Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಭಾಸಾಪ ಬಂಟ್ವಾಳ ತಾಲೂಕು ಸಮಿತಿ ಪದಗ್ರಹಣ ಸಮಾರಂಭ ಹಾಗೂ ಉಪನ್ಯಾಸ
    Kannada

    ಅಭಾಸಾಪ ಬಂಟ್ವಾಳ ತಾಲೂಕು ಸಮಿತಿ ಪದಗ್ರಹಣ ಸಮಾರಂಭ ಹಾಗೂ ಉಪನ್ಯಾಸ

    June 19, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಾಹಿತ್ಯ ಮತ್ತು ಪರಿಸರ ಕುರಿತು ಉಪನ್ಯಾಸ ಕಾರ್ಯಕ್ರಮವು ದಿನಾಂಕ 18-06-2024 ರಂದು ನಡೆಯಿತು.

    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ಸಾಹಿತಿ ಗಣರಾಜ ಕುಂಬ್ಳೆ ಮಾತನಾಡಿ “ಪರಿಸರ ನಿತ್ಯನೂತನವಾಗಿದ್ದು ಪ್ರಕೃತಿಯೊಂದಿಗಿನ ಸಂವೇದನೆ ಕವಿಗಳಿಗೆ ಕವನ ರಚನೆಗೆ ಸ್ಪೂರ್ತಿಯಾಗುತ್ತದೆ.” ಎಂದು ಹೇಳಿದರು.
    ಕಲ್ಲಡ್ಕ ಪ. ಪೂ. ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉದ್ಯಮಿ ನಾಗೇಶ ಕಲ್ಲಡ್ಕ, ಪಿಂಗಾರ ಪತ್ರಿಕೆಯ ಸಂಪಾದಕ ರೇಮಂಡ್ ತಾಕೋಡೆ, ಶ್ರೀ ರಾಮ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಗೋಪಾಲ ಅಮ್ಟೂರು ಅತಿಥಿಗಳಾಗಿ ಭಾಗವಹಿಸಿದ್ದರು.
    ಅಭಾಸಾಪ ಮಂಗಳೂರು ವಿಭಾಗ ಸಂಯೋಜಕ ಸುಂದರ ಇಳಂತಿಲ ಜವಾಬ್ದಾರಿ ಘೋಷಣೆ ಮಾಡಿದರು. ಬಂಟ್ವಾಳ ತಾಲೂಕು ಸಮಿತಿ ಮಾಜಿ ‌ಅಧ್ಯಕ್ಷ ಜಯಾನಂದ ಪೆರಾಜೆ‌ ಅಭಿನಂದನೆ ಸಲ್ಲಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ. ಸುರೇಶ ನೆಗಳಗುಳಿ ಮಾತನಾಡಿ ಹೊಸ ಪದಾಧಿಕಾರಿಗಳಿಗೆ ಶುಭಹಾರೈಸಿದರು. ಅಧ್ಯಕ್ಷರಾಗಿ ಪ್ರೊ. ರಾಜಮಣಿ ರಾಮಕುಂಜ, ಉಪಾಧ್ಯಕ್ಷರಾಗಿ ಈಶ್ವರ ಪ್ರಸಾದ ಕನ್ಯಾನ, ಕಾರ್ಯದರ್ಶಿಯಾಗಿ ಮಧುರ ಕಡ್ಯ ಕಲ್ಲಡ್ಕ, ಕೋಶಾಧಿಕಾರಿಯಾಗಿ ಸೀತಾ ಲಕ್ಷ್ಮೀ ವರ್ಮ ವಿಟ್ಲ, ಮಾಧ್ಯಮ ಪ್ರಮುಖರಾಗಿ ಚಿನ್ನಪ್ಪ ವೀರಕಂಬ ಜವಾಬ್ದಾರಿ ಸ್ವೀಕರಿಸಿದರು.

    ವಿವಿಧ ಪದಾಧಿಕಾರಿಗಳಾಗಿ ರಮೇಶ ಬಾಯಾರ್, ಪಂಕಜಾ ಮುಡಿಪು, ಜಯಲಕ್ಷ್ಮೀ ಶೆಣೈ ಬಂಟ್ವಾಳ, ಜಯರಾಮ ಪಡ್ರೆ, ಹೇಮಾವತಿ ಸಾಲೆತ್ತೂರು, ವಿಶ್ವನಾಥ ಮಿತ್ತೂರು, ಅಶೋಕ ಕಲ್ಯಾಟೆ, ವಿನುತಾ ಮಾತಾಜಿ, ಪ್ರಶಾಂತ ಕಡ್ಯ ಇವರನ್ನು ನೇಮಿಸಲಾಯಿತು.
    ಕಾರ್ಯಕ್ರಮದ ಆರಂಭದಲ್ಲಿ ಸೀತಾಲಕ್ಷ್ಮೀ ಇವರ ಅಧ್ಯಕ್ಷತೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪರಿಸರ ಗೀತೆಗಳ ಗಾಯನ, ಬಳಿಕ ರಾಜಮಣಿ ರಾಮಕುಂಜ ಇವರ ಅಧ್ಯಕ್ಷತೆಯಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಂದ ಸ್ವರಚಿತ ಪರಿಸರ ಜಾಗೃತಿ ಕವನ ವಾಚನ, ಆನಂತರ ಜಯಾನಂದ ಪೆರಾಜೆ ಅಧ್ಯಕ್ಷತೆಯಲ್ಲಿ ಹಿರಿಯ ಕವಿಗಳ ಕವನ ವಾಚನ ಕಾರ್ಯಕ್ರಮ ನೆರವೇರಿತು.

    ಋತ್ವಿಕಾ ಮೊಳೆಯಾರ, ಸೋನಿತಾ ನೇರಳೆಕಟ್ಡೆ, ಕಾವ್ಯಾ ಕಲ್ಲಡ್ಕ, ಜಯರಾಮ ಪಡ್ರೆ, ಪಂಕಜಾ ಮುಡಿಪು, ಜಯಶ್ರೀ ಶೆಣೈ, ಹೇಮಾವತಿ ಸಾಲೆತ್ತೂರು, ಶಾಂತಾ ಪುತ್ತೂರು,ರೇಮಂಡ್ ಡಿ’ಕೂನ್ಹಾ ತಾಕೊಡೆ, ಡಾ ಸುರೇಶ ನೆಗಳಗುಳಿ ಇವರು ಸ್ವರಚಿತ ಪರಿಸರ ಸಂಬಂಧೀ ಕವನ ವಾಚಿಸಿದರು. ಕಾರ್ಯಕ್ರಮವು ಕುಮಾರಿ ದಾತ್ರಿಯವರ ಸರಸ್ವತಿ ಸ್ತುತಿಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮವನ್ನು ಅಪೂರ್ವ ಕಾರಂತರವರು ನಿರೂಪಿಸಿ, ಮಧುರ ಕಡ್ಯ ಅವರ ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಆರ್ಯಭಟ ಪ್ರಶಸ್ತಿ ಪ್ರದಾನ ಹಾಗೂ ನೃತ್ಯೋತ್ಸವ’ | ಜೂನ್ 23
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.