಾ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

    2023-24ನೇ ಸಾಲಿನ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು, ವಿವಿಧ ಕಾಲೇಜು ಮಟ್ಟದ, ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬಹುಮಾನಗಳನ್ನಿತ್ತು ಅಭಿನಂದಿಸಲಾಯಿತು. ಇದೇ ವೇಳೆ ದತ್ತಿನಿಧಿಯನ್ನು ವಿತರಿಸಲಾಯಿತು. ಶ್ರೀ ರಾಮ ವಿದ್ಯಾಕೇಂದ್ರವು ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಒಂದು ಹೊಸ ಹೆಜ್ಜೆಯನ್ನು ಇಡುವ ನಿಟ್ಟಿನಲ್ಲಿ ‘ರಾಮಧ್ವನಿ’ ಹೆಸರಿನ ಯೂಟ್ಯೂಬ್ ಚಾನೆಲ್‌ನ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.

    ಮಾಜಿ ಶಾಸಕರು, ಆಡಳಿತ ಮಂಡಳಿ ಸದಸ್ಯ ಪದ್ಮನಾಭ ಕೊಟ್ಟಾರಿ, ರಾ.ಸೇ. ಸಮಿತಿಯ ಕಾವೂರು ವಿಭಾಗದ ಕಾರ್ಯವಾಹಿಕಾ ಸದಸ್ಯೆ ಅಕ್ಷತಾ, ರಾ.ಸೇ. ಸಮಿತಿಯ ದಕ್ಷಿಣ ಪ್ರಾಂತ್ಯದ ಕಾರ್ಯಕಾರಿಣಿ ಸದಸ್ಯೆ ಕಮಲಾ ಪ್ರಭಾಕರ ಭಟ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಶ್ರೀ ಕೃಷ್ಣ ಪ್ರಸಾದ್ ಕಾಯರಕಟ್ಟೆ ವಾರ್ಷಿಕ ಚಟುವಟಿಕೆಗಳ ವರದಿ ವಾಚಿಸಿದರು. ಕು. ಚೈತ್ರಾ ಸ್ವಾಗತಿಸಿ, ಪುನೀತ್ ವಂದಿಸಿದರು. ಕು.ಪ್ರತೀಕಾ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Article‘ಹಿಂದಿ ಯುವ ಬರಹಗಾರರ ಶಿಬಿರ’ದ ಸಮಾರೋಪ ಸಮಾರಂಭ
    Next Article ಜಿಲ್ಲಾ ಕ.ಸಾ.ಪ. ವತಿಯಿಂದ ಕವಿಯಿತ್ರಿ ಕೆ.ಜಿ. ರಮ್ಯರಿಗೆ ‘ಗೌರಮ್ಮ ದತ್ತಿ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.