Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ್ರಿಯೇಟಿವ್ ಕಾಲೇಜಿನಲ್ಲಿ “ಅಕ್ಷರಯಾನ” ಯುವ ಬರಹಗಾರರ ಸಮ್ಮೇಳನ 
    Uncategorized

    ಕ್ರಿಯೇಟಿವ್ ಕಾಲೇಜಿನಲ್ಲಿ “ಅಕ್ಷರಯಾನ” ಯುವ ಬರಹಗಾರರ ಸಮ್ಮೇಳನ 

    October 31, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಾರ್ಕಳ : ಯುವ ಮತ್ತು ಪ್ರತಿಭಾವಂತ ಬರಹಗಾರರನ್ನು ಪ್ರೋತ್ಸಾಹಿಸಲು ಕ್ರಿಯೇಟಿವ್ ಪುಸ್ತಕ ಮನೆ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಯುವ ಬರಹಗಾರರ ಸಮ್ಮೇಳನ “ಅಕ್ಷರಯಾನ – ಬರವಣಿಗೆಯ ಮೆರವಣಿಗೆ” ಕಾರ್ಯಕ್ರಮವು 30 ಅಕ್ಟೋಬರ್ 2024ರಂದು ನಡೆಯಿತು.
    ಸಮಾರಂಭವನ್ನು  ಉದ್ಘಾಟಿಸಿದ ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್ ಮಾತನಾಡಿ “ಯುವ ಲೇಖಕರು ತಮ್ಮಲ್ಲಿನ ಪ್ರತಿಭೆ, ಸೃಜನಶೀಲತೆಗಳನ್ನು ಬಳಸಿಕೊಂಡು ತಮ್ಮ ಆಸಕ್ತಿಯ ಸಾಹಿತ್ಯ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಲು ಅಣಿಗೊಳ್ಳಬೇಕು.” ಎಂದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಪ್ರಾಸ್ತಾವಿಕ ನುಡಿಗಳನ್ನಾಡಿದರು.
    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಲೇಖಕ, ನಟ ಮತ್ತು ನಿರ್ದೇಶಕರಾದ ಶ್ರೀ ಪ್ರಕಾಶ್ ಬೆಳವಾಡಿ ಮಾತನಾಡಿ “ಯುವ ಸಾಹಿತಿಗಳು ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡರೆ ಸಾಹಿತ್ಯ ಕ್ಷೇತ್ರ ಸಮೃದ್ಧವಾಗಿ ಬೆಳೆಯಲು ಸಾಧ್ಯ.” ಎಂದು ಅಭಿಪ್ರಾಯ ಪಟ್ಟರು.
    ರಂಗ ಕಲಾವಿದ, ನಟ ಮತ್ತು ನಿರ್ದೇಶಕರಾದ ಶ್ರೀ ಎಸ್. ಎನ್. ಸೇತುರಾಮ್ ಮಾತನಾಡಿ “ಪಠ್ಯೇತರ ಚಟುವಟಿಕೆಗಳು ಮಕ್ಕಳ  ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿ. ಚಿಕ್ಕ ವಯಸ್ಸಿನಲ್ಲಿಯೇ ಸಾಹಿತ್ಯದ ಬೀಜ ಬಿತ್ತಿದರೆ ಜೀವನಪರ್ಯಂತ ಬೆಳೆಯುವ ಶಕ್ತಿ, ಆತ್ಮವಿಶ್ವಾಸ ಹಾಗೂ ಜ್ಞಾನ ಲಭಿಸುತ್ತದೆ.” ಎಂದರು.
    ಖ್ಯಾತ ಲೇಖಕ ಹಾಗೂ ಮೈಸೂರಿನ ಮಾಜಿ ಸಂಸದರಾದ  ಶ್ರೀ ಪ್ರತಾಪ್ ಸಿಂಹ ಮಾತನಾಡಿ “ಇಂತಹ ಕಾರ್ಯಕ್ರಮಗಳು ಯುವ ಜನಾಂಗವನ್ನು ಚಿಂತನೆಗೆ ಹಾಗೂ ಯೋಚನೆಗೆ ಹಚ್ಚುವ ಕಾರ್ಯಕ್ರಮವಾಗಿದೆ. ಅಮೂರ್ತ ಭಾವನೆಗಳಿಗೆ ಭಾಷೆಯ ಮೂಲಕ ಮೂರ್ತ ರೂಪವನ್ನು ಕೊಡುವ ಪ್ರಯತ್ನ ಮಾಡಿ.” ಎಂದು ಕರೆಕೊಟ್ಟರು.
     ಈ ಸುಸಂದರ್ಭದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದಿಂದ ವಿ. ರವಿಶಂಕರ ಹೆಗಡೆ ಇವರ ‘ಶ್ರೀ ಭಾರತ ಸಾವಿತ್ರೀ’,  ಸುದೀಕ್ಷಾ ಎಸ್. ಪೈ ಇವರ ‘ಬಚ್ಚಿಟ್ಟ ಭಾವಗಳು’, ಕೆ. ಅಶೋಕ್ ಕುಮಾರ್ ಇವರ ‘ಸೂರ್ಯಾಯ  ನಮಃ’, ಅನು ಬೆಳ್ಳೆ ಕಾವ್ಯ ನಾಮಾಂಕಿತ ರಾಘವೇಂದ್ರ ಬಿ. ರಾವ್ ಇವರ ‘ಬ್ಲ್ಯಾಕ್ ಕಾಫಿ’, ರಾಜೇಂದ್ರ ಭಟ್ ಇವರ ‘ರಾಜಪಥ’ ಎಂಬ ಐದು ಪುಸ್ತಕಗಳನ್ನು ಗಣ್ಯರ ಸಮ್ಮುಖದಲ್ಲಿ ಲೋಕರ್ಪಣೆಗೊಳಿಸಲಾಯಿತು.
     ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ಇವರು “ನನ್ನ ಬರವಣಿಗೆ, ನನ್ನ ಬದ್ಧತೆ” ಎಂಬ ವಿಚಾರದ ಕುರಿತು, ಎಸ್. ಎನ್. ಸೇತುರಾಮ್ ಇವರು “ಕನ್ನಡ ಸಾಹಿತ್ಯದ ವರ್ತಮಾನ ಮತ್ತು ಭವಿಷ್ಯ” ಎಂಬ ವಿಷಯದ ಬಗ್ಗೆ ಹಾಗೂ ಪ್ರಕಾಶ್ ಬೆಳವಾಡಿಯವರು. “ಸಾಹಿತ್ಯದ ಮೂಲಕ ರಾಷ್ಟ್ರೀಯ ಪ್ರಜ್ಞೆ ” ಎಂಬ ವಿಷಯದ ಕುರಿತು ಸಂವಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದ ಸಮನ್ವಯಕಾರರಾಗಿ ಖ್ಯಾತ ವಾಗ್ಮಿಗಳು ಮತ್ತು ಚಿಂತಕರಾದ ಪ್ರಕಾಶ್ ಮಲ್ಪೆ ಭಾಗವಹಿಸಿದರು.  ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಭೂಮಿ ಇದರ 60ರ ಸಂಭ್ರಮದ ಉದ್ಘಾಟನಾ ಸಮಾರಂಭ | ನವೆಂಬರ್ 03
    Next Article ಮಂಗಳೂರಿನಲ್ಲಿ ‘ಭಾಷಣ ಕಲೆಯ ಕಾರ್ಯಾಗಾರ’ | ನವೆಂಬರ್ 01
    roovari

    Add Comment Cancel Reply


    Related Posts

    ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ‘ಸಾಹಿತ್ಯ ಮತ್ತು ಕಲಾ ಉತ್ಸವ – 2025’ | ಜೂನ್ 28

    June 27, 2025

    ಯಕ್ಷಶಿಕ್ಷಣ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ

    June 26, 2025

    ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18

    June 16, 2025

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.